AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ 60 ಪರ್ಸೆಂಟ್ ಕಮಿಷನ್: ಹೆಚ್​ಡಿ ಕುಮಾರಸ್ವಾಮಿ ಗಂಭೀರ ಆರೋಪ

ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಬಹಳ ಗಂಭೀರವಾದ ಆರೋಪವೊಂದನ್ನು ಮಾಡಿದ್ದು, ಅದೀಗ ರಾಜ್ಯ ರಾಜಕೀಯದಲ್ಲಿ ವಾಗ್ಯುದ್ಧಕ್ಕೆ ಕಾರಣವಾಗಿದೆ. ಕುಮಾರಸ್ವಾಮಿ ಆರೋಪ ಸಾಬೀತುಪಡಿಸಿ ತೋರಿಸಲಿ ಎಂದು ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. ಕುಮಾರಸ್ವಾಮಿ ಹೇಳಿದ್ದೇನು? ಕಾಂಗ್ರೆಸ್ ತಿರುಗೇಟೇನು ಎಂಬ ವಿವರ ಇಲ್ಲಿದೆ.

ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ 60 ಪರ್ಸೆಂಟ್ ಕಮಿಷನ್: ಹೆಚ್​ಡಿ ಕುಮಾರಸ್ವಾಮಿ ಗಂಭೀರ ಆರೋಪ
ಹೆಚ್​ಡಿ ಕುಮಾರಸ್ವಾಮಿ
ಕಿರಣ್​ ಹನಿಯಡ್ಕ
| Edited By: |

Updated on: Jan 06, 2025 | 6:56 AM

Share

ಬೆಂಗಳೂರು, ಜನವರಿ 6: ಅಂದು 40 ಪರ್ಸೆಂಟ್ ಸರ್ಕಾರದ ಆರೋಪ. ಈಗ 60 ಪರ್ಸೆಂಟ್ ಕಮಿಷನ್ ಸರ್ಕಾರದ ಆರೋಪ. ಒಟ್ಟಿನಲ್ಲಿ ರಾಜ್ಯ ರಾಜಕೀಯದಲ್ಲಿ ಮತ್ತೆ ಕಮಿಷನ್ ವಿಚಾರ ಸದ್ದು ಮಾಡುತ್ತಿದೆ. 40 ಪರ್ಸೆಂಟ್ ಕಮಿಷನ್ ಅಸ್ತ್ರ ಹೂಡಿ, ಬಿಜೆಪಿ ಸರ್ಕಾರವನ್ನು ಇಕ್ಕಟ್ಟಿನಲ್ಲಿ ಸಿಲುಕಿಸಿದ್ದ ಕಾಂಗ್ರೆಸ್‌ ವಿರುದ್ಧ ಈಗ ಹೊಸ ಗಂಭೀರ ಆರೋಪ ಕೇಳಿಬಂದಿದೆ. ಗುತ್ತಿಗೆದಾರನ ಆತ್ಮಹತ್ಯೆ ಜಟಾಪಟಿ ತಾರಕಕ್ಕೇರಿರುವ ಹೊತ್ತಿನಲ್ಲೇ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ 60 ಪರ್ಸೆಂಟ್ ಕಮಿಷನ್ ಕಿಡಿ ಹೊತ್ತಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದಲ್ಲಿ ಶೇ 60 ರಷ್ಟು ಕಮಿಷನ್ ಇದೆ ಎಂದು ಅವರ ಕಾಂಗ್ರೆಸ್ ಗುತ್ತಿಗೆದಾರರೇ ಹೇಳುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ. ವಿಧಾನಸೌಧದಲ್ಲೇ ಮಂತ್ರಿಗಳಿಗೆ ಕಮಿಷನ್ ಹೋಗುತ್ತಿದೆ ಎಂದು ಕಾಂಗ್ರೆಸ್‌ಗೆ ತಿವಿದಿದ್ದಾರೆ.

ಸಚಿವರಿಗೆ ಪರ್ಸೆಂಟೇಜ್ ಕೊಟ್ಟು ಆಮೇಲೆ ಹಣ ರಿಲೀಸ್: ಕುಮಾರಸ್ವಾಮಿ

ಪ್ರತಿ ಇಲಾಖೆಯಲ್ಲೂ ಸಚಿವರಿಗೆ ಮೊದಲು ಪರ್ಸೆಂಟೇಜ್ ಕೊಟ್ಟು ಆಮೇಲೆ ಹಣ ಬಿಡುಗಡೆ ಮಾಡುವ ಕೆಲಸ ಆಗುತ್ತಿದೆ ಎಂದು ಕುಮಾರಸ್ವಾಮಿ ಸ್ಫೋಟಕ ಆರೋಪ ಮಾಡಿದ್ದಾರೆ. ಇದಕ್ಕೆ ತಿರುಗೇಟು ಕೊಟ್ಟ ಸಿಎಂ ಸಿದ್ದರಾಮಯ್ಯ, ಸಾಬೀತು ಮಾಡಿ ನೋಡೋಣ ಎಂದು ಸವಾಲು ಹಾಕಿದ್ದಾರೆ.

ಕಾಂಗ್ರೆಸ್ ತಿರುಗೇಟು

ಸರ್ಕಾರದ ವಿರುದ್ಧ 60 ಪರ್ಸೆಂಟ್ ಲಂಚದ ಆರೋಪ ಮಾಡಿರುವ ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ನಾಯಕರು ಕಿಡಿಕಾರಿದ್ದಾರೆ. ಕುಮಾರಸ್ವಾಮಿ ಆರೋಪ ಸಾಬೀತುಪಡಿಸಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬಾಯಿ ಚಪಲಕ್ಕೆ ಮಾತನಾಡುತ್ತಿದ್ದಾರೆ ಎಂದು ಚಲುವರಾಯಸ್ವಾಮಿ ಹೇಳಿದ್ದಾರೆ. ಕುಮಾರಸ್ವಾಮಿ ಹತಾಶರಾಗಿದ್ದಾರೆ ಎಂದು ಸಚಿವ ಎಂ.ಬಿ.ಪಾಟೀಲ್ ತಿರುಗೇಟು ಕೊಟ್ಟಿದ್ದಾರೆ.

ಇದನ್ನೂ ಓದಿ: 5 ಗ್ಯಾರಂಟಿಗಳಿಗೆ ನನ್ನ ವಿರೋಧವಿಲ್ಲ, ನಿಲ್ಲಿಸಬೇಡಿ, ಮುಂದುವರೆಸಿ ಎಂದ ಕುಮಾರಸ್ವಾಮಿ

ಒಟ್ಟಿನಲ್ಲಿ, ಅಂದು 40 ಪರ್ಸೆಂಟ್ ಕಮಿಷನ್ ಸರ್ಕಾರ ಎಂದು ಬಿಜೆಪಿಯನ್ನು ಆರೋಪ ಮಾಡಿದ್ದ ಕಾಂಗ್ರೆಸ್ ವಿರುದ್ಧ ಇದೀಗ 60 ಪರ್ಸೆಂಟ್ ಆರೋಪ ಕೇಳಿಬಂದಿದೆ. ಇದು ಪ್ರಮುಖ ನಾಯಕರ ಮಧ್ಯೆ ಮಾತಿನ ಜಟಾಪಟಿಗೂ ವೇದಿಕೆಯಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ವಿಮಾನಯಾನ ಕ್ಷೇತ್ರದ ಪ್ರಗತಿ ಒತ್ತಿಹೇಳಿದ ಪ್ರಧಾನಿ ಮೋದಿ
ವಿಮಾನಯಾನ ಕ್ಷೇತ್ರದ ಪ್ರಗತಿ ಒತ್ತಿಹೇಳಿದ ಪ್ರಧಾನಿ ಮೋದಿ
ಮೈಸೂರಲ್ಲಿ ಸಿಎಂ ಡಿ.ಕೆ ಶಿವಕುಮಾರ್ ಭರ್ಜರಿ ರೋಡ್ ಶೋ
ಮೈಸೂರಲ್ಲಿ ಸಿಎಂ ಡಿ.ಕೆ ಶಿವಕುಮಾರ್ ಭರ್ಜರಿ ರೋಡ್ ಶೋ
ಶಿರಸಿ ನಗರದ ಹಲವು ಬಡಾವಣೆಗಳು ಮುಳುಗಡೆ, ನಿವಾಸಿಗಳ ಪರದಾಟ
ಶಿರಸಿ ನಗರದ ಹಲವು ಬಡಾವಣೆಗಳು ಮುಳುಗಡೆ, ನಿವಾಸಿಗಳ ಪರದಾಟ
ರಾಜ್ಯದಲ್ಲಿ ನಾಳೆ ನಡೆಯುವ ನೇಮಕಾತಿ ಪರೀಕ್ಷೆಗಳಿಗೆ ಬಿಗಿ ಭದ್ರತೆ
ರಾಜ್ಯದಲ್ಲಿ ನಾಳೆ ನಡೆಯುವ ನೇಮಕಾತಿ ಪರೀಕ್ಷೆಗಳಿಗೆ ಬಿಗಿ ಭದ್ರತೆ
ಸರ್ಕಾರಿ ಹುದ್ದೆಗಳ ನೇಮಕಾತಿಗೆ ಕಟ್ಟುನಿಟ್ಟಿನ ಕ್ರಮ; ಖರ್ಗೆ ಘೋಷಣೆ
ಸರ್ಕಾರಿ ಹುದ್ದೆಗಳ ನೇಮಕಾತಿಗೆ ಕಟ್ಟುನಿಟ್ಟಿನ ಕ್ರಮ; ಖರ್ಗೆ ಘೋಷಣೆ
ಖಾಲಿ ಸೈಟ್​ಗಳಲ್ಲಿ 5 ವರ್ಷದ ಒಳಗೆ ಕಟ್ಟಡ ಕಟ್ಟಲೇಬೇಕು: ಸಿಎಂ ಖಡಕ್ ಸೂಚನೆ
ಖಾಲಿ ಸೈಟ್​ಗಳಲ್ಲಿ 5 ವರ್ಷದ ಒಳಗೆ ಕಟ್ಟಡ ಕಟ್ಟಲೇಬೇಕು: ಸಿಎಂ ಖಡಕ್ ಸೂಚನೆ
‘ಪ್ರಜ್ವಲ್​​ಗೆ ಜಿಮ್ ಟ್ರೇನರ್ ಕೊಟ್ಟಿದ್ವಿ, ಆದರೂ ಅಚಿವ್​ ಮಾಡಿಲ್ಲ’
‘ಪ್ರಜ್ವಲ್​​ಗೆ ಜಿಮ್ ಟ್ರೇನರ್ ಕೊಟ್ಟಿದ್ವಿ, ಆದರೂ ಅಚಿವ್​ ಮಾಡಿಲ್ಲ’
'ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ': ಡಿಕೆ ಶಿವಕುಮಾರ್
'ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ': ಡಿಕೆ ಶಿವಕುಮಾರ್
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್