AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

87ನೇ ಕನ್ನಡ ಸಾಹಿತ್ಯ ಸಮ್ಮೇಳನ: ಡಿ 20, 21ರಂದು ಮಂಡ್ಯ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ರಜೆ

ಮಂಡ್ಯದಲ್ಲಿ ಡಿಸೆಂಬರ್ 20 ರಿಂದ 22 ರ ವರೆಗೆ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕಾಗಿ ಮಂಡ್ಯ ಜಿಲ್ಲಾಡಳಿತವು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಡಿ.20 ಮತ್ತು 21 ರಂದು ರಜೆ ಘೋಷಿಸಿದೆ. ಸಾಹಿತ್ಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಉಪನ್ಯಾಸಕರು ಭಾಗವಹಿಸುವ ಉದ್ದೇಶದಿಂದ ರಜೆ ನೀಡಲಾಗಿದೆ.

87ನೇ ಕನ್ನಡ ಸಾಹಿತ್ಯ ಸಮ್ಮೇಳನ: ಡಿ 20, 21ರಂದು ಮಂಡ್ಯ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ರಜೆ
87ನೇ ಕನ್ನಡ ಸಾಹಿತ್ಯ ಸಮ್ಮೇಳನ: ಡಿ 20, 21ರಂದು ಮಂಡ್ಯ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ರಜೆ
ಪ್ರಶಾಂತ್​ ಬಿ.
| Edited By: |

Updated on:Dec 18, 2024 | 10:04 PM

Share

ಮಂಡ್ಯ, ಡಿಸೆಂಬರ್​ 18: ಮೂವತ್ತು ವರ್ಷಗಳ ಬಳಿಕ ಈ ಬಾರಿ ಸಕ್ಕರಿನಗರಿ ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ (Kannada Sahitya Sammelana) ಮಂಡ್ಯದಲ್ಲಿ ನಡೆಯಲಿದೆ. ಈ ನುಡಿಜಾತ್ರೆಯನ್ನು ಸಾಕಷ್ಟು ಅರ್ಥಪೂರ್ಣವಾಗಿ ಹಾಗೂ ಅದ್ದೂರಿಯಾಗಿ ಆಚರಣೆ ಮಾಡಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಹಿನ್ನೆಲೆ ಜಿಲ್ಲೆಯ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಡಿ.20 ಮತ್ತು 21ರಂದು ರಜೆ ಘೋಷಿಸಿ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್ ಬುಧವಾರ ಆದೇಶ ಹೊರಡಿಸಿದ್ದಾರೆ.

ಡಿ.20ರಿಂದ 22ರವರೆಗೂ 3 ದಿನ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಈ ಹಿನ್ನಲೆ ಗಣ್ಯರು ಮತ್ತು ನೊಂದಾಯಿತ ಪ್ರತಿನಿಧಿಗಳು ಮಂಡ್ಯಕ್ಕೆ ಆಗಮಿಸಲಿದ್ದಾರೆ. ಅವರಿಗೆ ಜಿಲ್ಲೆಯ ಎಲ್ಲ ಶಾಲಾ, ಕಾಲೇಜುಗಳಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗುತ್ತೆ.

ಇದನ್ನೂ ಓದಿ: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಈ ಬಾರಿ ಹೊಸ ಗೋಷ್ಠಿಗಳ ಹಬ್ಬ: ಪ್ರಕೃತಿ ವಿಕೋಪ, ಸಾಹಿತ್ಯದಲ್ಲಿ ರಾಜಕೀಯದ ಚರ್ಚೆ

ಅಲ್ಲದೇ ನಾಡು-ನುಡಿ ಬಗ್ಗೆ ಅಭಿಮಾನ ಮೂಡಿಸುವ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಉಪನ್ಯಾಸಕರು ಭಾಗಿಯಾಗಬೇಕು. ಆ ನಿಟ್ಟಿನಲ್ಲಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ಡಿ.20, 21 ಎರಡು ದಿನ ರಜೆ ಘೋಷಣೆ ಮಾಡಲಾಗಿದೆ.

ಈ ನುಡಿಜಾತ್ರೆಯನ್ನ ಸಾಕಷ್ಟು ಅರ್ಥಪೂರ್ಣವಾಗಿ ನಡೆಸಲು ರಾಜ್ಯ ಸರ್ಕಾರ, ಕನ್ನಡ ಸಾಹಿತ್ಯ ಪರಿಷತ್ ಮತ್ತು ಮಂಡ್ಯ ಜಿಲ್ಲಾಡಳಿತ ಈಗಾಗಲೇ ಎಲ್ಲ ರೀತಿಯ ತಯಾರಿ ಮಾಡಿಕೊಂಡಿದೆ. ಮಂಡ್ಯ ಹೊರವಲಯದ ಶ್ರೀನಿವಾಸ್ ಪುರದ ಬಳಿ ಸುಮಾರು 60 ಎಕರೆ ಪ್ರದೇಶದಲ್ಲಿ ನುಡಿಹಬ್ಬವನ್ನ ಆಚರಣೆ ಮಾಡಲು ತಯಾರಿ ಮಾಡಲಾಗಿದೆ.

ಇದನ್ನೂ ಓದಿ: ಎಸ್‌ಎಂ ಕೃಷ್ಣ ಬರೆದ ಕೊನೆಯ ಪತ್ರ ಲಭ್ಯ: ಮಂಡ್ಯ ಸಾಹಿತ್ಯ ಸಮ್ಮೇಳನದ ಬಗ್ಗೆ ಏನು ಬರೆದಿದ್ದರು ನೋಡಿ

ಅಲ್ಲದೇ ಈಗಾಗಲೇ ಸಮ್ಮೇಳನದ ಗೌರವಾಧ್ಯಕ್ಷರಾಗಿ ಗೊರಾ ಚನ್ನಬಸವ ಅವರನ್ನ ಕೂಡ ಆಯ್ಕೆ ಮಾಡಲಾಗಿದೆ. ಸಮ್ಮೇಳನದ ಅಂಗವಾಗಿ ‌ಮನೆ ಮನೆಗೆ ಬಾವುಟ ನೀಡುವ ಕಾರ್ಯಕ್ರಮವನ್ನು ಇತ್ತೀಚೆಗೆ ಮಾಡಲಾಗಿದೆ. ಮಂಡ್ಯ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಪ್ರತಿ ಮನೆಗಳ ಮೇಲೆ ಬಾವುಟ ಹಾರಿಸಲು ಕರೆ ನೀಡಲಾಗಿದೆ. ಈ ಕಾರ್ಯಕ್ರಮಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ ನೀಡಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:03 pm, Wed, 18 December 24

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ