AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

7ನೇ ವೇತನ ಆಯೋಗದ ವರದಿ ಸಲ್ಲಿಕೆ: ಶೇ.27.50 ವೇತನ ಹೆಚ್ಚಳಕ್ಕೆ ಶಿಫಾರಸ್ಸು; ಸಿದ್ದರಾಮಯ್ಯ ಹೇಳಿದ್ದೇನು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ 7ನೇ ವೇತನ ಆಯೋಗದ ವರದಿಯನ್ನು ಸಲ್ಲಿಕೆ ಮಾಡಲಾಗಿದೆ. ಆರ್ಥಿಕ ಇಲಾಖೆ ಪರಿಶೀಲನೆ ನಂತರ ಜಾರಿ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದು ಸಿದ್ದರಾಮಯ್ಯ ಅವರ ಹೇಳಿದ್ದಾರೆ. ಇನ್ನು, ವರದಿ ಸ್ವೀಕರಿಸಿದ ಕುರಿತು ಹರ್ಷ ವ್ಯಕ್ತಪಡಿಸಿದ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿಎಸ್ ಷಡಕ್ಷರಿ, 27.50% ವೇತನ ಹೆಚ್ಚಳಕ್ಕೆ ಆಯೋಗ ವರದಿ ಕೊಟ್ಟಿದೆ ಎಂದರು.

7ನೇ ವೇತನ ಆಯೋಗದ ವರದಿ ಸಲ್ಲಿಕೆ: ಶೇ.27.50 ವೇತನ ಹೆಚ್ಚಳಕ್ಕೆ ಶಿಫಾರಸ್ಸು; ಸಿದ್ದರಾಮಯ್ಯ ಹೇಳಿದ್ದೇನು
7ನೇ ವೇತನ ಆಯೋಗದ ವರದಿ ಸಲ್ಲಿಕೆ: ಶೇ.27.50 ವೇತನ ಹೆಚ್ಚಳಕ್ಕೆ ಶಿಫಾರಸ್ಸು
Anil Kalkere
| Edited By: Rakesh Nayak Manchi|

Updated on:Mar 16, 2024 | 12:41 PM

Share

ಬೆಂಗಳೂರು, ಮಾ.16: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ 7ನೇ ವೇತನ ಆಯೋಗದ ವರದಿಯನ್ನು (7th Pay Commission report) ಸಲ್ಲಿಕೆ ಮಾಡಲಾಗಿದೆ. ಸಮಿತಿಯ ಅಧ್ಯಕ್ಷತೆ ಸುಧಾಕರ ರಾವ್ ನೇತೃತ್ವದಲ್ಲಿ ವರದಿ ಸಲ್ಲಿಕೆ ಮಾಡಲಾಗಿದ್ದು, ಈ ವೇಳೆ ಆಯೋಗದ ಸದಸ್ಯರಾದ ಪಿ.ಬಿ. ರಾಮಮೂರ್ತಿ, ಶ್ರೀಕಾಂತ್ ವನಹಳ್ಳಿ, ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವರದಿ ಸ್ವೀಕರಿಸಿದ ನಂತರ ಮಾತನಾಡಿದ ಸಿದ್ದರಾಮಯ್ಯ, 7ನೇ‌ ವೇತನ‌ ಆಯೋಗದ ಅಧ್ಯಕ್ಷ ಸುಧಾಕರ್ ರಾವ್ ವರದಿ ಸಲ್ಲಿಸಿದ್ದಾರೆ. ವರದಿ ನೀಡಲು‌ ಸರ್ಕಾರ ಸಮಿತಿ‌ ರಚಿಸಿತ್ತು. ಶೇ.17 % ಅವರ ಬೇಸಿಕ್ ಪೇ ಮೇಲೆ ಹೆಚ್ಚಳ ಮಾಡಿ‌ ಆದೇಶ ಹೊರಡಿಸಿತ್ತು. ವರದಿ ನೀಡಲು ಸರ್ಕಾರ ಮೂರು‌ ತಿಂಗಳ ಅವಧಿ ಹೆಚ್ಚಳ ಮಾಡಿತ್ತು ಎಂದರು.

ನಿನ್ನೆ ಮೈಸೂರು ‌ಪ್ರವಾಸದಲ್ಲಿದ್ದ ಕಾರಣ ವರದಿ ಸ್ವೀಕಾರ ಮಾಡಲು ಆಗಿರಲಿಲ್ಲ. ಇಂದು‌ ಅಂತಿಮವಾದ ವರದಿ ಕೊಟ್ಟಿದ್ದಾರೆ. ಬೇಸಿಕ್ ಪೇ ಮೇಲೆ ಶೇ.27.5 ರಷ್ಟು ಹೆಚ್ಚಳ ಕೊಡಬೇಕೆಂದು ವರದಿ ಕೊಟ್ಟಿದ್ದಾರೆ. ಶಿಫಾರಸ್ಸಿನ ಪ್ರಕಾರ, ಕನಿಷ್ಠ ಮೂಲವೇತನವನ್ನು 17 ಸಾವಿರದಿಂದ 27 ಸಾವಿರ ರೂ.ಗಳಿಗೆ ಹೆಚ್ಚಿಸುವಂತೆ ಶಿಫಾರಸ್ಸು ಮಾಡಲಾಗಿದೆ. ಹೀಗೆ ಬೇರೆ ಶಿಫಾರಸ್ಸು ಇದೆ, ನಾನು ಅದನ್ನೆಲ್ಲ ಹೇಳಲು ಹೋಗುವುದಿಲ್ಲ. ವರದಿಯನ್ನು ಆರ್ಥಿಕ ಇಲಾಖೆ ಪರಿಶೀಲನೆ ಮಾಡಬೇಕು. ಶಿಫಾರಸ್ಸು ಪರಿಶೀಲನೆ ಮಾಡಿ ನಂತರ ಸರ್ಕಾರ ಸಲಹೆಗಳನ್ನು ಪಡೆದು ತೀರ್ಮಾನ ತೆಗೆದುಕೊಳ್ಳುತ್ತದೆ ಎಂದರು.

ಇದನ್ನೂ ಓದಿ: ಬ್ಯಾಡಗಿ ಮೆಣಸಿನಕಾಯಿ ದರ ಹಠಾತ್ ಕುಸಿತಕ್ಕೆ ಕಾರಣವೇನು? ವರದಿ ಸಲ್ಲಿಸವಂತೆ ಸಿದ್ದರಾಮಯ್ಯ ಸೂಚನೆ

ವರದಿ ಸ್ವೀಕರಿಸಿದ ಬಗ್ಗೆ ಹರ್ಷ ವ್ಯಕ್ತಪಡಿಸಿದ ಸಂಘದ ಅಧ್ಯಕ್ಷ ಷಡಕ್ಷರಿ, ಸರ್ಕಾರ ವರದಿ ಸ್ವೀಕಾರ ಮಾಡಿರುವುದಕ್ಕೆ ಖುಷಿ ಇದೆ. ಈ ಹಿಂದೆ ಸಿದ್ದರಾಮಯ್ಯ ನವರು 30% ಕೊಟ್ಟಿದ್ದರು. ಈಗ ಸರ್ಕಾರಕ್ಕೆ 27.50% ವೇತನ ಹೆಚ್ಚಳಕ್ಕೆ ಆಯೋಗ ವರದಿ ಕೊಟ್ಟಿದೆ. ಮತ್ತಷ್ಟು ಹೆಚ್ಚಳ ಮಾಡಲು ಮನವಿ ಮಾಡುತ್ತೇವೆ. ಸರ್ಕಾರ ಕೂಡಲೇ ವರದಿಯನ್ನ ಜಾರಿಗೊಳಿಸಬೇಕು. ಇದರಿಂದ 12 ಲಕ್ಷ ಸರ್ಕಾರಿ ನೌಕಕರಿಗೆ ಸಹಕಾರ ಆಗಲಿದೆ. ನಿವೃತ್ತ ನೌಕಕರ ಕುಟುಂಬಗಳಿಗೂ ಸಹಾಯ ಆಗಲಿದೆ ಎಂದರು.

ತಡವಾಗಲಿದೆ 7ನೇ ವೇತನ ಆಯೋಗದ ವರದಿ ಜಾರಿ

ಭಾರತದ ಚುನಾವಣಾ ಆಯೋಗವು ಇಂದು 3 ಗಂಟೆಗೆ ಪತ್ರಿಕಾಗೋಷ್ಠಿ ಕರೆದಿದ್ದು, ಲೋಕಸಭೆ ಚುನಾವಣೆಯ ದಿನಾಂಕ ಘೋಷಣೆಯಾಗಲಿದೆ. ಬಳಿಕ ನೀತಿ ಸಂಹಿತೆ ಜಾರಿಯಾಗಲಿರುವುದರಿಂದ ಸರ್ಕಾರಗಳು ಯಾವುದೇ ಯೋಜನೆಗಳನ್ನು ಘೋಷಣೆ ಅಥವಾ ಜಾರಿ ಮಾಡುವಂತಿಲ್ಲ. ಅಲ್ಲದೆ, ಕಾಮಗಾರಿಗಳಿಗೆ ಚಾಲನೆ ಅಥವಾ ಉದ್ಘಾಟಿಸುವಂತಿಲ್ಲ. ಹೀಗಾಗಿ 7ನೇ ಆಯೋಗದ ವರದಿ ಜಾರಿ ತಡವಾಗಬಹುದು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:36 pm, Sat, 16 March 24

Follow Us
Anil Kalkere
Anil Kalkere
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ