AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಅರ್ಧದಷ್ಟು ಬಾಲಕಿಯರಿಗೆ ರಕ್ತಹೀನತೆ; ಏಕೆ ಹೀಗಾಯ್ತು?

ಕರ್ನಾಟಕದಲ್ಲಿ ಶೇ 49.4 ಬಾಲಕಿಯರು ರಕ್ತಹೀನತೆಯಿಂದ ಬಳಲುತ್ತಿದ್ದಾರೆ ಎಂಬ ಮಾಹಿತಿ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ-5 (ಎನ್​ಎಫ್​ಎಚ್​ಎಸ್) ವರದಿಯಲ್ಲಿ ಬಹಿರಂಗವಾಗಿದೆ.

ಕರ್ನಾಟಕದ ಅರ್ಧದಷ್ಟು ಬಾಲಕಿಯರಿಗೆ ರಕ್ತಹೀನತೆ; ಏಕೆ ಹೀಗಾಯ್ತು?
ಸಾಂದರ್ಭಿಕ ಚಿತ್ರ
preethi shettigar
| Edited By: |

Updated on:Dec 14, 2020 | 2:44 PM

Share

ದೆಹಲಿ: ಕರ್ನಾಟಕದಲ್ಲಿ ಶೇ 49.4 ಬಾಲಕಿಯರು ರಕ್ತಹೀನತೆಯಿಂದ ಬಳಲುತ್ತಿದ್ದಾರೆ ಎಂಬ ಮಾಹಿತಿ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ-5 (ಎನ್​ಎಫ್​ಎಚ್​ಎಸ್) ವರದಿಯಲ್ಲಿ ಬಹಿರಂಗವಾಗಿದೆ. ಕೇಂದ್ರ ಸರ್ಕಾರ ಶನಿವಾರ ಈ ಬಗ್ಗೆ ಅಧಿಕೃತ ಮಾಹಿತಿಯನ್ನು ಬಿಡುಗಡೆ ಮಾಡಿದ್ದು, 2015-16ರ ಸಾಲಿನಲ್ಲಿ ಈ ಅಂಕಿ ಅಂಶ ಶೇ 45.3ರಷ್ಟು ಇತ್ತು ಎಂದು ತಿಳಿಸಿದೆ. ಅಂದರೆ ಕರ್ನಾಟದಲ್ಲಿ ರಕ್ತಹೀನತೆಯಿಂದ ಬಳಲುತ್ತಿರುವ ಬಾಲಕಿಯರ ಪ್ರಮಾಣ ಕಳೆದ ಐದು ವರ್ಷಗಳಲ್ಲಿ ಶೇ 4ರಷ್ಟು ಹೆಚ್ಚಾಗಿದೆ.

ಮಹಿಳೆಯರ ದೈಹಿಕ ಸಮಸ್ಯೆಗಳು ಮತ್ತು ಮಕ್ಕಳ ಆರೋಗ್ಯದ ವಿಷಯದಲ್ಲಿ ಕರ್ನಾಟಕವು ಹಲವು ಸುಧಾರಣೆಗಳನ್ನು ಜಾರಿ ಮಾಡಿದೆ. 2015-16ರ ಸಾಲಿನಲ್ಲಿ ಪ್ರತಿ 1000 ಪುರುಷರಿಗೆ 979 ಮಹಿಳೆಯರು ಇದ್ದರು. ಈಗ ಮಹಿಳೆಯರ ಸಂಖ್ಯೆ 1034ಕ್ಕೆ ಏರಿಕೆಯಾಗಿದೆ. ಇದು ಉತ್ತಮ ಬೆಳವಣಿಗೆ.

ಆದರೆ ಶಿಶುಮರಣ ಪ್ರಮಾಣ ತಗ್ಗುವ ಬದಲು, ಶೇ 3ರಷ್ಟು ಹೆಚ್ಚಾಗಿದೆ ಎಂಬ ಆತಂಕಕಾರಿ ಅಂಶವೂ ಸಮೀಕ್ಷೆಯಲ್ಲಿ ಬಹಿರಂಗಗೊಂಡಿದೆ. ಈ ಹಿಂದೆ ಶಿಶುಮರಣ ಪ್ರಮಾಣ ಶೇ 15.8 ಇತ್ತು. ಈಗ ಶೇ 18.5ಕ್ಕೆ ಏರಿಕೆಯಾಗಿದೆ. ಮಗು ಜನಿಸಿದ ಮೊದಲ ಒಂದು ಗಂಟೆಯ ಒಳಗೆ ಎದೆಹಾಲು ಕುಡಿಸುವ ಪ್ರಮಾಣ ಶೇ 56ರಿಂದ ಶೇ 49ಕ್ಕೆ ಅಂದರೆ ಶೇ 7ರಷ್ಟು ಕಡಿಮೆಯಾಗಿದೆ.

ಕಬ್ಬಿಣ ಮತ್ತು ಫೋಲಿಕ್ ಆಮ್ಲದ ಮಾತ್ರೆಗಳನ್ನು ಸೇವಿಸುವ ಗರ್ಭ ಧರಿಸಿದ ಮಹಿಳೆಯರ ಸಂಖ್ಯೆಯೂ ಕಡಿಮೆಯಾಗಿದೆ. 5 ವರ್ಷಗಳ ಹಿಂದೆ ವರದಿ ಈ ಮಹಿಳೆಯರ ಪ್ರಮಾಣ ಶೇ 32.6 ಇತ್ತು. ಆದರೆ ಇದರ ಸಂಖ್ಯೆ ಈಗ ಶೇ 26.7 ಆಗಿದೆ. ರಾಜ್ಯದ ಪುರುಷರು ಮತ್ತು ಮಹಿಳೆಯರಲ್ಲಿ ಬೊಜ್ಜಿನ ಮಟ್ಟ ಹೆಚ್ಚಾಗುತ್ತಿರುವ ಆತಂಕಕಾರಿ ಮಾಹಿತಿಯೂ ಈ ಸಮೀಕ್ಷೆಯಲ್ಲಿದೆ.

ಕೋವಿಡ್-19 ಕಾರಣದಿಂದಾಗಿ ಉಳಿದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶವನ್ನು ಎರಡನೇ ಹಂತದಲ್ಲಿ ಸಮೀಕ್ಷೆ ಆರಂಭಿಸಲಾಗುವುದು. ಇದು 2021ರ ಮೇ ವೇಳೆಗೆ ಇದು ಪೂರ್ಣಗೊಳ್ಳುವ ನಿರೀಕ್ಷೆ ಇದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಎನ್​ಎಫ್​ಎಚ್​ಎಸ್​ನ 4ನೇ ಸಮೀಕ್ಷೆಗಿಂತ ತಾಯಿ ಮತ್ತು ಮಕ್ಕಳ ಆರೋಗ್ಯ ಸೂಚಕಗಳಲ್ಲಿ ಗಣನೀಯ ಸುಧಾರಣೆಯಾಗಿದೆ. ಒಟ್ಟಾರೆಯಾಗಿ ದೇಶದಾದ್ಯಂತ ಅಪೌಷ್ಟಿಕತೆಯ ಪ್ರಮಾಣ 2015-16ರಲ್ಲಿ ವರದಿಯಾದ ಪ್ರಮಾಣಕ್ಕಿಂತ ಕಡಿಮೆ ಇದೆ. ಸಮೀಕ್ಷೆ ನಡೆಸಿದ ಒಟ್ಟು 22 ರಾಜ್ಯಗಳ ಪೈಕಿ 18 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಶಿಶು ಮತ್ತು 5 ವರ್ಷಕ್ಕಿಂತ ಕಡಿಮೆ ವಯಸ್ಸಿನವರಲ್ಲಿ ಮರಣ ಪ್ರಮಾಣ ಕಡಿಮೆಯಾಗಿದೆ. ಅದರಲ್ಲಿ 16 ಕೆಜಿಗಿಂತ ಕಡಿಮೆ ತೂಕ ಹೊಂದಿರುವ 5 ವರ್ಷದೊಳಗಿನ ಮಕ್ಕಳ ಶೇಕಡಾವಾರು ಪ್ರಮಾಣದಲ್ಲಿ ಹೆಚ್ಚಳ ಕಂಡುಬಂದಿದೆ ಎಂದು ಸಚಿವಾಲಯ ತಿಳಿಸಿದೆ.

Published On - 2:39 pm, Mon, 14 December 20

ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್