AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋಟೆಲ್​ಗಳ ಕರ್ಮಕಾಂಡ ಬೆನ್ನಲ್ಲೇ ಮತ್ತೊಂದು ಮಹತ್ವದ ವಿಚಾರ ಬಯಲು: ರಾಜ್ಯದಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳಿಗೂ ಕೊರತೆ!

ಬೆಂಗಳೂರಿನ ಸ್ಟಾರ್‌ ಹೋಟೆಲ್‌ಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ ದಾಳಿ ನಡೆಸಿ ಕಳಪೆ ಹಾಗೂ ಅವಧಿ ಮೀರಿದ ಆಹಾರ ಪತ್ತೆ ಮಾಡುತ್ತಿರುವ ನಡುವೆಯೇ ರಾಜ್ಯದ ಆಹಾರ ಸುರಕ್ಷತಾ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇರುವ ವಿಚಾರ ಬಹಿರಂಗವಾಗಿದೆ. ಮಂಜೂರಾದ 210 ಆಹಾರ ಸುರಕ್ಷತಾ ಅಧಿಕಾರಿ ಹುದ್ದೆಗಳಲ್ಲಿ 113 ಹುದ್ದೆಗಳು ಖಾಲಿ ಇವೆ.

ಹೋಟೆಲ್​ಗಳ ಕರ್ಮಕಾಂಡ ಬೆನ್ನಲ್ಲೇ ಮತ್ತೊಂದು ಮಹತ್ವದ ವಿಚಾರ ಬಯಲು: ರಾಜ್ಯದಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳಿಗೂ ಕೊರತೆ!
ಆಹಾರ ಇಲಾಖೆ ಅಧಿಕಾರಿಗಳಿಂದ ಬೆಂಗಳೂರಿನ ಹೋಟೆಲ್​ನಲ್ಲಿ ತಪಾಸಣೆImage Credit source: tv9
ಗಣಪತಿ ಶರ್ಮಾ
|

Updated on: Aug 11, 2026 | 9:01 AM

Share

ಮುಖ್ಯಾಂಶಗಳು

  • ಆಹಾರ ಸುರಕ್ಷತಾ ಅಧಿಕಾರಿ ಹುದ್ದೆಗಳೇ ಶೇ 53 ಖಾಲಿ
  • 210 ಹುದ್ದೆಗಳಲ್ಲಿ 97 ಅಧಿಕಾರಿಗಳಷ್ಟೇ ಕಾರ್ಯನಿರ್ವಹಣೆ
  • 59 ಹುದ್ದೆ ಭರ್ತಿಗೆ ಅನುಮೋದನೆ, ನೇಮಕಾತಿ ಬಾಕಿ

ಬೆಂಗಳೂರು, ಆಗಸ್ಟ್ 11: ಬೆಂಗಳೂರಿನ (Bengaluru) ಫೈವ್ ಸ್ಟಾರ್‌ ಹೋಟೆಲ್‌ಗಳು ಸೇರಿದಂತೆ ಹೋಟೆಲ್‌ ಹಾಗೂ ರೆಸ್ಟೋರೆಂಟ್‌ಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ನಿರಂತರ ದಾಳಿ ನಡೆಸುತ್ತಿರುವ ಸಂದರ್ಭದಲ್ಲೇ ಇಲಾಖೆಯಲ್ಲಿನ ಸಿಬ್ಬಂದಿ ಕೊರತೆಯ ಅಂಶ ಬೆಳಕಿಗೆ ಬಂದಿದೆ. ರಾಜ್ಯದಲ್ಲಿ ಮಂಜೂರಾಗಿರುವ ಆಹಾರ ಸುರಕ್ಷತಾ ಅಧಿಕಾರಿ ಹುದ್ದೆಗಳ ಪೈಕಿ ಶೇ 53ರಷ್ಟು ಹುದ್ದೆಗಳು ಖಾಲಿ ಇರುವುದರಿಂದ ನಿಯಮಿತ ತಪಾಸಣೆ ಹಾಗೂ ಜಾರಿ ಕಾರ್ಯಕ್ಕೆ ತೊಂದರೆಯಾಗುತ್ತಿದೆ.

210 ಹುದ್ದೆ, ಕೆಲಸ ಮಾಡುತ್ತಿರುವುದು 97 ಅಧಿಕಾರಿಗಳು!

ರಾಜ್ಯದಲ್ಲಿ ಒಟ್ಟು 210 ಆಹಾರ ಸುರಕ್ಷತಾ ಅಧಿಕಾರಿ ಹುದ್ದೆಗಳು ಮಂಜೂರಾಗಿದ್ದು, ಈ ಪೈಕಿ ಕೇವಲ 97 ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಉಳಿದ 113 ಹುದ್ದೆಗಳು ಖಾಲಿ ಇವೆ. ಆಹಾರ ವಿಶ್ಲೇಷಕರು ಹಾಗೂ ಆಹಾರ ನಿರೀಕ್ಷಕರ ಹುದ್ದೆಗಳಲ್ಲಿಯೂ ಸಾಕಷ್ಟು ಹುದ್ದೆಗಳು ಖಾಲಿ ಇರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದ ಭಾರಿ ಪ್ರಮಾಣದಲ್ಲಿ ಹೋಟೆಲ್‌ ತಪಾಸಣೆ ನಡೆಯುತ್ತಿದೆ. ಇದೇ ವೇಳೆ ಸಿಬ್ಬಂದಿ ಕೊರತೆಯ ಪರಿಣಾಮವೂ ಗೋಚರಿಸಿದೆ. ಕಾರ್ಯಾಚರಣೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಧಿಕಾರಿಗಳನ್ನು ಬೆಂಗಳೂರಿಗೆ ನಿಯೋಜಿಸಲಾಗಿತ್ತು. ಸುಮಾರು 60 ಅಧಿಕಾರಿಗಳು ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿ ತಪಾಸಣೆಯಲ್ಲಿ ಪಾಲ್ಗೊಂಡಿದ್ದರು.

ಪದೇಪದೇ ದಾಳಿ ನಡೆಸಲು ಸಿಬ್ಬಂದಿ ಕೊರತೆ ಅಡ್ಡಿ

ಆಹಾರ ಸುರಕ್ಷತಾ ಇಲಾಖೆಯ ಸಿಬ್ಬಂದಿ ಕೊರತೆಯಿಂದ ಇಂತಹ ಬೃಹತ್ ಪ್ರಮಾಣದ ದಾಳಿಗಳನ್ನು ಪದೇಪದೇ ನಡೆಸುವುದು ಕಷ್ಟವಾಗಬಹುದು ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ. ಸಾಮಾನ್ಯವಾಗಿ ದೂರುಗಳ ಆಧಾರದ ಮೇಲೆ ಅಧಿಕಾರಿಗಳು ತಪಾಸಣೆ ನಡೆಸಿ ಆಹಾರ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸುತ್ತಾರೆ. ಆದರೆ ನಿರಂತರ ಹಾಗೂ ಪರಿಣಾಮಕಾರಿ ತಪಾಸಣೆಗೆ ಅಗತ್ಯ ಪ್ರಮಾಣದ ಸಿಬ್ಬಂದಿ ಬೇಕಾಗಿದೆ.

ಇತ್ತೀಚೆಗೆ ಬೆಂಗಳೂರಿನ ಹಲವು ಪ್ರತಿಷ್ಠಿತ ಹೋಟೆಲ್‌ಗಳ ಮೇಲೆ ನಡೆದ ದಾಳಿಯಲ್ಲಿ ಕೊಳೆತ ಮಾಂಸ, ಅವಧಿ ಮೀರಿದ ಆಹಾರ ಪದಾರ್ಥಗಳು, ಹಾಳಾದ ತರಕಾರಿ ಹಾಗೂ ನಿಯಮಬಾಹಿರವಾಗಿ ಬಳಸಿದ ಅಡುಗೆ ಎಣ್ಣೆ ಸೇರಿದಂತೆ ಹಲವು ವಸ್ತುಗಳು ಪತ್ತೆಯಾಗಿದ್ದವು. ಈ ಕಾರ್ಯಾಚರಣೆಯ ಬೆನ್ನಲ್ಲೇ ಇಲಾಖೆಯ ಮಾನವ ಸಂಪನ್ಮೂಲ ಕೊರತೆ ಮತ್ತೊಮ್ಮೆ ಚರ್ಚೆಗೆ ಬಂದಿದೆ.

59 ಹುದ್ದೆ ಭರ್ತಿಗೆ ಅನುಮೋದನೆ

ಜುಲೈನಲ್ಲಿ ಆಹಾರ ಸುರಕ್ಷತಾ ಇಲಾಖೆಯ 59 ಹುದ್ದೆಗಳನ್ನು ಭರ್ತಿ ಮಾಡಲು ಅನುಮೋದನೆ ನೀಡಲಾಗಿತ್ತು. ಆದರೆ ನೇಮಕಾತಿ ಪ್ರಕ್ರಿಯೆ ಇನ್ನೂ ಆರಂಭವಾಗಿಲ್ಲ. ಅದಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಜತೆ ಇಲಾಖೆ ಈ ಕುರಿತು ಕಾರ್ಯನಿರ್ವಹಿಸುತ್ತಿದೆ.

ಆಹಾರ ಸುರಕ್ಷತಾ ಅಧಿಕಾರಿ ಹುದ್ದೆಗೆ ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆಗಳನ್ನು ಬದಲಾಯಿಸುವಂತೆ ಕೆಇಎಗೆ ಮನವಿ ಮಾಡಲಾಗಿದೆ ಎಂದು ಆಹಾರ ಸುರಕ್ಷತಾ ಇಲಾಖೆ ಆಯುಕ್ತ ಕೆ. ಶ್ರೀನಿವಾಸ್ ತಿಳಿಸಿರುವುದಾಗಿ ‘ಡೆಕ್ಕನ್ ಹೆರಾಲ್ಡ್’ ವರದಿ ಮಾಡಿದೆ. ಅರ್ಹತಾ ಮಾನದಂಡದಲ್ಲಿ ಬದಲಾವಣೆ ಮಾಡಿದರೆ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅನುಕೂಲವಾಗಲಿದೆ ಎಂಬುದು ಇಲಾಖೆಯ ನಿರೀಕ್ಷೆಯಾಗಿದೆ.

ಆರೋಗ್ಯ ಸಚಿವ ಯುಟಿ ಖಾದರ್ ಹೇಳಿದ್ದೇನು?

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಕೂಡ ಸಿಬ್ಬಂದಿ ಕೊರತೆಯನ್ನು ಒಪ್ಪಿಕೊಂಡಿದ್ದು, ಹೆಚ್ಚಿನ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳುವ ಯೋಜನೆ ಇದೆ ಎಂದು ತಿಳಿಸಿದ್ದಾರೆ. ಕಳೆದ ಕೆಲವು ದಿನಗಳಲ್ಲಿ ರಾಜ್ಯದ ವಿವಿಧ ಭಾಗಗಳ ಅಧಿಕಾರಿಗಳು ಹಗಲು-ರಾತ್ರಿ ಕಾರ್ಯನಿರ್ವಹಿಸಿ ಬೆಂಗಳೂರಿನ ತಪಾಸಣಾ ಕಾರ್ಯದಲ್ಲಿ ಭಾಗವಹಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: 3 ದಿನಗಳಲ್ಲಿ ಬೆಂಗಳೂರಿನ 60 ಸ್ಟಾರ್ ಹೋಟೆಲ್‌ಗಳ ಮೇಲೆ ದಾಳಿ: 1 ವರ್ಷಕ್ಕೂ ಹಳೆಯ ಮಾಂಸ ಪತ್ತೆ!

ಸಿಬ್ಬಂದಿ ಕೊರತೆಯ ಮತ್ತೊಂದು ಪರಿಣಾಮವಾಗಿ ಕೆಲವು ಆಹಾರ ಮಳಿಗೆಗಳಲ್ಲಿ ನಿಷೇಧಿತ ಹಾಗೂ ಆರೋಗ್ಯಕ್ಕೆ ಹಾನಿಕಾರಕ ಬಣ್ಣದ ಏಜೆಂಟ್‌ಗಳ ಬಳಕೆಯನ್ನೂ ಸಂಪೂರ್ಣವಾಗಿ ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಹೀಗಾಗಿ ಇತ್ತೀಚಿನ ಹೋಟೆಲ್‌ ದಾಳಿಗಳ ಜೊತೆಗೆ ಆಹಾರ ಸುರಕ್ಷತಾ ಇಲಾಖೆಯಲ್ಲಿನ ಖಾಲಿ ಹುದ್ದೆಗಳನ್ನು ತ್ವರಿತವಾಗಿ ಭರ್ತಿ ಮಾಡಬೇಕೆಂಬ ಒತ್ತಡವೂ ಹೆಚ್ಚಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಜೆಡಿಎಸ್ ಪಾದಯಾತ್ರೆ ಬಗ್ಗೆ ಪಿಸು ಮಾತು ವೈರಲ್: ಸ್ಪಷ್ಟನೆ ನೀಡಿದ ವಿಜಯೇಂದ್ರ
ಜೆಡಿಎಸ್ ಪಾದಯಾತ್ರೆ ಬಗ್ಗೆ ಪಿಸು ಮಾತು ವೈರಲ್: ಸ್ಪಷ್ಟನೆ ನೀಡಿದ ವಿಜಯೇಂದ್ರ