AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಒಟ್ಟು ಎಷ್ಟು ಆನೆಗಳಿವೆ? ಈ ವರ್ಷ ಗಜರಾಜನಿಗೆ ಬಲಿಯಾದವರ ಸಂಖ್ಯೆ ಎಷ್ಟು?

ಕರ್ನಾಟಕದಲ್ಲಿ ಮಾನವ-ಆನೆ ಸಂಘರ್ಷ ಹೆಚ್ಚುತ್ತಿದ್ದು, ಈ ವರ್ಷ 45 ಜನರು ಆನೆಗಳ ದಾಳಿಯಲ್ಲಿ ಮೃತಪಟ್ಟಿದ್ದಾರೆ. ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಈ ಸಮಸ್ಯೆ ತೀವ್ರವಾಗಿದೆ. ಇದನ್ನು ತಡೆಯಲು, ಸರ್ಕಾರವು 392 ಕಿ.ಮೀ. ರೈಲ್ವೆ ಬ್ಯಾರಿಕೇಡ್ ನಿರ್ಮಿಸಲು 1000 ಕೋಟಿ ರೂಪಾಯಿಗಳ ಯೋಜನೆ ರೂಪಿಸಿದೆ. ಬಂಡೀಪುರದ ರಾತ್ರಿ ಸಂಚಾರದ ಬಗ್ಗೆ ಸದ್ಯ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.

ಕರ್ನಾಟಕದಲ್ಲಿ ಒಟ್ಟು ಎಷ್ಟು ಆನೆಗಳಿವೆ? ಈ ವರ್ಷ ಗಜರಾಜನಿಗೆ ಬಲಿಯಾದವರ ಸಂಖ್ಯೆ ಎಷ್ಟು?
ಸಚಿವ ಈಶ್ವರ್​ ಖಂಡ್ರೆ
ಹರೀಶ್ ಜಿ.ಆರ್​.
| Edited By: ವಿವೇಕ ಬಿರಾದಾರ|

Updated on: Apr 04, 2025 | 9:32 PM

Share

ಬೆಂಗಳೂರು, ಏಪ್ರಿಲ್​ 04: ಕರ್ನಾಟಕದಲ್ಲಿ ಸುಮಾರು 6395 ಕಾಡಾನೆಗಳಿವೆ (Elephants). ಕರ್ನಾಟಕದಲ್ಲಿ ಮಾನವ ಕಾಡಾನೆ ಸಂಘರ್ಷ ಹೆಚ್ಚಳವಾಗುತ್ತಿದೆ. ಹಾಸನ (Hassan) ಮತ್ತು ಕೊಡಗು (Kodagu) ಜಿಲ್ಲೆಗಳಲ್ಲೇ ಕಾಡಾನೆ ಹಾವಳಿ ಹೆಚ್ಚಿದೆ. ಕಾಡಾನೆ ದಾಳಿಯಿಂದ ಕಳೆದ ವರ್ಷ 65 ಜನ ಮೃತಪಟ್ಟಿದ್ದರು. ಈ ವರ್ಷ ಕಾಡಾನೆಗಳ ದಾಳಿಗೆ 45 ಜನ ಬಲಿಯಾಗಿದ್ದಾರೆ. ಬೇಲೂರು, ಹಾಸನ ತಾಲೂಕಿನಲ್ಲಿ ಹೆಚ್ಚು ಜನ ಮೃತಪಟ್ಟಿದ್ದಾರೆ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ್​ ಖಂಡ್ರೆ (Eshwar Khandre) ಹೇಳಿದರು.

ಕಾಡಾನೆ ಹಾವಳಿ ತಡೆಗೆ ಮೆಗಾ ಪ್ಲಾನ್​

ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಯಾವುದೇ ಬಿಗಿ ಕ್ರಮ ಕೈಗೊಂಡರೂ ಕಾಡಾನೆ ಹಾವಳಿ ತಡೆಗಟ್ಟಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ರೈಲ್ವೆ ಬ್ಯಾರಿಕೇಡ್ ಹಾಕಲು ಸರ್ಕಾರ ನಿರ್ಧರಿಸಿದ್ದೇವೆ. 392 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಹಾಕಲಿದ್ದೇವೆ. ವಿಶೇಷವಾಗಿ ಪಶ್ಚಿಮ ಘಟ್ಟಗಳಲ್ಲಿ ಈ ಯೋಜನೆ ಜಾರಿಗೆ ಬರಲಿದೆ. ಈ ಸಂಬಂಧ 1 ಸಾವಿರ ಕೋಟಿ ಕ್ಯಾಂಪಾ ಫಂಡ್ ನೀಡುವಂತೆ ಕೇಂದ್ರ ಸಚಿವರಿಗೆ ನಾವು ಮನವಿ ಮಾಡಿದ್ದೇವೆ ಎಂದು ತಿಳಿಸಿದರು.

ಬಂಡೀಪುರದಲ್ಲಿ ರಾತ್ರಿ ಸಂಚಾರಕ್ಕೆ ಕೋರಿ ಸಂಸದೆ ಪ್ರಿಯಾಂಕಾ ಗಾಂಧಿ ಪತ್ರ ವಿಚಾರವಾಗಿ ಮಾತನಾಡಿದ ಅವರು, ಸದ್ಯ ಯಾವುದೇ ಬದಲಾವಣೆಯಾಗಿಲ್ಲ, ಯಥಾಸ್ಥಿತಿ ಇದೆ. ಸದ್ಯದಲ್ಲೇ ಈ ಬಗ್ಗೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಭೆ ನಡೆಯುತ್ತೆ ಎಂದು ತಿಳಿಸಿದರು.

ಇದನ್ನೂ ಓದಿ
Image
ಆಪರೇಷನ್ ವಿಕ್ರಾಂತ್ ಸಕ್ಸಸ್: ಕಾಡಾನೆ ಸೆರೆ ಹಿಡಿದಿದ್ದೆ ರೋಚಕ
Image
ಹಾಸನ: ಸತತ ನಾಲ್ಕು ಗಂಟೆಗಳ ಬಳಿಕ ಕಾಡಾನೆ ಸೆರೆ
Image
ಕಾಡಾನೆ ದಾಳಿಗೆ ಮತ್ತೋರ್ವ ಮಹಿಳೆ ಸಾವು: 2 ತಿಂಗಳ ಅಂತರದಲ್ಲಿ 4 ಬಲಿ
Image
ಹಾಸನದಲ್ಲಿ ನಿಲ್ಲದ ಮಾನವ-ವನ್ಯಜೀವಿ ಸಂಘರ್ಷ: ಕಾಡಾನೆ ದಾಳಿಗೆ ಯುವಕ ಬಲಿ

ಇದನ್ನೂ ನೋಡಿ: ವಿದೇಶಿ ಪ್ರಜೆಯನ್ನು ಬಲಿ ಪಡೆದ ಕಾಡಾನೆ, ಸೊಂಡಿಲಿನಿಂದ ಎತ್ತಿ ಬಿಸಾಡಿರುವ ವಿಡಿಯೋ ನೋಡಿ

ಸದ್ಯಕ್ಕೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೆಪಿಸಿಸಿ ಅಧ್ಯಕ್ಷ ಸ್ಥಾನ ಖಾಲಿ ಇಲ್ಲ. ಯಾರನ್ನು ಎಲ್ಲಿ ಕೂರಿಸಬೇಕೆಂದು ಹೈಕಮಾಂಡ್​​ಗೆ ಗೊತ್ತಿದೆ. ಹೈಕಮಾಂಡ್ ಏನು ಜವಾಬ್ದಾರಿ ಕೊಡುತ್ತೆ ಅದನ್ನು ನಿರ್ವಹಿಸುತ್ತೇವೆ. ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿ ನನಗೆ ಆತ್ಮೀಯರು. ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಇಬ್ಬರೂ ಒಟ್ಟಿಗೆ ಕೆಲಸ ಮಾಡಿದ್ದೇವೆ. ಮುಂದೆಯೂ ನಾವು ಪಕ್ಷ ಸಂಘಟನೆಗಾಗಿ ಕೆಲಸ ಮಾಡುತ್ತೇವೆ. ನಮ್ಮಲ್ಲಿ ಯಾವುದೇ ಪೈಪೋಟಿ ಇಲ್ಲ. ಯಾರೇ ಅಧ್ಯಕ್ಷರಾದರೂ ನಮಗೆ ಖುಷಿ ಇದೆ. ಊಹಾಪೋಹ ಪ್ರಶ್ನೆಗಳಿಗೆ ನಾವು ಉತ್ತರಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್