AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಗ್ ಮುಳುಗಡೆ ಪ್ರಕರಣ: ಪತ್ತೆಯಾದ 9 ಮಂದಿ ರಕ್ಷಣೆಗೆ ಗಾಳಿ ಮಳೆ ಅಡ್ಡಿ; ನಾಳೆ ಮುಂಜಾನೆವರೆಗೆ ಸಮುದ್ರದಲ್ಲೇ ಇರುವ ಅನಿವಾರ್ಯತೆ

ಜೋರಾಗಿ ಸುರಿಯುತ್ತಿರುವ ಗಾಳಿ, ಮಳೆಯ ಕಾರಣದಿಂದ ಕೋಸ್ಟ್ ಗಾರ್ಡ್ಸ್​ಗೆ ಸ್ಥಳಕ್ಕೆ ತೆರಳಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ನಾಳೆಯವರೆಗೂ ಲಂಗರು ಹಾಕಿದ ಸ್ಥಳದಲ್ಲೇ ಇರುವಂತೆ ಟಗ್​ನಲ್ಲಿ ಇದ್ದವರಿಗೆ ಸೂಚನೆ ಕೊಡಲಾಗಿದೆ.

ಟಗ್ ಮುಳುಗಡೆ ಪ್ರಕರಣ: ಪತ್ತೆಯಾದ 9 ಮಂದಿ ರಕ್ಷಣೆಗೆ ಗಾಳಿ ಮಳೆ ಅಡ್ಡಿ; ನಾಳೆ ಮುಂಜಾನೆವರೆಗೆ ಸಮುದ್ರದಲ್ಲೇ ಇರುವ ಅನಿವಾರ್ಯತೆ
ತೌಕ್ತೆ ಚಂಡಮಾರುತ
TV9 Web
| Edited By: |

Updated on:Aug 23, 2021 | 12:30 PM

Share

ಮಂಗಳೂರು: ತೌಕ್ತೆ ಚಂಡಮಾರುತದ ಅಬ್ಬರಕ್ಕೆ ನಾಪತ್ತೆಯಾಗಿದ್ದ ಎಮ್​ಆರ್​ಪಿಎಲ್​ನ ಒಂದು ಟಗ್ ಪತ್ತೆಯಾಗಿದೆ. ಆದರೆ ದುರಾದೃಷ್ಟವಷಾತ್ ಟಗ್ ಪತ್ತೆಯಾದರೂ ಭಾರೀ ಗಾಳಿ, ಮಳೆಯ ಕಾರಣದಿಂದ ಅದರ ರಕ್ಷಣಾ ಕಾರ್ಯ ಸಾಧ್ಯವಾಗುತ್ತಿಲ್ಲ. ಹೀಗಾಗಿ ಪತ್ತೆಯಾಗಿರುವ ಟಗ್ ಮತ್ತು 9 ಮಂದಿ ನೌಕರರನ್ನು ನಾಳೆ ಮುಂಜಾನೆ 5.30 ಸುಮಾರಿಗೆ ರಕ್ಷಣೆ ಮಾಡಲು ನಿರ್ಧರಿಸಲಾಗಿದೆ. ಅಲ್ಲಿಯವರೆಗೂ ಲಂಗರು ಹಾಕಿದ ಸ್ಥಳದಲ್ಲಿ ನಿಲ್ಲುವಂತೆ 9 ಜನರಿಗೆ ಸೂಚನೆ ನೀಡಲಾಗಿದೆ.

ಜೋರಾಗಿ ಸುರಿಯುತ್ತಿರುವ ಗಾಳಿ, ಮಳೆಯ ಕಾರಣದಿಂದ ಕೋಸ್ಟ್ ಗಾರ್ಡ್ಸ್​ಗೆ ಸ್ಥಳಕ್ಕೆ ತೆರಳಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ನಾಳೆಯವರೆಗೂ ಲಂಗರು ಹಾಕಿದ ಸ್ಥಳದಲ್ಲೇ ಇರುವಂತೆ ಟಗ್​ನಲ್ಲಿ ಇದ್ದವರಿಗೆ ಸೂಚನೆ ಕೊಡಲಾಗಿದೆ. ಟಗ್​ನಲ್ಲಿ ಇರುವ 9 ಮಂದಿ ನೌಕರರು ಪ್ರಾಣ ಕೈಯಲ್ಲಿ ಹಿಡಿದು ನಿಂತಿದ್ದಾರೆ. ಎಲ್ಲರಿಗೂ ಚಂಡಮಾರುತದ ಮಧ್ಯೆ ಸಮುದ್ರದಲ್ಲಿ ಇರುವ ಪರಿಸ್ಥಿತಿ ಎದುರಾಗಿದೆ. ಸುರತ್ಕಲ್​ನ 17 ನಾಟಿಕಲ್ ದೂರದಲ್ಲಿ ದುರಂತ ನಡೆದಿತ್ತು. ಇದೀಗ ರಾತ್ರಿ ಪೂರ್ತಿ ಸಮುದ್ರದ ನಡುವೆ ಕಳೆಯುವ ಅನಿವಾರ್ಯತೆ ಎದುರಾಗಿದೆ.

ಈಜಿ ದಡ ಸೇರಿದ್ದ ಇಬ್ಬರಿಗೆ ಚಿಕಿತ್ಸೆ ಮಂಗಳೂರು ಎಮ್​ಆರ್​ಪಿಎಲ್​ನ ಎರಡು ಟಗ್ ಮುಳುಗಡೆ ಪ್ರಕರಣದಲ್ಲಿ ಈಜಿ ದಡ ಸೇರಿದ್ದ ಇಬ್ಬರು ನೌಕರರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಉಡುಪಿ ಹೊರವಲಯದ ಅಜ್ಜರಕಾಡು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೊಮಿರುಲ್ ಮುಲ್ಲಾ (34) ಹಾಗೂ ಕರೀಮುಲ್ಲಾ ಶೇಖ್ (24) ಸತತ 8 ಗಂಟೆ ಕಾಲ ಟ್ಯೂಬ್ ಬಳಸಿ ಈಜಿ ದಡ ಸೇರಿದ್ದರು. ಉಡುಪಿ ಜಿಲ್ಲೆಯ ಮಟ್ಟು ಕೊಪ್ಲ ಬಳಿ ದಡ ಸೇರಿದ್ದರು. ಸ್ಥಳೀಯರು ಅವರ ರಕ್ಷಣೆ ಮಾಡಿದ್ದರು. ಸುರತ್ಕಲ್​ನ 17 ನಾಟಿಕಲ್ ದೂರದಲ್ಲಿ ದುರಂತ ನಡೆದಿತ್ತು. ಇದೀಗ ಅವರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: Cyclone Tauktae Photos: ತೌಕ್ತೆ ಚಂಡಮಾರುತದ ಪ್ರತಾಪ; ಇಲ್ಲಿದೆ ಚಂಡಮಾರುತದ ಇಂದಿನ ಚಿತ್ರಣ

ತೌಕ್ತೆ ಚಂಡಮಾರುತ: ಮಗುಚಿದ ದೋಣಿಯಲ್ಲಿದ್ದ ಏಳು ಮಂದಿ ನಾಪತ್ತೆ; ನಾಳೆ ಬೆಳಗ್ಗೆವರೆಗೂ ಉಡುಪಿಯಲ್ಲಿ ರೆಡ್​ ಅಲರ್ಟ್​

Published On - 11:29 pm, Sat, 15 May 21

Follow Us
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ