AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಮುಂದೆ ಶರಣಾಗಿದ್ದ 6 ನಕ್ಸಲರ ಪೊಲೀಸ್ ಕಸ್ಟಡಿ ನಾಳೆ ಅಂತ್ಯ; ಮುಂದೇನು?

ಕರ್ನಾಟಕ ನಕ್ಸಲ್ ಮುಕ್ತ ರಾಜ್ಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. 2 ವಾರಗಳ ಹಿಂದೆ ಕರ್ನಾಟಕದ 6 ನಕ್ಸಲರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಂದೆ ಶರಣಾಗಿದ್ದರು. ತಮ್ಮ ಶಸ್ತ್ರಾಸ್ತ್ರಗಳನ್ನು ತೊರೆದು ಮುಖ್ಯವಾಹಿನಿಗೆ ಬಂದಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಮೊದಲ ಬಾರಿಗೆ ಈ ರೀತಿ ನಕ್ಸಲರು ಸಿಎಂ ಮುಂದೆ ಶರಣಾಗಿದ್ದಾರೆ. ಆ ನಕ್ಸಲರು ಸದ್ಯಕ್ಕೆ ಪೊಲೀಸರ ವಶದಲ್ಲಿದ್ದಾರೆ. ಅವರ ಪೊಲೀಸ್ ಕಸ್ಟಡಿ ನಾಳೆಗೆ ಅಂತ್ಯವಾಗಲಿದೆ.

ಸಿಎಂ ಮುಂದೆ ಶರಣಾಗಿದ್ದ 6 ನಕ್ಸಲರ ಪೊಲೀಸ್ ಕಸ್ಟಡಿ ನಾಳೆ ಅಂತ್ಯ; ಮುಂದೇನು?
Karnataka Naxalites
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Jan 22, 2025 | 8:02 PM

Share

ಬೆಂಗಳೂರು: ಕರ್ನಾಟಕದ 6 ನಕ್ಸಲರು ತಮ್ಮ ಶಸ್ತ್ರಾಸ್ತ್ರ ತ್ಯಜಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಂದೆ ಶರಣಾಗಿದ್ದರು. 6 ಮಂದಿ ನಕ್ಸಲರಾದ ಶೃಂಗೇರಿ ತಾಲೂಕಿನ ಮುಂಡಗಾರು ಗ್ರಾಮದ ಲತಾ, ಕಳಸ ತಾಲೂಕಿನ ಬಾಳೆಹೊಳೆ ಗ್ರಾಮದ ವನಜಾಕ್ಷಿ, ದಕ್ಷಿಣ ಕನ್ನಡ ಜಿಲ್ಲೆಯ ಕುತ್ಲೂರು ಸುಂದರಿ, ರಾಯಚೂರು ಮೂಲದ ಮಾರಪ್ಪ ಅರೋಲಿ, ಕೆ. ವಸಂತ, ಟಿ.ಎನ್. ಜೀಶಾ ಹಲವು ವರ್ಷಗಳ ಸಶಸ್ತ್ರ ಹೋರಾಟಕ್ಕೆ ವಿದಾಯ ಹೇಳಿ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಜನವರಿ 8ರಂದು ಶರಣಾಗಿದ್ದರು.

ಅವರನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿತ್ತು. ಆ 6 ನಕ್ಸಲರ ಪೊಲೀಸ್ ಕಸ್ಟಡಿ ಅವಧಿ ನಾಳೆಗೆ ಅಂತ್ಯವಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಾಳೆ ಎನ್​ಐಎ ಕೋರ್ಟ್​ಗೆ ನಕ್ಸಲರನ್ನು ಪೊಲೀಸರು ಹಾಜರುಪಡಿಸಲಿದ್ದಾರೆ. ಬೆಂಗಳೂರಿನ NIA ಕೋರ್ಟ್​​ಗೆ ನಕ್ಸಲರನ್ನು ಹಾಜರುಪಡಿಸಲಿದ್ದಾರೆ. 7 ದಿನ ಎನ್​ಐಎ ಕೋರ್ಟ್ ಚಿಕ್ಕಮಗಳೂರು ಪೊಲೀಸ್ ಕಸ್ಟಡಿಗೆ ನೀಡಿತ್ತು.

ಇದನ್ನೂ ಓದಿ: ಕೋಟೆಕಾರು ಬ್ಯಾಂಕ್ ದರೋಡೆಕೋರನ ಕಾಲಿಗೆ ಪೊಲೀಸ್ ಗುಂಡು, ಕ್ರೈಮ್ ಸ್ಪಾಟ್​ನಿಂದ ಟಿವಿ9 ವರದಿ

ನಾಳೆ ಕೇರಳ ಪೊಲೀಸರು ಆ ನಕ್ಸಲರನ್ನು ತಮ್ಮ ವಶಕ್ಕೆ ನೀಡುವಂತೆ ಮನವಿ ಮಾಡುವ ಸಾಧ್ಯತೆಯಿದೆ. ಎನ್​ಐಎ ಅಧಿಕಾರಿಗಳು ಕೂಡ 6 ನಕ್ಸಲರ ವಿಚಾರಣೆ ನಡೆಸಲು ಸಿದ್ಧತೆ ನಡೆಸಿದ್ದಾರೆ. ಮುಂಡಗಾರು ಲತಾ, ಸುಂದರಿ, ವನಜಾಕ್ಷಿ, ಜಯಣ್ಣ, ಜೀಶಾ, ವಸಂತ್ ಶರಣಾಗಿರುವ ನಕ್ಸಲರು.

ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಶರಣಾಗತಿಯಾಗಿದ್ದ 6 ನಕ್ಸಲರ ವಿಚಾರಣೆಯನ್ನು 7 ದಿನಗಳ‌ ಕಾಲ ಚಿಕ್ಕಮಗಳೂರು ಪೊಲೀಸರು ನಡೆಸಿದ್ದರು. ಹಳೇ ಕೇಸ್, ಶಸ್ತ್ರಾಸ್ತ್ರಗಳ ಸಂಬಂಧ ಪೊಲೀಸರು ತನಿಖೆ ನಡೆಸಿದ್ದಾರೆ. ನಾಳೆಗೆ ಪೊಲೀಸ್ ಕಸ್ಟಡಿ ಅವಧಿ ಮುಕ್ತಾಯವಾಗುವ ಹಿನ್ನೆಲೆಯಲ್ಲಿ ಬೆಂಗಳೂರಿನ NIA ಕೋರ್ಟ್ ಗೆ 6 ನಕ್ಸಲರನ್ನು ಹಾಜರು ಪಡಿಸಲಿದ್ದಾರೆ. ಕೊಪ್ಪ ಡಿವೈಎಸ್​ಪಿ ಬಾಲಾಜಿ ಸಿಂಗ್ ನೇತೃತ್ವದ ತಂಡದಿಂದ ತನಿಖೆ ನಡೆಸಲಾಗಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ