AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

700 ಕೋಟಿ ರೂ ಆರೋಪ ಸಾಬೀತಾದ್ರೆ ರಾಜಕೀಯ ನಿವೃತ್ತಿಯಾಗುವೆ, ಇಲ್ಲಾಂದ್ರೆ ನೀವಾಗಬೇಕು: ಮೋದಿಗೆ ಸಿಎಂ ಸವಾಲ್!

ಪ್ರಧಾನಿ ಮೋದಿ ಅವರು ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ 700 ಕೋಟಿ ರೂ. ಆರೋಪ ಮಾಡಿದ್ದಾರೆ. ಈ ಆರೋಪವನ್ನು ಸಾಬೀತುಪಡಿಸಿದರೆ ರಾಜಕೀಯ ನಿವೃತ್ತಿಯಾಗುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಆರೋಪ ಸಾಬೀತುಪಡಿಸಲು ಸಾಧ್ಯವಾಗದಿದ್ದರೆ ನೀವು ರಾಜಕೀಯ ನಿವೃತ್ತಿಯಾಗಬೇಕು ಸವಾಲು ಹಾಕಿದ್ದಾರೆ.

700 ಕೋಟಿ ರೂ ಆರೋಪ ಸಾಬೀತಾದ್ರೆ ರಾಜಕೀಯ ನಿವೃತ್ತಿಯಾಗುವೆ, ಇಲ್ಲಾಂದ್ರೆ ನೀವಾಗಬೇಕು: ಮೋದಿಗೆ ಸಿಎಂ ಸವಾಲ್!
700 ಕೋಟಿ ರೂ ಆರೋಪ ಸಾಬೀತಾದ್ರೆ ರಾಜಕೀಯ ನಿವೃತ್ತಿಯಾಗುವೆ, ಇಲ್ಲಾಂದ್ರೆ ನೀವಾಗಬೇಕು: ಮೋದಿಗೆ ಸಿಎಂ ಸವಾಲ್
TV9 Web
| Edited By: |

Updated on:Nov 10, 2024 | 8:38 PM

Share

ಹಾವೇರಿ, ನವೆಂಬರ್ 10: ಕಾಂಗ್ರೆಸ್ ಸರ್ಕಾರ ಕರ್ನಾಟಕದ ಅಬಕಾರಿ ಇಲಾಖೆಯಿಂದ 700 ಕೋಟಿ ರೂ. ಲೂಟಿ ಮಾಡಿದೆ ಎಂಬ ಆರೋಪವನ್ನು ಪ್ರಧಾನಿ ನರೇಂದ್ರ ಮೋದಿ ಸಾಬೀತು ಮಾಡಿದರೆ ನಾನು ರಾಜಕೀಯ ನಿವೃತ್ತಿಯಾಗುವೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ಶಿಗ್ಗಾವಿ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಒಂದು ವೇಳೆ ಆರೋಪ ಸಾಬೀತು ಪಡಿಸಲು ಆಗದಿದ್ದರೆ ನೀವು ರಾಜಕೀಯ ನಿವೃತ್ತಿಯಾಗಬೇಕು ಎಂದು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ನೇರ ಸವಾಲು ಹಾಕಿದ್ದಾರೆ.

ದೇಶದ ಪ್ರಧಾನಿ ಇಷ್ಟು ಸುಳ್ಳು ಹೇಳ್ತಾರಲ್ಲ ಎಂದು ಆಶ್ಚರ್ಯವಾಗುತ್ತೆ. ಇಂತಹ ಸುಳ್ಳು ಹೇಳುವಂತಹ ಪ್ರಧಾನಿ ಇತಿಹಾಸದಲ್ಲಿ ಬಂದಿರಲಿಲ್ಲ ಎಂದಿದ್ದಾರೆ. ಇನ್ನು ನಿನ್ನೆ ಇದೇ ವಿಚಾರವಾಗಿ ಟ್ವೀಟ್ ಮಾಡಿರುವ ಸಿಎಂ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅನುಭವಿಸಿದ ಸೋಲಿನ ದು:ಸ್ವಪ್ನದಿಂದ ಪ್ರಧಾನಿ ಮೋದಿ ಅವರು ಇನ್ನೂ ಹೊರಬಂದಿಲ್ಲ ಎಂದು ಕಾಣಿಸುತ್ತದೆ. ಹೋದಲ್ಲಿ ಬಂದಲ್ಲಿ ಮೋದಿಯವರು ಕರ್ನಾಟಕವನ್ನು ಮತ್ತೆ ಮತ್ತೆ ತಮ್ಮ ಭಾಷಣದಲ್ಲಿ ಎಳೆದು ತರುತ್ತಿದ್ದಾರೆ. ಕರ್ನಾಟಕದ ಮದ್ಯ ಮಾರಾಟಗಾರರು ನೀಡಿರುವ ರಾಜಕೀಯ ಪ್ರೇರಿತ ದೂರು ಅಷ್ಟು ಬೇಗ ಮೋದಿಯವರನ್ನು ತಲುಪಿ ಬಿಟ್ಟಿದೆ ಎಂದು ಕಿಡಿಕಾರಿದ್ದರು.

ವಕ್ಫ್ ನೋಟಿಸ್ ವಿಚಾರದಲ್ಲಿ ಯಾರೂ ಆತಂಕ ಪಡುವ ಅಗತ್ಯವಿಲ್ಲ

ವಕ್ಫ್ ಬೋರ್ಡ್​ಗೆ ಎಲ್ಲಾ ಜಾಗ ಕೊಟ್ಟುಬಿಡ್ತಾರೆಂದು 2014ರ ಬಿಜೆಪಿ ಚುನಾವಣಾ ಪ್ರಣಾಳಿಕೆಯಲ್ಲೇ ಭರವಸೆ ನೀಡಿದ್ದರು. ವಕ್ಫ್ ಆಸ್ತಿ ಅತಿಕ್ರಮಣ ತೆರವುಗೊಳಿಸುವುದಾಗಿ ಭರವಸೆ ನೀಡಿದ್ದರು. ಬಳಿಕ ಕಾಂಗ್ರೆಸ್ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಿಎಂ ಬಳಿಕ ಸಚಿವ ಜಮೀರ್ ಅಹಮ್ಮದ್ ಖಾನ್ ಬಿಗ್ ಶಾಕ್ ಕೊಟ್ಟ ರಾಜ್ಯಪಾಲ

ನಾನು ಈಗಾಗಲೇ ಹೇಳಿದ್ದೀನಿ, ನಿನ್ನೆ ಸರ್ಕಾರ ಆದೇಶವನ್ನು ಹಿಂಪಡೆದಿದೆ. ವಕ್ಫ್ ಆಸ್ತಿ ಸ್ವಾಧೀನ ಮಾಡಿಕೊಂಡು ರೈತರನ್ನು ಒಕ್ಕಲೆಬ್ಬಿಸಬಾರದು, ರೈತರಿಗೆ ನೋಟಿಸ್ ನೀಡಿದ್ದರೆ ಹಿಂಪಡೆಯುವಂತೆ ಆದೇಶ ಮಾಡಿದ್ದೇನೆ. ವಕ್ಫ್ ನೋಟಿಸ್ ವಿಚಾರದಲ್ಲಿ ಯಾರೂ ಆತಂಕ ಪಡುವ ಅಗತ್ಯವಿಲ್ಲ. ಯಾವ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ, ಜಮೀನು ತೆರವು ಮಾಡುವುದಿಲ್ಲ. ವಿಚಾರಣೆ ಇಲ್ಲದೆ ವಕ್ಫ್ ಎಂದು ನೋಟಿಸ್ ನೀಡಿದ್ರೆ ರದ್ದು ಮಾಡುತ್ತೇವೆ ಎಂದಿದ್ದಾರೆ.

ಇಂಥವರಿಗೆ ವೋಟ್ ಹಾಕಬೇಕಾ?

ಕರ್ನಾಟಕ ಕಾಂಗ್ರೆಸ್ ಪಕ್ಷದ ಎಟಿಎಂ ಆಗಿದೆ ಎಂದು ಹೇಳಿಕೆ ವಿಚಾರವಾಗಿ ಮಾತನಾಡಿದ್ದು, 2,000 ಕೋಟಿ ರೂ. ಬಿಎಸ್​ ಯಡಿಯೂರಪ್ಪ ಸಿಎಂ ಆಗಿದ್ದರೆಂದು ಯತ್ನಾಳ್ ಹೇಳುತ್ತಾರೆ. ಬಸವರಾಜ ಬೊಮ್ಮಾಯಿ 2,000 ಕೋಟಿ ರೂ. ಕೊಟ್ಟು ಸಿಎಂ ಆಗಿದ್ದರು. ವಿಜಯೇಂದ್ರ ಕೂಡ ದುಡ್ಡು ಕೊಟ್ಟು ರಾಜ್ಯ ಬಿಜೆಪಿ ಅಧ್ಯಕ್ಷರಾಗಿದ್ದಾರೆ. ಇಂಥವರಿಗೆ ವೋಟ್ ಹಾಕಬೇಕಾ ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ಟೆಂಡರ್ ಕರೆಯದೆ, ಸಂಪುಟದ ಒಪ್ಪಿಗೆ ಇಲ್ಲದೆ ಪ್ರತಿ ಪಿಪಿಇ ಕಿಟ್​ಗೆ 2,147 ರೂ. ನೀಡಿ ಚೀನಾದಿಂದ ಯಡಿಯೂರಪ್ಪ, ಶ್ರೀರಾಮುಲು ಸೇರಿ 3 ಲಕ್ಷ ಪಿಪಿಇ ಕಿಟ್ ಖರೀದಿ ಖರೀದಿಸಿದ್ದಾರೆ. ಪ್ರಧಾನಿ ಮೋದಿ ಚೀನಾದಿಂದ ಯಾವುದೇ ವಸ್ತು ಖರೀದಿಸಲ್ಲವೆಂದು ಹೇಳುತ್ತಾರೆ. ಪಿಪಿಇ ಕಿಟ್ ಖರೀದಿ ಹೆಸರಿನಲ್ಲಿ 2,000 ಕೋಟಿ ರೂ. ಲೂಟಿ ಮಾಡಿದ್ದಾರೆ ಎಂದು ವಾಗ್ದಾಳಿ ಮಾಡಿದ್ದಾರೆ.

ಕ್ರಿಮಿನಲ್ ಕೇಸ್ ಹಾಕಿಸುತ್ತೇವೆ

ಕೊರೊನಾ ವೇಳೆ ಆಕ್ಸಿಜನ್ ಪೂರೈಸದೆ 50,000 ಜನ ಮೃತಪಟ್ಟಿದ್ದಾರೆ. ಚಾಮರಾಜನಗರದಲ್ಲಿ ಆಕ್ಸಿಜನ್ ಇಲ್ಲದೆ 36 ಜನ ಸತ್ತುಹೋಗಿದ್ದರು. ಆದರೆ ಸುಧಾಕರ್ ಇಬ್ಬರು ಅಥವಾ ಮೂವರು ಸತ್ತಿರಬಹುದು ಅಂದಿದ್ದರು. ಇಂಥವರು ಬೇಕಾ, ಮತ್ತೆ ಬಿಜೆಪಿಯವರು ಅಧಿಕಾರಕ್ಕೆ ಬರಬೇಕಾ? ಗುತ್ತಿಗೆದಾರರಿಂದ 40% ಕಮಿಷನ್ ಪಡೀತಿದ್ದಾರೆಂದು ಕೆಂಪಣ್ಣ ಹೇಳಿದ್ದರು. ನಾಗಮೋಹನ ದಾಸ್ ವರದಿ ಬರಲಿ, ಕ್ರಿಮಿನಲ್ ಕೇಸ್ ಹಾಕಿಸುತ್ತೇವೆ. ಬೊಮ್ಮಾಯಿ ಇರಲಿ ಮತ್ತಾರೇ ಇರಲಿ, ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುತ್ತೇವೆ ಎಂದಿದ್ದಾರೆ.

ವರದಿ: ಅಣ್ಣಪ್ಪ ಬಾರ್ಕಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:36 pm, Sun, 10 November 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್