AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿರತೆ ಜೊತೆ ಸೆಣಸಾಡಿದ ಬಾಲಕ: ಕುತ್ತಿಗೆಗೆ ಚಿರತೆ ಬಾಯಿ ಹಾಕಿದ್ದರೂ ಛಲ ಬಿಡದ ಛಲದಂಕಮಲ್ಲ!

ಒಂದು ಕ್ಷಣ ಕಕ್ಕಾಬಿಕ್ಕಿಯಾದ ಬಾಲಕ ಏನು ತೋಚದಂತೆ ಆಗಿದ್ದು, ಈ ವೇಳೆ ಚಿರತೆ ಬಾಲಕನ ಕುತ್ತಿಗೆ ಭಾಗವನ್ನ ಹಿಡಿದುಕೊಂಡು ಹೊತ್ತೊಯ್ಯಲು ಮುಂದಾಗಿದೆ. ತಕ್ಷಣ ಚಿರತೆಯಿಂದ ತಪ್ಪಿಸಿಕೊಳ್ಳಲು ಬಾಲಕ ಚಿರತೆ ಕಣ್ಣಿಗೆ ಕೈ ಹಾಕಿ ಪಾರಾಗಿದ್ದಾನೆ.

ಚಿರತೆ ಜೊತೆ ಸೆಣಸಾಡಿದ ಬಾಲಕ: ಕುತ್ತಿಗೆಗೆ ಚಿರತೆ ಬಾಯಿ ಹಾಕಿದ್ದರೂ ಛಲ ಬಿಡದ ಛಲದಂಕಮಲ್ಲ!
ಚಿರತೆ ವಿರುದ್ಧ ಹೋರಅಡಿದ ಬಾಲಕ ನಂದನ್
Follow us
preethi shettigar
| Updated By: ಸಾಧು ಶ್ರೀನಾಥ್​

Updated on: Feb 26, 2021 | 3:50 PM

ಮೈಸೂರು: ಗುಂಡಿಗೆ ಗಟ್ಟಿ ಇದ್ದರೆ ಎಂತಹ ಅಪಾಯವನ್ನಾದರೂ ಜಯಿಸಿಬಹುದು ಎಂಬುದಕ್ಕೆ ಸ್ಪಷ್ಟ ಉದಾಹರಣೆ ಇಲ್ಲಿದೆ. ಮೈಸೂರಿನ ಬಾಲಕನೊಬ್ಬ ಚಿರತೆ ಬಾಯಿಂದ ತಪ್ಪಿಸಿಕೊಂಡು ಬಂದಿದ್ದಾನೆ. ಚಿರತೆ ದಾಳಿ ಮಾಡಿ, ಹೊತ್ತುಕೊಂಡು ಹೋಗಿದ್ದಾಗ, ಚಿರತೆ ಕಣ್ಣಿಗೆ ತಿವಿದು ಬಾಲಕ ತಪ್ಪಿಸಿಕೊಳ್ಳಲು ಪ್ರಯತ್ನ ಪಟ್ಟಿದ್ದಾನೆ. ಇನ್ನು ಈತನಿಗೆ ಸಾಥ್ ನೀಡಿದ ತಂದೆ ಪ್ರಾಣದ ಹಂಗು ತೊರೆದು ಮಗನನ್ನು ಉಳಿಸಿದ್ದಾರೆ.

ಮೈಸೂರು ತಾಲೂಕಿನ ಕಡಕೊಳ ಗ್ರಾಮದ ರವಿಕುಮಾರ್ ಹಾಗೂ ಲಕ್ಷ್ಮಿ ಎಂಬುವವರ ಪುತ್ರ ನಂದನ್ ಸದ್ಯ 6ನೇ ತರಗತಿಯಲ್ಲಿ ಓದುತ್ತಿರುವ ಬಾಲಕ. ಪ್ರತಿ ದಿನ ಶಾಲೆ ಮುಗಿಸಿಕೊಂಡು ತಂದೆ ಜೊತೆ ಜಮೀನಿಗೆ ಹೋಗುತ್ತಿದ್ದ. ಅದೇ ರೀತಿ‌ ಕಳೆದ ಶನಿವಾರ ಕೂಡ ಹೋಗಿದ್ದಾನೆ. ಈ ವೇಳೆ ಮನೆಯಲ್ಲಿರುವ ಹಸುಗಳಿಗೆ ಹುಲ್ಲನ್ನು ತೆಗೆದುಕೊಳ್ಳಲು ಪ್ರಾರಂಭ ಮಾಡಿದ್ದು, ಆಗ ಏಕಾಏಕಿ ಬಾಲಕನ ಮೇಲೆ ಹಿಂದಿನಿಂದ ಚಿರತೆ ದಾಳಿ ಮಾಡಿದೆ.

leopard attack

ಬಾಲಕನ ಮೇಲೆ ಚಿರತೆ ದಾಳಿ

ಒಂದು ಕ್ಷಣ ಕಕ್ಕಾಬಿಕ್ಕಿಯಾದ ಬಾಲಕನಿಗೆ ಏನೂ ತೋಚದಂತೆ ಆಗಿದ್ದು, ಈ ವೇಳೆ ಚಿರತೆ ಬಾಲಕನ ಕುತ್ತಿಗೆಯ ಭಾಗವನ್ನ ಹಿಡಿದು ಹೊತ್ತೊಯ್ಯಲು ಮುಂದಾಗಿದೆ. ತಕ್ಷಣ ಚಿರತೆಯಿಂದ ತಪ್ಪಿಸಿಕೊಳ್ಳಲು ಬಾಲಕ ಪ್ರಯತ್ನ ಪಟ್ಟಿದ್ದಾನೆ. ಆದರೆ ಚಿರತೆ ಬಲವಾಗಿ ಹಿಡಿದುಕೊಂಡಿದ್ದರಿಂದ ಯುವಕನಿಗೆ ಬಿಡಿಸಿಕೊಳ್ಳಲು ಸಾಧ್ಯವಾಗಿಲ್ಲ. ಈ ವೇಳೆ ಚಿರತೆ ಕಣ್ಣಿಗೆ ಬೆರಳಿನಿಂದ ತಿವಿದು ಪಾರಾಗಲು ಪ್ರಯತ್ನ ಪಟ್ಟಿದ್ದು, ನಂತರ‌ ಅಲ್ಲೆ ಇದ್ದ ನಂದನ್ ತಂದೆ ಸ್ಥಳಕ್ಕೆ ಬಂದು ಚಿರತೆಯನ್ನು ಎಳೆದು ಮಗನನ್ನ ಚಿರತೆ ಬಾಯಿಂದ ಬಿಡಿಸಿದ್ದಾರೆ.

leopard attack

ಚಿರತೆ ದಾಳಿ ನಡೆಸಿದ ಸ್ಥಳದ ದೃಶ್ಯ

ಸದ್ಯ ಕಡಕೊಳದ ಬೀರೇಗೌಡನಹುಂಡಿ ಸುತ್ತಮುತ್ತ ಚಿರತೆ ಕಾಟ ಇದೆ ಎಂದು ಈ ಹಿಂದಿನಿಂದಲೂ ದೂರುಗಳು ಕೇಳಿ ಬಂದಿದ್ದವು. ಆದರೆ ಅರಣ್ಯ ಇಲಾಖೆ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದೆ. ಸದ್ಯ ಇನ್ನಾದರೂ ಅರಣ್ಯ ಇಲಾಖೆ ಆದಷ್ಟು ಬೇಗ ಚಿರತೆ ಸೆರೆ ಹಿಡಿಯಬೇಕು ಎಂಬುದು ಸ್ಥಳೀಯರ ಮನವಿ, ಆಗ್ರವಾಗಿದೆ. ಇನ್ನು ನಂದನ್ ತಾಯಿ ಕೂಡ ಇದೇ ವಿಚಾರ ಹೇಳುತ್ತಿದ್ದು, ನನ್ನ ಮಗನಿಗೆ ಆದಂತಹ ಆಘಾತ ಬೇರೆ ಮಕ್ಕಳಿಗೆ ಆಗಬಾರದು. ಆದಷ್ಟು ಬೇಗ ಚಿರತೆಯನ್ನ ಸೆರೆ ಹಿಡಿಯಿರಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಒಟ್ಟಾರೆ, ಚಿರತೆ ಬಾಯಿಗೆ ಆಹಾರವಾಗಬೇಕಿದ್ದ ಬಾಲಕ ದಿಟ್ಟ ಧೈರ್ಯ ಪ್ರದರ್ಶನ ತೋರಿ ಪ್ರಾಣ ಉಳಿಸಿಕೊಂಡಿದ್ದು, ಬಾಲಕನ ಶೌರ್ಯಕ್ಕೆ ನಿಜಕ್ಕೂ ಮೆಚ್ಚಲೆಬೇಕು.

ಇದನ್ನೂ ಓದಿ: ಹೆಂಡತಿ – ಮಗಳ ರಕ್ಷಣೆಗಾಗಿ ಚಿರತೆಯ ಹತ್ಯೆಗೈದ ಅಪ್ಪ, 15 ನಿಮಿಷ ಕಾದಾಡಿ ಆಸ್ಪತ್ರೆ ಸೇರಿದರು!

ಕರುಂಗಲಿ ಮಾಲೆಯ ಹಿಂದಿನ ರಹಸ್ಯ ಹಾಗೂ ಅದರ ಮಹತ್ವ ತಿಳಿಯಿರಿ
ಕರುಂಗಲಿ ಮಾಲೆಯ ಹಿಂದಿನ ರಹಸ್ಯ ಹಾಗೂ ಅದರ ಮಹತ್ವ ತಿಳಿಯಿರಿ
Daily horoscope: ಮಿಥುನ ರಾಶಿಯವರಿಗೆ ಐದು ಗ್ರಹಗಳ ಶುಭಫಲ
Daily horoscope: ಮಿಥುನ ರಾಶಿಯವರಿಗೆ ಐದು ಗ್ರಹಗಳ ಶುಭಫಲ
ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ