ಮಾದಕದ ಅಮಲಿನಲ್ಲಿ ತೇಲುತ್ತಿದ್ಯಾ ಉದ್ಯಾನನಗರಿ?

ಬೆಂಗಳೂರು: ನಗರದಲ್ಲಿ ಮಾದಕವ್ಯಸನಿಗಳ ಸಂಖ್ಯೆ ಹೆಚ್ಚಳವಾಗಿದೆ. ಎನ್‌ಡಿಪಿಎಸ್ (ಮಾದಕ ವಸ್ತು ನಿಯಂತ್ರಣ ಕಾಯ್ದೆ) ಆ್ಯಕ್ಟ್‌ನಡಿ ಬರೋಬ್ಬರಿ ಈ ವರ್ಷ 700 ಪ್ರಕರಣ ದಾಖಲಾಗಿವೆ. 2017ರಲ್ಲಿ 354 ಪ್ರಕರಣ, 2018ರಲ್ಲಿ 286 ಪ್ರಕರಣ ದಾಖಲಾಗಿದ್ವು. ಈ ಬಾರಿ 700 ಪ್ರಕರಣಗಳು ದಾಖಲಾಗಿವೆ. ವರ್ಷದಿಂದ ವರ್ಷಕ್ಕೆ ಮಾದಕವ್ಯಸನಿಗಳು ಹೆಚ್ಚಾಗುತ್ತಿದ್ದಾರೆ. ಉಡ್ತಾ ಪಂಜಾಬ್ ಮಾದರಿಯಲ್ಲಿ ಉಡ್ತಾ ಬೆಂಗಳೂರು ನಿರ್ಮಾಣವಾಗುತ್ತಿದೆ? ಮತ್ತೊಂದೆಡೆ ಸೈಬರ್ ಕ್ರೈಂ ಪ್ರಕರಣಗಳು ಸಹ ಹೆಚ್ಚಾಗುತ್ತಿವೆ. ಪ್ರಸಕ್ತ ವರ್ಷ ಬರೋಬ್ಬರಿ 10 ಸಾವಿರಕ್ಕೂ ಹೆಚ್ಚು ಪ್ರಕರಣ ದಾಖಲಾಗಿವೆ. ಕಳೆದ ವರ್ಷ […]

ಮಾದಕದ ಅಮಲಿನಲ್ಲಿ ತೇಲುತ್ತಿದ್ಯಾ ಉದ್ಯಾನನಗರಿ?
ಸಾಧು ಶ್ರೀನಾಥ್​

Updated on: Dec 17, 2019 | 9:32 AM

ಬೆಂಗಳೂರು: ನಗರದಲ್ಲಿ ಮಾದಕವ್ಯಸನಿಗಳ ಸಂಖ್ಯೆ ಹೆಚ್ಚಳವಾಗಿದೆ. ಎನ್‌ಡಿಪಿಎಸ್ (ಮಾದಕ ವಸ್ತು ನಿಯಂತ್ರಣ ಕಾಯ್ದೆ) ಆ್ಯಕ್ಟ್‌ನಡಿ ಬರೋಬ್ಬರಿ ಈ ವರ್ಷ 700 ಪ್ರಕರಣ ದಾಖಲಾಗಿವೆ. 2017ರಲ್ಲಿ 354 ಪ್ರಕರಣ, 2018ರಲ್ಲಿ 286 ಪ್ರಕರಣ ದಾಖಲಾಗಿದ್ವು. ಈ ಬಾರಿ 700 ಪ್ರಕರಣಗಳು ದಾಖಲಾಗಿವೆ. ವರ್ಷದಿಂದ ವರ್ಷಕ್ಕೆ ಮಾದಕವ್ಯಸನಿಗಳು ಹೆಚ್ಚಾಗುತ್ತಿದ್ದಾರೆ. ಉಡ್ತಾ ಪಂಜಾಬ್ ಮಾದರಿಯಲ್ಲಿ ಉಡ್ತಾ ಬೆಂಗಳೂರು ನಿರ್ಮಾಣವಾಗುತ್ತಿದೆ?

ಮತ್ತೊಂದೆಡೆ ಸೈಬರ್ ಕ್ರೈಂ ಪ್ರಕರಣಗಳು ಸಹ ಹೆಚ್ಚಾಗುತ್ತಿವೆ. ಪ್ರಸಕ್ತ ವರ್ಷ ಬರೋಬ್ಬರಿ 10 ಸಾವಿರಕ್ಕೂ ಹೆಚ್ಚು ಪ್ರಕರಣ ದಾಖಲಾಗಿವೆ. ಕಳೆದ ವರ್ಷ 5 ಸಾವಿರ ಪ್ರಕರಣಗಳು ದಾಖಲಾಗಿತ್ತು. ಕಳೆದ ವರ್ಷಕ್ಕೆ ಹೋಲಿಸಿದ್ರೆ ಈ ವರ್ಷ ದ್ವಿಗುಣವಾಗಿದೆ. ಆದ್ರೆ ಕೊಲೆ, ಡಕಾಯಿತಿ, ರಾಬರಿ ಪ್ರಕರಣಗಳು ಇಳಿಕೆಯಾಗಿವೆ. ಪ್ರಸಕ್ತ ವರ್ಷ 189 ಕೊಲೆ, 31 ಡಕಾಯಿತಿ, 461 ರಾಬರಿ ಹಾಗೂ 195 ಸರಗಳ್ಳತನ ಪ್ರಕರಣಗಳು ಮಾತ್ರ ದಾಖಲಾಗಿವೆ. ಕಳೆದ ವರ್ಷಕ್ಕೆ ಹೋಲಿಸಿದ್ರೆ ಇದು ತೀರಾ ಕಡಿಮೆಯಾಗಿದೆ.

Published On - 9:31 am, Tue, 17 December 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us