AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

8 ಲಕ್ಷ ರೂ. ಡಿಮ್ಯಾಂಡ್ ಹೊಂದಿದ್ದ ಲವ್ಲಿಬಾಯ್ ಹೆಸರಿನ ಟಗರು ಹೃದಯಾಘಾತದಿಂದ ಸಾವು

ಚಲಿಸುವ ರೈಲು ಹತ್ತಲು ಹೋಗಿ ಮಹಿಳೆ ಕೆಳಗೆ ಬಿದ್ದಿರುವಂತಹ ಘಟನೆ ಸಂಭವಿಸಿದೆ. ತಿರುಪತಿಟು ಕೊಲ್ಹಾಪುರ ಎಕ್ಸಪ್ರೆಸ್ ರೈಲು ಹತ್ತುವ ವೇಳೆ ಬಳ್ಳಾರಿಯ ರೈಲ್ವೆ ನಿಲ್ದಾಣದಲ್ಲಿ ನಸುಕಿನ ಜಾವ ಈ ಘಟನೆ ನಡೆದಿದೆ.

8 ಲಕ್ಷ ರೂ. ಡಿಮ್ಯಾಂಡ್ ಹೊಂದಿದ್ದ ಲವ್ಲಿಬಾಯ್ ಹೆಸರಿನ ಟಗರು ಹೃದಯಾಘಾತದಿಂದ ಸಾವು
ಹೃದಯಾಘಾತದಿಂದ ಸಾಪನ್ನಪ್ಪಿರುವ ಟಗರು
TV9 Web
| Edited By: |

Updated on:Mar 01, 2022 | 2:45 PM

Share

ಬಾಗಲಕೋಟೆ: ಹೃದಯಾಘಾತದಿಂದ ಟಗರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. 8 ಲಕ್ಷ ರೂ. ಡಿಮ್ಯಾಂಡ್ ಹೊಂದಿದ್ದ ಲವ್ಲಿಬಾಯ್ ಟಗರು ಹೃದಯಾಘಾತದಿಂದ ಸಾವನ್ನಪ್ಪಿದೆ. ಬಾಗಲಕೋಟೆ ತಾಲ್ಲೂಕಿನ ಸೀಗಿಕೇರಿ ಗ್ರಾಮದ ನಾಟಕಕಾರ,ಕಲಾವಿದ ಹೆಚ್.ಎನ್. ಸೇಬಣ್ಣವರ ಎಂಬುವರಿಗೆ ಸೇರಿದ ಟಗರು ಇದ್ದಾಗಿದ್ದು, ಕಾಳಗಕ್ಕೆ ಹೆಸರುವಾಸಿಯಾಗಿತ್ತು. ಮುನ್ನೂರಕ್ಕೂ ಹೆಚ್ಚು ಟಗರುಗಳಿಗೆ ಡಿಚ್ಚಿ ಹೊಡೆದು ಲವ್ಲಿಬಾಯ್ ಟಗರು ಸೋಲಿಸಿ, ಬೈಕ್, ಹೋರಿ, ಚಿನ್ನ ,ಬೆಳ್ಳಿ ನಗದು ಸೇರಿ ಹತ್ತು ಲಕ್ಷ ರೂ. ಬಹುಮಾನ ಗಳಿಸಿತ್ತು. 8 ಲಕ್ಷಕ್ಕೆ ಕೇಳಿದ್ದರೂ ಮಾಲೀಕ ಮಾರಿರಲಿಲ್ಲ. 6 ವರ್ಷದ ಲವ್ಲಿಬಾಯ್ ದೇಹಕ್ಕೆ ಮಾಲೆ , ಹಣೆಗೆ ಬೆಳ್ಳಿ ಖಡಗ, ದೇಹಕ್ಕೆ ಭಂಡಾರ ಬಳಿದು, ಪ್ರಶಸ್ತಿಗಳನ್ನು ಪಾರ್ಥೀವ ಶರೀರದ ಮುಂದೆ ಇಟ್ಟು ಗ್ರಾಮದಲ್ಲಿ ಶ್ರದ್ದಾಂಜಲಿಗೆ ವ್ಯವಸ್ಥೆ ಮಾಡಲಾಗಿದೆ. ಟಗರು ಅಭಿಮಾನಿಗಳ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಅಂತಿಮ ದರ್ಶನ ಪಡೆಯಲು ಜನರು ಬರುತ್ತಿದ್ದಾರೆ.

ಬಳ್ಳಾರಿ: ಚಲಿಸುವ ರೈಲು ಹತ್ತಲು ಹೋಗಿ ಮಹಿಳೆ ಕೆಳಗೆ ಬಿದ್ದಿರುವಂತಹ ಘಟನೆ ಸಂಭವಿಸಿದೆ. ತಿರುಪತಿಟು ಕೊಲ್ಹಾಪುರ ಎಕ್ಸಪ್ರೆಸ್ ರೈಲು ಹತ್ತುವ ವೇಳೆ ಬಳ್ಳಾರಿಯ ರೈಲ್ವೆ ನಿಲ್ದಾಣದಲ್ಲಿ ನಸುಕಿನ ಜಾವ ಈ ಘಟನೆ ನಡೆದಿದ್ದು, ಚಲಿಸುವ ರೈಲು ಹತ್ತಲು ಹೋಗಿ ಮಹಿಳೆ ಆಯತಪ್ಪಿ ಬಿದಿದ್ದಾರೆ. ಅಲ್ಲೇ ಇದ್ದ ಪೇದೆ ಮಾರುತಿ ಸಮಯ ಪ್ರಜ್ಞೆಯಿಂದ ಅನಾಹುತ ತಪ್ಪಿದೆ. ಬಳ್ಳಾರಿಯ ರೈಲ್ವೆ ಪೊಲೀಸ ಪೇದೆ ಮಾರುತಿ ಹೊಸಮನಿಯಿಂದ ಮಹಿಳೆಯ ರಕ್ಷಣೆ ಮಾಡಲಾಗಿದ್ದು, ಮಹಿಳೆಯ ರಕ್ಷಣೆ ಮಾಡಿದ ದೃಶ್ಯಗಳು ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿವೆ. ಗದಗ ಮೂಲದ ಲಲಿತಾ ಬಳ್ಳಾರಿಯ ಸಹೋದರಿ ಮನೆಗೆ ಭೇಟಿ ನೀಡಿ ಮರಳಿ ಊರಿಗೆ ತೆರಳುತ್ತಿದ್ದರು ಎನ್ನಲಾಗಿದೆ.

ತುಮಕೂರು: ಮೊಬೈಲ್ ಕಳ್ಳತನ ಮಾಡಿದ ಮೂವರು ಕಳ್ಳರಿಗೆ ಜೈಲು ಹಾಗೂ ದಂಡ ಶಿಕ್ಷೆ ವಿಧಿಸಲಾಗಿದೆ. ತುಮಕೂರಿನ ಎರಡನೇ ಅಧಿಕ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ. 2020ರ ಜುಲೈ 6 ರಂದು ತುಮಕೂರು ತಾಲೂಕಿನ ಬೊಮ್ಮನಹಳ್ಳಿ ಬಳಿ ಘಟನೆ ನಡೆದಿತ್ತು. ಅನಂತಕುಮಾರ, ಮನೋಜ್, ಕಾರ್ತಿಕ್ ಮೊಬೈಲ್ ಕಳ್ಳತನ ಮಾಡಿದ್ದರು. ಈ ಬಗ್ಗೆ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಸಿಪಿಐ ಚನ್ನೇಗೌಡ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಆರೋಪ ಸಾಭಿತಾದ ಹಿನ್ನೆಲೆ ಶಿಕ್ಷೆ ಪ್ರಕಟಿಸಲಾಗಿದ್ದು, ಮೂರು ವರ್ಷ ಕಠಿಣ ಶಿಕ್ಷೆ ತಲಾ 5 ಸಾವಿರ ದಂಡ ವಿಧಿಸಿಲಾಗಿದೆ. ಸರ್ಕಾರದ ಪರವಾಗಿ ವಿಎ ಕವಿತಾ ವಾದ ಮಂಡಿಸಿದ್ದರು.

ಇದನ್ನೂ ಓದಿ:

Shivaratri Special: ಬಜಕೂಡ್ಲು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಶಿವರಾತ್ರಿಯ ವೈಭವ

Published On - 1:11 pm, Tue, 1 March 22

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?