AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಬೈನಿಂದ ಬೆಂಗಳೂರಿಗೆ ಬಂದಿಳಿದ 5ನೇ ವಿಮಾನ: 3 ದಿನಗಳಲ್ಲಿ 1,500 ಮಂದಿ ಸುರಕ್ಷಿತವಾಗಿ ವಾಪಸ್

ಪ್ರವಾಸಕ್ಕೆಂದು ಹೋಗಿದ್ದವರು ಅರ್ಧಕ್ಕೆ ವಾಪಸ್ಸಾಗಿದ್ದಾರೆ. ಹನಿಮೂನ್‌ಗೆಂದು ತೆರಳಿದ್ದವರು ಭಯದಲ್ಲೇ ಹಿಂದಿರುಗಿದ್ದಾರೆ. ಇದೆಲ್ಲ ಇಸ್ರೇಲ್-ಇರಾನ್‌ ಯುದ್ಧದ ಕಾರಣ ದುಬೈನಲ್ಲೇ ಬಾಕಿ ಆಗಿ ಇದೀಗ ಬೆಂಗಳೂರಿಗೆ ಸುರಕ್ಷಿತವಾಗಿ ಬಂದವರ ಕಥೆಗಳು. ಒಟ್ಟಾರೆಯಾಗಿ ಕಳೆದ 3 ದಿನಗಳಲ್ಲಿ 1,500 ಮಂದಿ ದುಬೈಯಿಂದ ಸುರಕ್ಷಿತವಾಗಿ ಬೆಂಗಳೂರಿಗೆ ವಾಪಸಾಗಿದ್ದಾರೆ.

ದುಬೈನಿಂದ ಬೆಂಗಳೂರಿಗೆ ಬಂದಿಳಿದ 5ನೇ ವಿಮಾನ: 3 ದಿನಗಳಲ್ಲಿ 1,500 ಮಂದಿ ಸುರಕ್ಷಿತವಾಗಿ ವಾಪಸ್
3 ದಿನಗಳಲ್ಲಿ 1,500 ಮಂದಿ ಸುರಕ್ಷಿತವಾಗಿ ವಾಪಸ್Image Credit source: tv9
ನವೀನ್ ಕುಮಾರ್ ಟಿ
| Edited By: |

Updated on: Mar 05, 2026 | 6:54 AM

Share

ಬೆಂಗಳೂರು, ಮಾರ್ಚ್ 5: ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕ ಜಂಟಿ ದಾಳಿಯಿಂದ ದುಬೈ, ಅಬುಧಾಬಿ, ಜೆದ್ದಾ, ದೋಹಾ ಸೇರಿ ಹಲವೆಡೆ ವಿಮಾನ ನಿಲ್ದಾಣಗಳು ಬಂದ್ ಆಗಿವೆ. ಅಲ್ಲಿನ ಏರ್‌ಪೋರ್ಟ್‌ಗಳಲ್ಲೇ ಸಿಕ್ಕಿಹಾಕಿರುವ ಆಗಿರುವ ಸಾವಿರಾರು ಜನ ಪ್ರಯಾಣಿಕರನ್ನು ಕಳೆದ ಸೋಮವಾರ ರಾತ್ರಿಯಿಂದ ಎಮಿರೇಟ್ಸ್, ಎತಿಹಾದ್ ಮತ್ತು ಇಂಡಿಗೋ ಏರ್ಲೈನ್ಸ್‌ಗಳ ಮೂಲಕ ಬೆಂಗಳೂರಿಗೆ (Bangalore) ಕರೆತರಲಾಗುತ್ತಿದೆ. ದಿನಕ್ಕೆ ಒಂದು ಅಥವಾ ಎರಡು ವಿಮಾನಗಳು ದುಬೈ ಮತ್ತ ಅಬುಧಾಬಿಯಿಂದ ಬೆಂಗಳೂರಿಗೆ ಟೇಕ್ ಆಫ್ ಆಗುತ್ತಿವೆ. ತವರಿಗೆ ಬರಲು ನಾ ಮುಂದು ತಾ ಮುಂದು ಎಂದು ಪ್ರಯಾಣಿಕರು ಮುಗಿಬೀಳುತ್ತಿದ್ದಾರೆ. ಮಂಗಳವಾರ ರಾತ್ರಿ 5ನೇ ವಿಮಾನದಲ್ಲಿ 246 ಮಂದಿ ತಾಯ್ನಾಡಿಗೆ ಬಂದಿಳಿದಿದ್ದಾರೆ.

ಇನ್ನು ಅಮೆರಿಕಗೆ ತೆರಳುತ್ತಿದ್ದ ಮಹಿಳೆಯೊಬ್ಬರು ಫ್ಲೈಟ್‌ ಕ್ಯಾನ್ಸಲ್‌ ಆಗಿದ್ದರಿಂದ ದುಬೈನಲ್ಲೇ ಸಿಲುಕಿಕೊಂಡಿದ್ದರು. ಇದೀಗ ಯುಎಸ್‌ಗೆ ತೆರಳದೆ ಬೆಂಗಳೂರಿಗೆ ವಾಪಸ್‌ ಆಗಿದ್ದಾರೆ.

ಮತ್ತೊಂದೆಡೆ ಯುಎಸ್‌ನಿಂದ ಬಂದು ದುಬೈನಲ್ಲಿ 2 ದಿನ ಪ್ರವಾಸ ಮುಗಿಸಿ ಬರುವ ಪ್ಲ್ಯಾನ್‌ನಲ್ಲಿದ್ದವರು ವಿಧಿಯಿಲ್ಲದೆ ಬೆಂಗಳೂರಿಗೆ ಮರಳಿದ್ದಾರೆ.

ಇದನ್ನೂ ಓದಿ: ಇರಾನ್- ಇಸ್ರೇಲ್ ಯುದ್ಧದಿಂದ ತೈಲ ಬೆಲೆ ಏರಿಕೆ ಸುದ್ದಿ: ಭಟ್ಕಳದಲ್ಲಿ ಡೀಸೆಲ್, ಪೆಟ್ರೋಲ್​​ಗೆ ಮುಗಿಬಿದ್ದ ಜನ

ಕಳೆದ ಸೋಮವಾರ 2ನೇ ತಾರೀಕು ರಾತ್ರಿ 9.40ಕ್ಕೆ ಬಂದ ಮೊದಲ ಫ್ಲೈಟ್‌ನಲ್ಲಿ 213 ಜನ ವಾಪಸ್ ಆಗಿದ್ದರೆ, 3ನೇ ತಾರೀಕು ಮುಂಜಾನೆ 3 ಗಂಟೆಗೆಬಂದ 2ನೇ ಫ್ಲೈಟ್‌ನಲ್ಲಿ 490 ಜನ, ಹಾಗೇ ಅದೇ ದಿನ ಸಂಜೆ 7 ಗಂಟೆಗೆ ಬಂದ 3ನೇ ಫ್ಲೈಟ್‌ನಲ್ಲಿ 350 ಮಂದಿ, ನಾಲ್ಕನೇ ತಾರೀಕು ಮಧ್ಯರಾತ್ರಿ 1 ಗಂಟೆಗೆ ಬಂದ ಫ್ಲೈಟ್‌ನಲ್ಲಿ 200 ಜನ, ಉಳಿದಂತೆ ಬುಧವಾರ ಸಂಜೆ 7 ಗಂಟೆಗೆ ಬಂದ ವಿಮಾನದಲ್ಲಿ 246 ಪ್ರಯಾಣಿಕರು ವಾಪಸಾಗಿದ್ದು ಈವರೆಗೆ 1500 ಮಂದಿ ಸುರಕ್ಷಿತವಾಗಿ ಮರಳಿದ್ದಾರೆ.

ಸೀಮಿತ ವಿಮಾನಗಳು ದುಬೈನಿಂದ ಬರುತ್ತಿರುವುದರಿಂದ ಇನ್ನೂ ಸಾಕಷ್ಟು ಕನ್ನಡಿಗರು ಅಲ್ಲಿನ ಏರ್‌ಪೋರ್ಟ್‌ಗಳಲ್ಲೇ ಸಿಲುಕಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ನವೀನ್ ಕುಮಾರ್ ಟಿ
ನವೀನ್ ಕುಮಾರ್ ಟಿ

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ