AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೂಪಾಂತರಿ ಕೊರೊನಾ; ಬ್ರಿಟನ್​ನಿಂದ ಬಂದ 6 ಮಂದಿಯಲ್ಲಿ ವೈರಸ್​ ಪಕ್ಕಾ.. ಬೆಂಗಳೂರಲ್ಲೂ ಮೂವರಿಗೆ ಸೋಂಕು

ನವೆಂಬರ್​ 25ರಿಂದ ಡಿಸೆಂಬರ್​ 23ರವರೆಗೆ ಬ್ರಿಟನ್​ನಿಂದ ಒಟ್ಟು 33,000 ಮಂದಿ ಭಾರತಕ್ಕೆ ಬಂದಿದ್ದಾರೆ. ವಿವಿಧ ಏರ್​ಪೋರ್ಟ್​ಗಳಿಗೆ ಬಂದು ತಲುಪಿದ್ದ ಅವರ ಮೇಲೆ ತೀವ್ರ ನಿಗಾ ಇಡಲಾಗಿತ್ತು. ಹಾಗೇ, ಅವರ ಸಂಪರ್ಕಕ್ಕೆ ಬಂದವರನ್ನೂ ಟ್ರ್ಯಾಕ್​ ಮಾಡುವ ಕಾರ್ಯ ನಡೆದಿತ್ತು. ಅದಾದ ಬಳಿಕ ಇವರಲ್ಲಿ 114 ಮಂದಿಯಲ್ಲಿ ಸಾಮಾನ್ಯ ಕೊರೊನಾ ವೈರಸ್ ಪತ್ತೆಯಾಗಿತ್ತು.

ರೂಪಾಂತರಿ ಕೊರೊನಾ; ಬ್ರಿಟನ್​ನಿಂದ ಬಂದ 6 ಮಂದಿಯಲ್ಲಿ ವೈರಸ್​ ಪಕ್ಕಾ.. ಬೆಂಗಳೂರಲ್ಲೂ ಮೂವರಿಗೆ ಸೋಂಕು
ಪ್ರಾತಿನಿಧಿಕ ಚಿತ್ರ
Lakshmi Hegde
| Edited By: |

Updated on:Dec 29, 2020 | 1:05 PM

Share

ದೆಹಲಿ: ಇತ್ತೀಚೆಗೆ ಬ್ರಿಟನ್​ನಿಂದ ಭಾರತಕ್ಕೆ ಆಗಮಿಸಿದ್ದ ಒಟ್ಟು 6 ಮಂದಿಯಲ್ಲಿ ಕೊರೊನಾ ರೂಪಾಂತರ ವೈರಸ್ ಇರುವುದು ಪತ್ತೆಯಾಗಿದ್ದು, ಆತಂಕ ಮೂಡಿಸಿದೆ. ಯುಕೆಯಲ್ಲಿ ರೂಪಾಂತರ ಕೊರೊನಾ ವೈರಸ್​ ಅಲೆ ಹೆಚ್ಚುತ್ತಿರುವುದರಿಂದ ಅಲ್ಲಿಂದ ಬರುವವರ ಮೇಲೆ ತೀವ್ರ ನಿಗಾ ಇಡಲಾಗುತ್ತಿದ್ದು, ಇತ್ತೀಚೆಗೆ ಆಗಮಿಸಿದ್ದವರ ಮಾದರಿಯನ್ನು ತಪಾಸಣೆಗೆ ಕಳಿಸಲಾಗಿತ್ತು. ಇಂದು ವರದಿ ಬಂದಿದ್ದು, ಆರು ಜನರಲ್ಲಿ ರೂಪಾಂತರಿ ಕೊರೊನಾ ಇರುವುದು ಪಕ್ಕಾ ಆಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

ಒಟ್ಟು ಆರು ಪ್ರಕರಣಗಳಲ್ಲಿ ಮೂವರ ಗಂಟಲುದ್ರವ, ರಕ್ತ ಮಾದರಿಯನ್ನು ಬೆಂಗಳೂರಿನ ನಿಮಾನ್ಸ್​ನಲ್ಲಿ ಮತ್ತು ಇಬ್ಬರದ್ದನ್ನು ಹೈದರಾಬಾದ್​ನ ಸೆಲ್ಯುಲರ್​ ಮತ್ತು ಅಣ್ವಿಕ ಜೀವಶಾಸ್ತ್ರ ಕೇಂದ್ರ ಹಾಗೂ ಮತ್ತೊಬ್ಬನ ಮಾದರಿಯನ್ನು ಪುಣೆಯ ನ್ಯಾಷನಲ್ ಇನ್ಸ್ಟಿಟ್ಯೂಟ್​ ಆಫರ್​ ವೈರಾಲಜಿಯಲ್ಲಿ ಪರೀಕ್ಷಿಸಲಾಗಿತ್ತು. ಸದ್ಯ ಆರೂ ಮಂದಿಗೆ ಪ್ರತ್ಯೇಕ ಐಸೋಲೇಶನ್​ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದೆ.

ನವೆಂಬರ್​ 25ರಿಂದ ಡಿಸೆಂಬರ್​ 23ರವರೆಗೆ ಬ್ರಿಟನ್​ನಿಂದ ಒಟ್ಟು 33,000 ಮಂದಿ ಭಾರತಕ್ಕೆ ಬಂದಿದ್ದಾರೆ. ವಿವಿಧ ಏರ್​ಪೋರ್ಟ್​ಗಳಿಗೆ ಬಂದು ತಲುಪಿದ್ದ ಅವರ ಮೇಲೆ ತೀವ್ರ ನಿಗಾ ಇಡಲಾಗಿತ್ತು. ಹಾಗೇ, ಅವರ ಸಂಪರ್ಕಕ್ಕೆ ಬಂದವರನ್ನೂ ಟ್ರ್ಯಾಕ್​ ಮಾಡುವ ಕಾರ್ಯ ನಡೆದಿತ್ತು. ಅದಾದ ಬಳಿಕ ಇವರಲ್ಲಿ 114 ಮಂದಿಯಲ್ಲಿ ಸಾಮಾನ್ಯ ಕೊರೊನಾ ವೈರಸ್ ಪತ್ತೆಯಾಗಿತ್ತು.

ಆದರೆ ಈಗ 6 ಮಂದಿಯಲ್ಲಿ ಹೊಸ ರೂಪಾಂತರ ವೈರಸ್ ಇರುವುದು ಗೊತ್ತಾಗಿದೆ. ಅದರಲ್ಲೂ ಬೆಂಗಳೂರಿನಲ್ಲಿಯೇ ಮೂವರಲ್ಲಿ ಕಾಣಿಸಿಕೊಂಡಿದ್ದು ರಾಜ್ಯದ ಜನರಲ್ಲಿ ಮತ್ತಷ್ಟು ಆತಂಕ ಮೂಡಿಸಿದೆ. ಸದ್ಯ ಆರು ಮಂದಿಯ ಆರೋಗ್ಯದ ಮೇಲೆ ನಿಗಾ ಇಡಲಾಗಿದ್ದು, ಅವರ ಸಂಪರ್ಕಕ್ಕೆ ಬಂದವರನ್ನೂ ಕ್ವಾರಂಟೈನ್​ಗೆ ಒಳಪಡಿಸಲು ವ್ಯವಸ್ಥೆ ಮಾಡಲಾಗಿದೆ. ಭಾರತ, ರೂಪಾಂತರ ಕೊರೊನಾ ವೈರಸ್ ಪತ್ತೆಯಾದ 14ನೇ ದೇಶವಾಗಿದೆ.

ರೂಪಾಂತರಿತ ವೈರಸ್​ಗೆ ಹೆಚ್ಚು ಶಕ್ತಿಯಿಲ್ಲ: ಉಪಮುಖ್ಯಮಂತ್ರಿ ಅಶ್ವತ್ಥ್​​ ನಾರಾಯಣ್​

Published On - 11:02 am, Tue, 29 December 20

ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ