AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಅಟ್ಟಹಾಸದ ನಡುವೆ ಸರ್ಕಾರಕ್ಕೆ ಶಾಕ್, ರಾಜೀನಾಮೆ ಪತ್ರ ಹಿಡಿದ ವೈದ್ಯರು

ಹಾಸನ: ಕೊರೊನಾ ಅಟ್ಟಹಾಸದ ನಡುವೆಯೇ ಸರ್ಕಾರಕ್ಕೆ ವೈದ್ಯರು ಶಾಕ್ ಕೊಟ್ಟಿದ್ದಾರೆ. ರಾಜ್ಯದ 550 ಗುತ್ತಿಗೆ ವೈದ್ಯರು ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಕಳೆದ ಮೂರ್ನಾಲ್ಕು ವರ್ಷಗಳಿಂದ ಸೇವೆಯಲ್ಲಿದ್ದರೂ ಖಾಯಂ ಮಾಡಿಲ್ಲ ಹಾಗೂ ವೇತನ ಹೆಚ್ಚಳ ಮಾಡಿಲ್ಲ, ಸೇವಾ ಭದ್ರತೆ ವದಗಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮೂಹಿಕ ರಾಜೀನಾಮೆ ನೀಡುವ ಮೂಲಕ ಸರ್ಕಾರಕ್ಕೆ ಒತ್ತಡ ಹೇರಲು ವೈದ್ಯರು ಮುಂದಾಗಿದ್ದಾರೆ. ಹಾಸನದ 35 ವೈದ್ಯರು ಸೇರಿ ರಾಜ್ಯದ 550 ವೈದ್ಯರ ಈ ರೀತಿಯ ನಿರ್ಧಾರ ಕೈಗೊಂಡಿದ್ದು, ಕೂಡಲೆ ತಮ್ಮ ಬೇಡಿಕೆ ಈಡೇರಿಕೆಗೆ […]

ಕೊರೊನಾ ಅಟ್ಟಹಾಸದ ನಡುವೆ ಸರ್ಕಾರಕ್ಕೆ ಶಾಕ್, ರಾಜೀನಾಮೆ ಪತ್ರ ಹಿಡಿದ ವೈದ್ಯರು
ಆಯೇಷಾ ಬಾನು
|

Updated on:May 21, 2020 | 4:03 PM

Share

ಹಾಸನ: ಕೊರೊನಾ ಅಟ್ಟಹಾಸದ ನಡುವೆಯೇ ಸರ್ಕಾರಕ್ಕೆ ವೈದ್ಯರು ಶಾಕ್ ಕೊಟ್ಟಿದ್ದಾರೆ. ರಾಜ್ಯದ 550 ಗುತ್ತಿಗೆ ವೈದ್ಯರು ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಕಳೆದ ಮೂರ್ನಾಲ್ಕು ವರ್ಷಗಳಿಂದ ಸೇವೆಯಲ್ಲಿದ್ದರೂ ಖಾಯಂ ಮಾಡಿಲ್ಲ ಹಾಗೂ ವೇತನ ಹೆಚ್ಚಳ ಮಾಡಿಲ್ಲ, ಸೇವಾ ಭದ್ರತೆ ವದಗಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮೂಹಿಕ ರಾಜೀನಾಮೆ ನೀಡುವ ಮೂಲಕ ಸರ್ಕಾರಕ್ಕೆ ಒತ್ತಡ ಹೇರಲು ವೈದ್ಯರು ಮುಂದಾಗಿದ್ದಾರೆ.

ಹಾಸನದ 35 ವೈದ್ಯರು ಸೇರಿ ರಾಜ್ಯದ 550 ವೈದ್ಯರ ಈ ರೀತಿಯ ನಿರ್ಧಾರ ಕೈಗೊಂಡಿದ್ದು, ಕೂಡಲೆ ತಮ್ಮ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿದ್ದಾರೆ. ಈ ಹಿಂದೆ 3 ವರ್ಷ ಸೇವೆ ಮಾಡಿದ ಗುತ್ತಿಗೆ ವೈದ್ಯರನ್ನು ಖಾಯಂ ಮಾಡಲಾಗುತ್ತಿತ್ತು. ಅದೇ ನಿಯಮ ಅನುಸರಿಸಿ ಸೇವೆ ಖಾಯಂ ಮಾಡಿ ಎಂದಿದ್ದಾರೆ.

ತಮ್ಮ ಬೇಡಿಕೆಗೆ ಸರ್ಕಾರ ಸ್ಪಂದಿಸದಿರೋದ್ರಿಂದ ಮನನೊಂದು ರಾಜೀನಾಮೆ ನೀಡೋದಾಗಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಹಾಗೂ ಕೊವಿಡ್ ಕಂಟಕದ ವೇಳೆ ಜೀವದ ಹಂಗು ತೊರೆದು ಎಲ್ಲ ವೈದ್ಯರು ಖಾಯಂ ವೈದ್ಯರಷ್ಟೇ ಶ್ರದ್ಧೆಯಿಂದ ಕರ್ತವ್ಯ ಮಾಡುತ್ತಿದ್ದೇವೆ. ಆದರೂ ತಮ್ಮನ್ನ ಕಡೆಗಣಿಸಲಾಗಿದೆ ಎಂದು ವೈದ್ಯರು ರಾಜೀನಾಮೆ ಪತ್ರದಲ್ಲಿ ತಮ್ಮ ನೋವನ್ನು ಹೇಳಿಕೊಂಡಿದ್ದಾರೆ.

Published On - 11:21 am, Thu, 21 May 20

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ