AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಗ್ ಮುಳುಗಡೆ ಪ್ರಕರಣ: ಪತ್ತೆಯಾದ 9 ಮಂದಿ ರಕ್ಷಣೆಗೆ ಗಾಳಿ ಮಳೆ ಅಡ್ಡಿ; ನಾಳೆ ಮುಂಜಾನೆವರೆಗೆ ಸಮುದ್ರದಲ್ಲೇ ಇರುವ ಅನಿವಾರ್ಯತೆ

ಜೋರಾಗಿ ಸುರಿಯುತ್ತಿರುವ ಗಾಳಿ, ಮಳೆಯ ಕಾರಣದಿಂದ ಕೋಸ್ಟ್ ಗಾರ್ಡ್ಸ್​ಗೆ ಸ್ಥಳಕ್ಕೆ ತೆರಳಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ನಾಳೆಯವರೆಗೂ ಲಂಗರು ಹಾಕಿದ ಸ್ಥಳದಲ್ಲೇ ಇರುವಂತೆ ಟಗ್​ನಲ್ಲಿ ಇದ್ದವರಿಗೆ ಸೂಚನೆ ಕೊಡಲಾಗಿದೆ.

ಟಗ್ ಮುಳುಗಡೆ ಪ್ರಕರಣ: ಪತ್ತೆಯಾದ 9 ಮಂದಿ ರಕ್ಷಣೆಗೆ ಗಾಳಿ ಮಳೆ ಅಡ್ಡಿ; ನಾಳೆ ಮುಂಜಾನೆವರೆಗೆ ಸಮುದ್ರದಲ್ಲೇ ಇರುವ ಅನಿವಾರ್ಯತೆ
ತೌಕ್ತೆ ಚಂಡಮಾರುತ
Follow us
TV9 Web
| Updated By: ganapathi bhat

Updated on:Aug 23, 2021 | 12:30 PM

ಮಂಗಳೂರು: ತೌಕ್ತೆ ಚಂಡಮಾರುತದ ಅಬ್ಬರಕ್ಕೆ ನಾಪತ್ತೆಯಾಗಿದ್ದ ಎಮ್​ಆರ್​ಪಿಎಲ್​ನ ಒಂದು ಟಗ್ ಪತ್ತೆಯಾಗಿದೆ. ಆದರೆ ದುರಾದೃಷ್ಟವಷಾತ್ ಟಗ್ ಪತ್ತೆಯಾದರೂ ಭಾರೀ ಗಾಳಿ, ಮಳೆಯ ಕಾರಣದಿಂದ ಅದರ ರಕ್ಷಣಾ ಕಾರ್ಯ ಸಾಧ್ಯವಾಗುತ್ತಿಲ್ಲ. ಹೀಗಾಗಿ ಪತ್ತೆಯಾಗಿರುವ ಟಗ್ ಮತ್ತು 9 ಮಂದಿ ನೌಕರರನ್ನು ನಾಳೆ ಮುಂಜಾನೆ 5.30 ಸುಮಾರಿಗೆ ರಕ್ಷಣೆ ಮಾಡಲು ನಿರ್ಧರಿಸಲಾಗಿದೆ. ಅಲ್ಲಿಯವರೆಗೂ ಲಂಗರು ಹಾಕಿದ ಸ್ಥಳದಲ್ಲಿ ನಿಲ್ಲುವಂತೆ 9 ಜನರಿಗೆ ಸೂಚನೆ ನೀಡಲಾಗಿದೆ.

ಜೋರಾಗಿ ಸುರಿಯುತ್ತಿರುವ ಗಾಳಿ, ಮಳೆಯ ಕಾರಣದಿಂದ ಕೋಸ್ಟ್ ಗಾರ್ಡ್ಸ್​ಗೆ ಸ್ಥಳಕ್ಕೆ ತೆರಳಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ನಾಳೆಯವರೆಗೂ ಲಂಗರು ಹಾಕಿದ ಸ್ಥಳದಲ್ಲೇ ಇರುವಂತೆ ಟಗ್​ನಲ್ಲಿ ಇದ್ದವರಿಗೆ ಸೂಚನೆ ಕೊಡಲಾಗಿದೆ. ಟಗ್​ನಲ್ಲಿ ಇರುವ 9 ಮಂದಿ ನೌಕರರು ಪ್ರಾಣ ಕೈಯಲ್ಲಿ ಹಿಡಿದು ನಿಂತಿದ್ದಾರೆ. ಎಲ್ಲರಿಗೂ ಚಂಡಮಾರುತದ ಮಧ್ಯೆ ಸಮುದ್ರದಲ್ಲಿ ಇರುವ ಪರಿಸ್ಥಿತಿ ಎದುರಾಗಿದೆ. ಸುರತ್ಕಲ್​ನ 17 ನಾಟಿಕಲ್ ದೂರದಲ್ಲಿ ದುರಂತ ನಡೆದಿತ್ತು. ಇದೀಗ ರಾತ್ರಿ ಪೂರ್ತಿ ಸಮುದ್ರದ ನಡುವೆ ಕಳೆಯುವ ಅನಿವಾರ್ಯತೆ ಎದುರಾಗಿದೆ.

ಈಜಿ ದಡ ಸೇರಿದ್ದ ಇಬ್ಬರಿಗೆ ಚಿಕಿತ್ಸೆ ಮಂಗಳೂರು ಎಮ್​ಆರ್​ಪಿಎಲ್​ನ ಎರಡು ಟಗ್ ಮುಳುಗಡೆ ಪ್ರಕರಣದಲ್ಲಿ ಈಜಿ ದಡ ಸೇರಿದ್ದ ಇಬ್ಬರು ನೌಕರರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಉಡುಪಿ ಹೊರವಲಯದ ಅಜ್ಜರಕಾಡು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೊಮಿರುಲ್ ಮುಲ್ಲಾ (34) ಹಾಗೂ ಕರೀಮುಲ್ಲಾ ಶೇಖ್ (24) ಸತತ 8 ಗಂಟೆ ಕಾಲ ಟ್ಯೂಬ್ ಬಳಸಿ ಈಜಿ ದಡ ಸೇರಿದ್ದರು. ಉಡುಪಿ ಜಿಲ್ಲೆಯ ಮಟ್ಟು ಕೊಪ್ಲ ಬಳಿ ದಡ ಸೇರಿದ್ದರು. ಸ್ಥಳೀಯರು ಅವರ ರಕ್ಷಣೆ ಮಾಡಿದ್ದರು. ಸುರತ್ಕಲ್​ನ 17 ನಾಟಿಕಲ್ ದೂರದಲ್ಲಿ ದುರಂತ ನಡೆದಿತ್ತು. ಇದೀಗ ಅವರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: Cyclone Tauktae Photos: ತೌಕ್ತೆ ಚಂಡಮಾರುತದ ಪ್ರತಾಪ; ಇಲ್ಲಿದೆ ಚಂಡಮಾರುತದ ಇಂದಿನ ಚಿತ್ರಣ

ತೌಕ್ತೆ ಚಂಡಮಾರುತ: ಮಗುಚಿದ ದೋಣಿಯಲ್ಲಿದ್ದ ಏಳು ಮಂದಿ ನಾಪತ್ತೆ; ನಾಳೆ ಬೆಳಗ್ಗೆವರೆಗೂ ಉಡುಪಿಯಲ್ಲಿ ರೆಡ್​ ಅಲರ್ಟ್​

Published On - 11:29 pm, Sat, 15 May 21

VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್
VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ