AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ರಸ್ತೆ ಅಪಘಾತ: ಒಂದೇ ದಿನ 8 ಜನ ಬಲಿ, ಹಲವರಿಗೆ ಗಾಯ

ರಾಜ್ಯದಲ್ಲಿ ಅಪಘಾತಗಳ ಸಂಖ್ಯೆ ಏರುತ್ತಲೇ ಇದೆ. ಸಂಚಾರಿ ಪೊಲೀಸರು ಅಪಘಾತ ತಡೆಗೆ ಎಷ್ಟೇ ಕಟ್ಟುನಿಟ್ಟಿನ ನಿಯಮಗಳನ್ನು ತಂದರೂ ಇದಕ್ಕೆ ಬ್ರೇಕ್​ ಹಾಕಲಾಗುತ್ತಿಲ್ಲ. ಇದಕ್ಕೆ ಪೂರಕವೆಂಬಂತೆ ಇಂದು (ಫೆಬ್ರವರಿ 08) ಒಂದೇ ದಿನ ಬೀದರ್, ತುಮಕೂರು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ಸಂಭವಿಸದ ಅಪಘಾತದಲ್ಲಿ ಎಂಟು ಜನ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ರಸ್ತೆ ಅಪಘಾತ: ಒಂದೇ ದಿನ 8 ಜನ ಬಲಿ, ಹಲವರಿಗೆ ಗಾಯ
ಪ್ರಾತಿನಿಧಿಕ ಚಿತ್ರ
ರಮೇಶ್ ಬಿ. ಜವಳಗೇರಾ
|

Updated on: Feb 08, 2026 | 8:42 PM

Share

ಬೀದರ್/ತಮಕೂರು, (ಫೆಬ್ರವರಿ 08): ಬ್ರಿಡ್ಜ್​​ಗೆ ಬೈಕ್​ ಡಿಕ್ಕಿಯಾದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಬೀದರ್​  (Bidar) ಜಿಲ್ಲೆ ಹುಮನಾಬಾದ್ ತಾಲೂಕಿನ ಹಳ್ಳಿಖೇಡ-ಬಿ ಬಳಿಯ ನಾಗಣ್ಣ ಕ್ರಾಸ್ ಹತ್ತಿರ ನಡೆದಿದೆ. ರಾಜೇಶ್ವರ ಗ್ರಾಮದ ವೆಂಕಟ್ ಕರಟ್ಮಲ್(40) ಹಾಗೂ ಪತ್ನಿ ಶಿಲ್ಪಾ(35), ಪುತ್ರಿ ರಕ್ಷಿತಾ(12) ಸ್ಥಳದಲ್ಲೇ ಸಾವನ್ನಪ್ಪಿದ್ದು,ಮಗ ದಿಗಂಬರ್(15) ಎಂಬುವವನ ಸ್ಥಿತಿ ಚಿಂತಾಜನಕವಾಗಿದೆ. ನಾಲ್ವರೂ ಒಂದೇ ಬೈಕ್​​ನಲ್ಲಿ ಬೀದರ್‌ನಿಂದ ರಾಜೇಶ್ವರ ಗ್ರಾಮಕ್ಕೆ ತೆರಳುತ್ತಿರುವಾಗ ರಸ್ತೆ ಪಕ್ಕದ ಬ್ರಿಡ್ಜ್‌ಗೆ ಬೈಕ್ ಡಿಕ್ಕಿ ಹೊಡೆದಿದೆ.

ತುಮಕೂರಿನಲ್ಲಿ ಸರಣಿ ಅಪಘಾತ

ತುಮಕೂರು: ಇನ್ನೊಂದೆಡೆ 3 ಕಾರುಗಳ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ತುಮಕೂರು ತಾಲೂಕಿನ ಬಾಣಾವರ ಬಳಿ ಈ ಸರಣಿ ಅಪಘಾತ ಸಂಭವಿಸಿದೆ. ತುಮಕೂರು ಕಡೆಯಿಂದ ಕುಣಿಗಲ್ ಕಡೆಗೆ ತೆರಳುತ್ತಿದ್ದ ಕ್ವಾಲಿಸ್ ಹಾಗೂ ಮುಂದೆ ಬರುತಿದ್ದ ಎಸ್ಟೀಮ್ ಹಾಗೂ ಬೋಲೆನೋ ಕಾರಿನ ನಡುವೆ ಸರಣಿ ಅಪಘಾತ‌ ನಡೆದಿದೆ. ಘಟನಾ ಸ್ಥಳಕ್ಕೆ ಹೆಬ್ಬೂರು ಪೊಲೀಸರು ಭೇಟಿ ನೀಡಿದ್ದು, ಗಾಯಾಳುಗಳನ್ನು ತುಮಕೂರು ಜಿಲ್ಲಾಸ್ಪತ್ರೆ ರವಾನೆ ಮಾಡಲಾಗಿದೆ. ಮುರುಳಿ, ಸುರೇಶ್ ಮೃತ ದುರ್ವೈವಿಗಳು. ಇನ್ನು ಅಪಘಾತದಲ್ಲಿ ತುಮಕೂರು ಸೆನ್ ಇನ್ಸ್ ಪೆಕ್ಟರ್ ರಾಮಕೃಷ್ಣ ಸೇರಿದಂತೆ ಗಾಯಾಳುಗಳನ್ನು ತಮಕೂರು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ: ಚಾಮರಾಜನಗರ: 9 ಕಾಡಾನೆಗಳ ಹಿಂಡು ದಾಳಿಗೆ ರೈತ ಬಲಿ; ರೊಚ್ಚಿಗೆದ್ದ ಗ್ರಾಮಸ್ಥರಿಂದ ಪ್ರತಿಭಟನೆ

ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ

ಚಿಕ್ಕಬಳ್ಳಾಪುರ: ಚಿಂತಾಮಣಿ ಹೊರವಲಯದಲ್ಲಿ ಕಾರು ಡಿಕ್ಕಿ ನಡುವೆ ಅಪಘಾತ ಸಂಭವಿಸಿದ್ದು, ಬೈಕ್​​​ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ಹೊರವಲಯದಲ್ಲಿ ದುರ್ಘಟನೆ ನಡೆದಿದೆ. ಕಾರು ಬೈಕ್​ಗೆ ಡಿಕ್ಕಿ ಹೊಡೆದು 200 ಮೀಟರ್ ಎಳೆದೊಯ್ದಿದೆ. ಬೈಕ್​​​ನಲ್ಲಿದ್ದ ನಾಗರಾಜು(68), ವೆಂಕಟರೆಡ್ಡಿ(50) ಮೃತಪಟ್ಟಿದ್ದಾರೆ.

ಆಟೋ ಡಿಕ್ಕಿಯಾಗಿ ವೃದ್ಧ ಸಾವು

ಚಿಕ್ಕಮಗಳೂರು: ಆಟೋ ಡಿಕ್ಕಿಯಾಗಿ ಸ್ಕೂಟಿಯಲ್ಲಿ ತೆರಳ್ತಿದ್ದ ವೃದ್ಧ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಬ್ಬಿಣಸೇತುವೆ ಗ್ರಾಮ ಬಳಿಯ ಹೆದ್ದಾರಿಯಲ್ಲಿ ನಡೆದಿದೆ. ಉದ್ದೇಗೌಡ(68) ಎನ್ನುವ ಸ್ಕೂಟಿಯಲ್ಲಿ ಹೋಗುತ್ತಿದ್ದು, ಇದೇ ವೇಳೆ ಹಿಂದಿನಿಂದ ವೇಗವಾಗಿ ಬಂದ ಆಟೋ ಸ್ಕೂಟಿಗೆ ಡಿಕ್ಕಿ ಹೊಡೆದಿದೆ. ಸದ್ಯ ಆಲ್ದೂರು ಪೊಲೀಸರು ಆಟೋ ಚಾಲಕನನ್ನ ವಶಕ್ಕೆ ಪಡೆದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ