AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಡಿಕೆಗಿಂತ ಶೇಕಡಾ 78ರಷ್ಟು ಹೆಚ್ಚುವರಿ ಮಳೆ, 27.5 ಲಕ್ಷ ರೈತರಿಗೆ ಬರ ಪರಿಹಾರ: ಕೃಷಿ ಸಚಿವ ಮಾಹಿತಿ

ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಸಚಿವ ಕೃಷ್ಣ ಭೈರೇಗೌಡ, ಜೂ.2ರಂದು ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದೆ. ರಾಜ್ಯದಲ್ಲಿ ವಾಡಿಕೆಗಿಂತ ಶೇಕಡಾ 78ರಷ್ಟು ಹೆಚ್ಚುವರಿ ಮಳೆಯಾಗಿದೆ ಎಂದಿದ್ದಾರೆ. ಅದೇ ರೀತಿಯಾಗಿ ಮೇ ಮೊದಲ ವಾರ 27.5 ಲಕ್ಷ ರೈತರಿಗೆ 2,451 ಕೋಟಿ ರೂ. ಬರ ಪರಿಹಾರ ನೀಡಿದ್ದೇವೆ. ನೀರು ಬರದೆ ಬೆಳೆಹಾನಿ ಆದ ರೈತರಿಗೆ ಪರಿಹಾರ ಕೊಡಲು ತೀರ್ಮಾನಿಸಿದ್ದೇವೆ ಎಂದರು.

ವಾಡಿಕೆಗಿಂತ ಶೇಕಡಾ 78ರಷ್ಟು ಹೆಚ್ಚುವರಿ ಮಳೆ, 27.5 ಲಕ್ಷ ರೈತರಿಗೆ ಬರ ಪರಿಹಾರ: ಕೃಷಿ ಸಚಿವ ಮಾಹಿತಿ
ವಾಡಿಕೆಗಿಂತ ಶೇಕಡಾ 78ರಷ್ಟು ಹೆಚ್ಚುವರಿ ಮಳೆ, 27.5 ಲಕ್ಷ ರೈತರಿಗೆ ಬರ ಪರಿಹಾರ: ಕೃಷಿ ಸಚಿವ ಮಾಹಿತಿ
ಕಿರಣ್​ ಹನಿಯಡ್ಕ
| Edited By: |

Updated on: Jun 10, 2024 | 6:20 PM

Share

ಬೆಂಗಳೂರು, ಜೂನ್​ 10: 5 ಜಿಲ್ಲೆಗಳಲ್ಲಿ ವಾಡಿಕೆ ಮಳೆಯಾದರೆ, 4 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ (Rain) ಆಗಿದೆ. ಆ ಮೂಲಕ ರಾಜ್ಯದಲ್ಲಿ ವಾಡಿಕೆಗಿಂತ ಶೇಕಡಾ 78ರಷ್ಟು ಹೆಚ್ಚುವರಿ ಮಳೆಯಾಗಿದೆ ಎಂದು ಕಂದಾಯ ಇಲಾಖೆ ಸಚಿವ ಕೃಷ್ಣ ಭೈರೇಗೌಡ (Krishna Byre Gowda) ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ವರ್ಷದ ಮುಂಗಾರು ಪರಿಸ್ಥಿತಿಯ ಬಗ್ಗೆ ಪರಿಶೀಲನೆ ಮಾಡಿದ್ದೇವೆ. ಜೂ.2ರಂದು ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದೆ. ಹೀಗಾಗಿ ಮುಂದಿನ 15 ದಿನದಲ್ಲಿ ಕುಡಿಯುವ ನೀರಿನ ಸಮಸ್ಯೆ ಕಡಿಮೆ ಆಗಲಿದೆ ಎಂದು ಹೇಳಿದ್ದಾರೆ.

ಬರ ಪರಿಹಾರ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಬರ ಪರಿಹಾರವನ್ನು ಸುಪ್ರೀಂ ಕೋರ್ಟ್​ಗೆ ಹೋಗಿ ಪಡೆದುಕೊಂಡು ಬಂದಿದ್ದೇವೆ. ಮೇ ಮೊದಲ ವಾರ 27.5 ಲಕ್ಷ ರೈತರಿಗೆ ಬರ ಪರಿಹಾರ ನೀಡಿದ್ದೇವೆ. 7 ಲಕ್ಷ ರೈತರು ಹೊಸದಾಗಿ ಮಳೆಯಾಶ್ರಿತ ಬೆಳೆ ಹೊಂದಿದ್ದರು. ನೀರು ಬರದೆ ಬೆಳೆಹಾನಿ ಆದ ರೈತರಿಗೆ ಪರಿಹಾರ ಕೊಡಲು ತೀರ್ಮಾನ ಮಾಡಿದ್ದೇವೆ ಎಂದರು.

ಇದನ್ನೂ ಓದಿ: ಬೆಳಗಾವಿ, ಹಾಸನ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದುವರೆದ ಮಳೆ ಆರ್ಭಟ: ಮರ ಬಿದ್ದು ಯುವಕ ಸಾವು, ಅಲ್ಲಲ್ಲಿ ಅಸ್ತವ್ಯಸ್ತ

ಒಂದು ವಾರದೊಳಗೆ ರೈತರಿಗೆ ಪರಿಹಾರ ನೀಡಲು ಸೂಚನೆ ನೀಡಲಾಗಿದೆ. 40-41 ಲಕ್ಷ ರೈತರಿಗೆ ಪರಿಹಾರ ಪಾವತಿ ವಿತರಣೆ ಮಾಡಿದಂತಾಗುತ್ತೆ. 17 ಲಕ್ಷದ 9 ಸಾವಿರ ರೈತ ಕುಟುಂಬಕ್ಕೆ ಜೀವನೋಪಾಯ ಪರಿಹಾರ ನೀಡಲಿದ್ದೇವೆ ಎಂದು ತಿಳಿಸಿದ್ದಾರೆ.

2800 ರೂ. ಅಥವಾ 3000 ರೂ. ಬರಬಹುದು. ಇದು ಜೀವನೋಪಾಯ‌ ನಷ್ಟದ ಪರಿಹಾರ. ಇದು ಸಣ್ಣ, ಅತಿ ಸಣ್ಣ ರೈತರಿಗೆ ನೀಡುವ ಪರಿಹಾರವಾಗಿದೆ. ಹಿಂದಿನ ವರ್ಷಗಳಲ್ಲಿ ಕಲಬುರ್ಗಿ, ಚಿತ್ರದುರ್ಗ, ಹಾವೇರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬರ ಪರಿಹಾರದಲ್ಲಿ ಅಕ್ರಮ ಆಗಿದೆ. ಈ ಬಗ್ಗೆ ತನಿಖೆ ಮಾಡುತ್ತಿದ್ದೇವೆ. ವರದಿ ಬಂದ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಗಳೂರು ಗ್ರಾಮಾಂತರ ಕ್ಷೇತ್ರದ ಜನ ಬದಲಾವಣೆ ಬಯಸಿ ಮತ ಹಾಕಿದ್ದಾರೆ

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್​ಗೆ ಸೋಲು ವಿಚಾರವಾಗಿ ಮಾತನಾಡಿದ್ದು, ಕರ್ನಾಟಕ ರಾಜ್ಯದ ಇತಿಹಾಸದಲ್ಲಿ ಯಾರ್ಯಾರೋ ಸೋತಿದ್ದಾರೆ. ಶಾಂತವೇರಿ ಗೋಪಾಲಗೌಡ, ನಿಜಲಿಂಗಪ್ಪ ಸೇರಿ ಹಲವರು ಸೋತಿದ್ದಾರೆ. ಹಲವು ವಿಷಯಗಳ ಆಧಾರದಲ್ಲಿ ಜನ ಮತ ಹಾಕಿರುತ್ತಾರೆ. ಅದೇ ರೀತಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಜನತೆ ಯೋಚಿಸಿದ್ದಾರೆ.

ಇದನ್ನೂ ಓದಿ: Bengaluru Rain: ಕೆಆರ್ ಮಾರುಕಟ್ಟೆ, ಲಾಲ್​ಬಾಗ್ ಸೇರಿದಂತೆ ಬೆಂಗಳೂರಿನ ಹಲವೆಡೆ ಮಳೆ

ಡಿ.ಕೆ.ಸುರೇಶ್ ಶಾಸಕರಿಗಿಂತಲೂ ಹೆಚ್ಚು ಕೆಲಸ ಮಾಡುತ್ತಿದ್ದರು. ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಜನ ಬದಲಾವಣೆ ಬಯಸಿ ಮತ ಹಾಕಿದ್ದಾರೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಮತದಾರರ ನಿರ್ಧಾರ ಗೌರವಿಸುತ್ತೇವೆ ಎಂದಿದ್ದಾರೆ.

ಸರ್ಕಾರದ 5 ಗ್ಯಾರಂಟಿ ಯೋಜನೆಗಳಿಂದ ಜನರಿಗೆ ಅನುಕೂಲವಾಗಿದೆ. ಗ್ಯಾರಂಟಿಗಳು ರಾಜಕೀಯವಾಗಿ ಅನುಕೂಲ ಆಗಿದೆಯೋ ಇಲ್ವೋ ಗೊತ್ತಿಲ್ಲ. ನಾವು 10ಕ್ಕಿಂತ ಹೆಚ್ಚು ಸ್ಥಾನ ಗೆಲ್ಲುವ ವಿಶ್ವಾಸದಲ್ಲಿದ್ದೆವು ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ