
ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 9 ಜನರಿಗೆ ಕ್ರೂರಿ ಕೊರೊನಾ ಸೋಂಕು ತಗುಲಿದ್ದು, ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 598ಕ್ಕೆ ಏರಿಕೆಯಾಗಿದೆ. ತುಮಕೂರು 2, ವಿಜಯಪುರ 2, ಬೆಂಗಳೂರು, ಬಾಗಲಕೋಟೆ, ಚಿಕ್ಕಬಳ್ಳಾಪುರ, ಬೀದರ್, ಬೆಳಗಾವಿ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಕೊರೊನಾ ಸೋಂಕು ಅಟ್ಯಾಕ್ ಆಗಿರುವುದು ದೃಢಪಟ್ಟಿದೆ.
598 ಸೋಂಕಿತರ ಪೈಕಿ ಈವರೆಗೆ 255 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೂ ಕಿಲ್ಲರ್ ಕೊರೊನಾಗೆ ರಾಜ್ಯದಲ್ಲಿ 25 ಜನರ ಸಾವಿಗೀಡಾಗಿದ್ದಾರೆ. ಉಳಿದ 318 ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
Published On - 12:35 pm, Sat, 2 May 20