AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯ: ಸರ್ಕಾರದ ಸುತ್ತೋಲೆ ಪಾಲಿಸದ ಸಂಸ್ಥೆಗಳನ್ನು ಮುಚ್ಚಬಾರದು ಎಂದ ಕೋರ್ಟ್

ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ಸುತ್ತೋಲೆ ಪಾಲಿಸದ ಸಂಸ್ಥೆಗಳನ್ನು ಮುಚ್ಚಬಾರದು ಎಂದು ಹೈಕೋರ್ಟ್ ಏಕಸದಸ್ಯ ಪೀಠದಿಂದ ಮಧ್ಯಂತರ ಆದೇಶ ಹೊರಡಿಸಲಾಗಿದೆ. ವಾಣಿಜ್ಯ ಸಂಸ್ಥೆಗಳ ವಿರುದ್ಧ ಬಲವಂತದ ಕ್ರಮಕೈಗೊಳ್ಳದಂತೆ ಸೂಚನೆ ನೀಡಲಾಗಿದೆ.

ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯ: ಸರ್ಕಾರದ ಸುತ್ತೋಲೆ ಪಾಲಿಸದ ಸಂಸ್ಥೆಗಳನ್ನು ಮುಚ್ಚಬಾರದು ಎಂದ ಕೋರ್ಟ್
ಕನ್ನಡ ಬಳಕೆ ಕಡ್ಡಾಯ
Ramesha M
| Edited By: |

Updated on:Mar 18, 2024 | 5:57 PM

Share

ಬೆಂಗಳೂರು, ಮಾರ್ಚ್​​ 18: ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ (Kannada) ಬಳಕೆ ಕಡ್ಡಾಯ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ಸುತ್ತೋಲೆ ಪಾಲಿಸದ ಸಂಸ್ಥೆಗಳನ್ನು ಮುಚ್ಚಬಾರದು ಎಂದು ಹೈಕೋರ್ಟ್ ಏಕಸದಸ್ಯ ಪೀಠದಿಂದ ಮಧ್ಯಂತರ ಆದೇಶ ಹೊರಡಿಸಲಾಗಿದೆ. ವಾಣಿಜ್ಯ ಸಂಸ್ಥೆಗಳ ವಿರುದ್ಧ ಬಲವಂತದ ಕ್ರಮಕೈಗೊಳ್ಳದಂತೆ ಸೂಚನೆ ನೀಡಲಾಗಿದೆ. ಕರ್ನಾಟಕದಲ್ಲಿ ವ್ಯಾಪಾರ ಮಾಡುವಾಗ ಕನ್ನಡ ನಾಮಫಲಕವಿರಬೇಕು ಎಂದು ಹೈಕೋರ್ಟ್ ಹೇಳಿದೆ.

ಶೇಕಡಾ 60ರಷ್ಟು ಕನ್ನಡ ನಾಮಫಲಕ ಹಾಕಿದರೆ ಸಮಸ್ಯೆ ಏನು ಮಳಿಗೆಗಳ ಸಂಘದ ಪರ ವಕೀಲರಿಗೆ ನ್ಯಾ.ಎಂ.ನಾಗಪ್ರಸನ್ನ ಪ್ರಶ್ನೆ ಮಾಡಿದ್ದು, ‘ಕನ್ನಡ ಭಾಷೆ ಸಮಗ್ರ ಅಭಿವೃದ್ಧಿ ಕಾಯ್ದೆ-2022’ ಜಾರಿ ಸಮರ್ಪಕವಾಗಿಲ್ಲ. ಜಾರಿಯ ದಿನಾಂಕದ ಬಗ್ಗೆ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿಲ್ಲ. ಡಿಜಿಟಲ್ ನಾಮಫಲಕಗಳನ್ನು ಬದಲಿಸಲು ಕಾಲಾವಕಾಶ ಬೇಕು. ನಾಮಫಲಕದಲ್ಲಿ ಶೇ.60ರಷ್ಟು ಕನ್ನಡವಿಲ್ಲದಿದ್ದರೆ ಮುಚ್ಚಲಾಗುತ್ತಿದೆ ಎಂದು ಸರ್ಕಾರದ ಸುತ್ತೋಲೆ ಪ್ರಶ್ನಿಸಿ ವ್ಯಾಪಾರಿಗಳ ಸಂಘದಿಂದ ವಾದ ಮಾಡಲಾಗಿದೆ.‘

ಇದನ್ನೂ ಓದಿ: ವಿಧಾನಸಭೆ: ಸೂಚನಾ ಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಬಳಕೆ ಕಡ್ಡಾಯಗೊಳಿಸುವ ಮಸೂದೆ ಮಂಡನೆ

ಕಾಯ್ದೆ ಜಾರಿ ಬಗ್ಗೆ ಗೆಜೆಟ್ ಆಧಿಸೂಚನೆ ವಿವರ ನೀಡಿ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಏಕಸದಸ್ಯ ಪೀಠ ಸೂಚನೆ ನೀಡಿದೆ.

ರಾಜ್ಯದ ಅಂಗಡಿ ಮುಂಗಟ್ಟು ಮತ್ತು ವ್ಯಾಪಾರ ಮಳಿಗೆಳಿಗೆ ಸೇರಿದಂತೆ ಎಲ್ಲಾ ರೀತಿಯ ನಾಮಫಲಕಗಳಲ್ಲಿ ಕಡ್ಡಾಯವಾಗಿ ಶೇ 60 ರಷ್ಟು ಕನ್ನಡ ಬಳಕೆ ಮಾಡಬೇಕು. ಈ ಸಂಬಂಧ ರಾಜ್ಯ ಸರ್ಕಾರ ಇತ್ತೀಚೆಗೆ ಸುಗ್ರಿವಾಜ್ಞೆ ಹೊರಡಿಸಿತ್ತು. ಬಳಿಕ ಶೇ.60 ರಷ್ಟು ಕನ್ನಡ ಬಳಕೆ ಕಡ್ಡಾಯಗೊಳಿಸುವ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ಮಸೂದೆ, 2024 ಅನ್ನು ಕರ್ನಾಟಕ ವಿಧಾನಸಭೆ ಅಧಿವೇಶನದಲ್ಲಿ ಮಂಡಿಸಲಾಗಿತ್ತು.

ಇದನ್ನೂ ಓದಿ: ಕೊನೆಗೂ ಕನ್ನಡ ನಾಮಫಲಕ ಅಳವಡಿಕೆಗೆ ಸೈ ಎಂದ ಬೆಂಗಳೂರಿನ ಅಂಗಡಿ, ವಾಣಿಜ್ಯ ಮಳಿಗೆಗಳು

ನಾಮಫಲಕಗಳಲ್ಲಿ ಶೇ60 ರಷ್ಟು ಕನ್ನಡ ಭಾಷೆ ಪ್ರದರ್ಶಿಸಲು ವಿಫಲವಾದರೆ ದಂಡ ವಿಧಿಸಲಾಗುವುದು ಮತ್ತು ಟ್ರೇಡ್ ಲೈಸೆನ್ಸ್ ರದ್ದುಗೊಳಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ವಿಧಾನಸಭೆಯಲ್ಲಿ ಇತ್ತೀಚೆಗೆ ಹೇಳಿದ್ದರು.

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳ ನಾಮಫಲಕದಲ್ಲಿ ಶೇ 60ರಷ್ಟು ಕನ್ನಡ ಇರುವಂತೆ ನೋಡಿಕೊಳ್ಳಲು ಬಿಬಿಎಂಪಿ ಫೆಬ್ರವರಿ 28 ಕೊನೆಯ ಗಡುವು ವಿಧಿಸಿತ್ತು ಆದರೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಗಡುವನ್ನು ಎರಡು ವಾರಗಳ ಕಾಲ ವಿಸ್ತರಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:42 pm, Mon, 18 March 24

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ