AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

83 ವರ್ಷದ ವೃದ್ಧೆಗೆ ಮಗ, ಸೊಸೆಯಿಂದ ಕಿರುಕುಳ; ಸಂಕಷ್ಟದ ಸ್ಥಿತಿಯಲ್ಲಿದ್ದ ತಾಯಿಯ ರಕ್ಷಣೆ

ವೃದ್ಧೆ ಮಳೆಗೆ, ಸರಿಯಾದ ಬಟ್ಟೆ ಇಲ್ಲದೆ ಮಳೆಯಲ್ಲಿ ಮಲಗಿದ್ದರು. ಸೂಕ್ಷ್ಮವಾಗಿ ಗಮನಿಸಿದಾಗ ಹಣೆಯಲ್ಲಿ ಗಾಯವಾಗಿರುವುದು ಕೂಡ ತಿಳಿದುಬಂತು. ಆ ಬಳಿಕ, ಪೊಲೀಸರಿಗೆ ಮತ್ತು ವೈದ್ಯಕೀಯ ಸಿಬ್ಬಂದಿಗೆ ಮಾಹಿತಿ ನೀಡಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು.

83 ವರ್ಷದ ವೃದ್ಧೆಗೆ ಮಗ, ಸೊಸೆಯಿಂದ ಕಿರುಕುಳ; ಸಂಕಷ್ಟದ ಸ್ಥಿತಿಯಲ್ಲಿದ್ದ ತಾಯಿಯ ರಕ್ಷಣೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jun 08, 2021 | 8:09 PM

Share

ಉಡುಪಿ: ಅಬಲ ವೃದ್ಧೆಯೊಬ್ಬರನ್ನು ಸ್ವಂತ ಮಗ ಹಾಗೂ ಆತನ ಪತ್ನಿ ಸೇರಿ ಕಿರುಕುಳ ನೀಡುತ್ತಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿ, 83 ವರ್ಷದ ವೃದ್ಧೆಯನ್ನು ಗುರುವಾರ ರಕ್ಷಿಸಲಾಗಿದೆ. ಸಾಮಾಜಿಕ ಕಾರ್ಯಕರ್ತೆ ರಮಿತಾ ಶೈಲೇಂದ್ರ ಮತ್ತು ಕಾರ್ಕಳ ಗ್ರಾಮೀಣ ವಿಭಾಗ ಪೊಲೀಸರು ವೃದ್ಧೆಯನ್ನು ರಕ್ಷಿಸಿದ್ದಾರೆ.

ಕಾರ್ಕಳ ಕಲ್ಯ ಗ್ರಾಮದ ವೃದ್ಧ ಮಹಿಳೆಗೆ ಮನೆಯಲ್ಲಿ ಕಿರುಕುಳ ನೀಡುತ್ತಿದ್ದರು ಎಂಬ ಬಗ್ಗೆ ಸುಳಿವು ಸಿಕ್ಕಿತು. ಈಗ ಲಾಕ್​ಡೌನ್ ಇರುವ ಕಾರಣ ಫುಡ್ ಕಿಟ್ ವಿತರಣೆಯನ್ನು ಯುವಜನ ಫಾರ್ ಸೇವಾ ಎಂಬ ಗ್ರೂಪ್ ಮುಖಾಂತರ ನಡೆಸುತ್ತಿದ್ದೇವೆ. ಹಾಗಾಗಿ, ಫುಡ್ ಕಿಟ್ ನೀಡುವ ನೆಪದಲ್ಲಿ ನಾವು ಆ ಮನೆಗೆ ಭೇಟಿ ಕೊಟ್ಟೆವು ಎಂದು ರಮಿತಾ ತಿಳಿಸಿದ್ದಾರೆ.

ಅಲ್ಲಿ ವೃದ್ಧ ಮಹಿಳೆಯ ಪರಿಸ್ಥಿತಿ ಕಂಡು ಆಶ್ವರ್ಯವಾಯಿತು. ವೃದ್ಧೆ ಮಳೆಗೆ, ಸರಿಯಾದ ಬಟ್ಟೆ ಇಲ್ಲದೆ ಮಳೆಯಲ್ಲಿ ಮಲಗಿದ್ದರು. ಸೂಕ್ಷ್ಮವಾಗಿ ಗಮನಿಸಿದಾಗ ಹಣೆಯಲ್ಲಿ ಗಾಯವಾಗಿರುವುದು ಕೂಡ ತಿಳಿದುಬಂತು. ಆ ಬಳಿಕ, ಪೊಲೀಸರಿಗೆ ಮತ್ತು ವೈದ್ಯಕೀಯ ಸಿಬ್ಬಂದಿಗೆ ಮಾಹಿತಿ ನೀಡಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ರಮಿತಾ ಮಾಹಿತಿ ನೀಡಿದ್ದಾರೆ.

ವೃದ್ಧ ಮಹಿಳೆಯ ಬಳಿ ಇರುವ ಚಿನ್ನವನ್ನು ಮಗ ಮತ್ತು ಸೊಸೆ ಕಸಿದುಕೊಂಡಿದ್ದಾರೆ. ಆ ಬಳಿಕ, 2.5 ಎಕರೆ ಜಾಗ ಮತ್ತು ಮನೆಗೂ ಬೇಡಿಕೆ ಇಟ್ಟಿದ್ದಾರೆ. ವೃದ್ಧೆಯ ಗಂಡ ಸುಮಾರು 5 ವರ್ಷಗಳ ಹಿಂದೆಯೇ ಮೃತಪಟ್ಟಿದ್ದಾರೆ. ಆ ನಂತರ ವೃದ್ಧೆಗೆ ಮನೆಯಲ್ಲಿ ಕಿರುಕುಳ ನೀಡುತ್ತಲೇ ಬಂದಿದ್ದಾರೆ ಎಂಬ ವಿವರಗಳು ವೃದ್ಧೆಯನ್ನು ಈ ಬಗ್ಗೆ ಕೇಳಿದಾಗ ತಿಳಿದುಬಂದಿದೆ.

ಈಗ ವೃದ್ಧೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಕೆಯ ಕೊವಿಡ್-19 ವರದಿ ಕೂಡ ಪಾಸಿಟಿವ್ ಬಂದಿದೆ. ಊಟ ಕೇಳಿದಾಗ ಮಗ ಥಳಿಸಿದ್ದಾನೆ ಎಂದು ಪೊಲೀಸರಿಗೆ ವೃದ್ಧೆ ಹೇಳಿಕೊಂಡಿದ್ದಾರೆ. ಇದೀಗ ಈ ಬಗ್ಗೆ ಕಾರ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ: ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು ಹೋಮ ಕುಂಡ ಹತ್ಯೆ! ಅಂದು ನಡೆದ ಘಟನೆಗಳೇನು?

ಪತಿಗೆ ಕೆಲಸ ನೀಡಿ ಎಂದಿದ್ದಕ್ಕೆ ಗ್ರಾಮ ಪಂಚಾಯತಿ ಸದಸ್ಯೆ ಗಂಡನಿಂದ ಲೈಂಗಿಕ ಕಿರುಕುಳ; ಮಹಿಳೆಯಿಂದ ದೂರು ದಾಖಲು

Published On - 8:05 pm, Tue, 8 June 21

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!