AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ ಪ್ರತಿನಿತ್ಯ 50 ಲಕ್ಷ ಕೋವಿಡ್​ ಕೇಸ್ ಪತ್ತೆ: ಜಗತ್ತಿನಾದ್ಯಂತ 10 ಲಕ್ಷ ಜನ ಕೊರೊನಾದಿಂದ ಸಾವನ್ನಪ್ಪುವ ಸಾಧ್ಯತೆ – ಸಚಿವ ಕೆ. ಸುಧಾಕರ

ಭಾರತದಲ್ಲಿ ಪ್ರತಿನಿತ್ಯ 50 ಲಕ್ಷ ಕೇಸ್ ಬರುತ್ತಿದ್ದು, ಶೇಕಡಾ 0.03ರಷ್ಟು ಕೊರೊನಾ ಸಕ್ರಿಯ ಪ್ರಕರಣ ದಾಖಲಾಗಿವೆ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ ಹೇಳಿದ್ದಾರೆ.

ದೇಶದಲ್ಲಿ ಪ್ರತಿನಿತ್ಯ 50 ಲಕ್ಷ ಕೋವಿಡ್​ ಕೇಸ್ ಪತ್ತೆ: ಜಗತ್ತಿನಾದ್ಯಂತ 10 ಲಕ್ಷ ಜನ ಕೊರೊನಾದಿಂದ ಸಾವನ್ನಪ್ಪುವ ಸಾಧ್ಯತೆ - ಸಚಿವ ಕೆ. ಸುಧಾಕರ
ಡಾ ಕೆ ಸುಧಾಕರ್, ಆರೋಗ್ಯ ಸಚಿವರು
TV9 Web
| Edited By: |

Updated on:Dec 23, 2022 | 6:36 PM

Share

ಬೆಂಗಳೂರು: ಬೇರೆ ದೇಶಕ್ಕೆ ಹೋಲಿಸಿದರೆ ಭಾರತದಲ್ಲಿ (India) ಕೊರೊನಾ (Covid) ನಿಯಂತ್ರಣದಲ್ಲಿದೆ. ಪ್ರತಿನಿತ್ಯ 50 ಲಕ್ಷ ಕೇಸ್ ಬರುತ್ತಿವೆ. ದೇಶದಲ್ಲಿ ಶೇಕಡಾ 0.03ರಷ್ಟು ಕೊರೊನಾ ಸಕ್ರಿಯ ಪ್ರಕರಣ ಇದೆ. ಅಮೆರಿಕ ಸಂಸ್ಥೆ ವರದಿ ಪ್ರಕಾರ ಜಗತ್ತಿನಾದ್ಯಂತ 10 ಲಕ್ಷ ಜನ ಕೊರೊನಾದಿಂದ ಸಾವನ್ನಪ್ಪುವ ಸಾಧ್ಯತೆ ಇದೆ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ (K. Sudhakar) ಹೇಳಿದ್ದಾರೆ.

ಕೊರೊನಾ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಎಲ್ಲ ರಾಜ್ಯಗಳ ಆರೋಗ್ಯ ಸಚಿವರ ಜತೆ ಕೇಂದ್ರದ ಆರೋಗ್ಯ ಸಚಿವರಾದ ಮನ್ ಸುಖ್ ಮಾಂಡವೀಯ ಅವರು ಇಂದು (ಡಿ.23) ಮಧ್ಯಾಹ್ನ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ಸಭೆಯಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ಕೂಡ ವಿಡಿಯೋ ಸಂವಾದದಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ:  ಯಾದಗಿರಿಯಲ್ಲಿ ಮಾಸ್ಕ್, ಬೂಸ್ಟರ್ ಡೋಸ್ ಕಡ್ಡಾಯ : ಡಿಹೆಚ್​ಓ ಡಾ.ಗುರುರಾಜ್ ಹಿರೇಗೌಡರ್

ಬಳಿಕ ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಆವರು ಚೀನಾ ಜನರು ಲಸಿಕೆ ಪಡೆಯುವುದರಲ್ಲಿ ನಮ್ಮಷ್ಟು ಯಶಸ್ಸು ಕಂಡಿಲ್ಲ. ಡಿ.27ರಂದು ರೋಗ ನಿರ್ವಹಣೆ ಕುರಿತು ಆಸ್ಪತ್ರೆಗಳಲ್ಲಿ ಮಾಕ್ ಡ್ರಿಲ್ ಮಾಡಲು ಕೇಂದ್ರ ಆರೋಗ್ಯ ಇಲಾಖೆ ಸೂಚಿಸಿದೆ. ರೂಪಾಂತರಿ ತಳಿ BF.7 ಒಬ್ಬರಿಂದ 17 ಜನರಿಗೆ ಹರಡುವ ವೈರಸ್​​​ ಆಗಿದೆ. ವಿದೇಶಿ ಪ್ರಯಾಣಿಕರು ಆರ್ಟಿಇಸಿಆರ್ ನೆಗೆಟಿವ್​ ವರದಿ ತರುವಂತೆ ಕಡ್ಡಾಯಗೊಳಿಸಿ ಎಂದು ಕೇಂದ್ರಕ್ಕೆ ಸಲಹೆ ನೀಡಿದ್ದೇನೆ ಎಂದು ಸುಧಾಕರ್​ ತಿಳಿಸಿದರು.

ರಾಜ್ಯದಲ್ಲಿ ಕೊರೊನಾ ಸಕ್ರಿಯ ಪ್ರಕರಣ ಸಂಖ್ಯೆ ಕಡಿಮೆ ಇದೆ

ಕೇಂದ್ರ ಆರೋಗ್ಯ ಇಲಾಖೆ ಸೋಂಕಿತರ ಪ್ರಮಾಣದ ವಿವರ ನೀಡಿದೆ. ರಾಜ್ಯದಲ್ಲಿ ಕೊರೊನಾ ಸಕ್ರಿಯ ಪ್ರಕರಣ ಸಂಖ್ಯೆ ಕಡಿಮೆ ಇದೆ. ಚೀನಾದಲ್ಲಿ ಪ್ರತಿದಿನವೂ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಚೀನಾದಲ್ಲಿ ಸೋಂಕು ಹೆಚ್ಚಾಗಲು ವ್ಯಾಕ್ಸಿನ್​ ಕಾರಣವಾಗಿರಬಹುದು. ಬೇರೆ ದೇಶಗಳ ಪ್ರಕರಣ ನೋಡಿದಾಗ ನಾವು ಎಚ್ಚರ ವಹಿಸಬೇಕು. ಕೊರೊನಾ ಟೆಸ್ಟಿಂಗ್ ಹೆಚ್ಚಿಸಲು ಕೇಂದ್ರ ಆರೋಗ್ಯ ಇಲಾಖೆ ಸೂಚಿಸಿದೆ ಎಂದು ಡಾ. ಕೆ ಸುಧಾರಕರ್​ ಹೇಳಿದ್ದಾರೆ.

ಇದನ್ನೂ ಓದಿ: ಚಳಿಗಾಲದ ಅಧಿವೇಶನಕ್ಕೆ ಆಡಳಿತ ಪಕ್ಷದ ಶಾಸಕರು, ಸಚಿವರು ಗೈರು: ಗಡಿ ಚರ್ಚೆ ವೇಳೆ ಹಾಜರಾಗದ ಬೆಳಗಾವಿ ಜನಪ್ರತಿನಿಧಿಗಳು

ಹೊಸ ವರ್ಷ ಆಚರಣೆ ಸಂದರ್ಭದಲ್ಲಿ ಗಮನಹರಿಸಲು ಕೇಂದ್ರ ಸೂಚನೆ

ಹೊಸ ವರ್ಷಾಚರಣೆಗೆ ಹೊಸ ಗೈಡ್‌ಲೈನ್ಸ್‌ ಜಾರಿ ವಿಚಾರವಾಗಿ ಮಾತನಾಡಿದ ಅವರು ಹೊಸ ವರ್ಷ ಆಚರಣೆ ಸಂದರ್ಭದಲ್ಲಿ ಗಮನಹರಿಸಲು ಕೇಂದ್ರ ಸೂಚನೆ ನೀಡಿದೆ. ಪರಿಸ್ಥಿತಿ ನೋಡಿಕೊಂಡು ಮುಂದಿನ ತೀರ್ಮಾನ ಮಾಡುತ್ತೇವೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:54 pm, Fri, 23 December 22

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ