AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

9 Years Of PM Modi: ಇಂದು ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ನರೇಂದ್ರ ಮೋದಿಯವರು ಪ್ರಧಾನಿಯಾಗಿ 9 ವರ್ಷ ಪೂರೈಸಿದ ಹಿನ್ನೆಲೆ ಇಂದು ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಬೆಳಗ್ಗೆ 10.30ಕ್ಕೆ ವರ್ಚುವಲ್ ಮೂಲಕ ಭಾಷಣ ಮಾಡಲಿದ್ದಾರೆ.

9 Years Of PM Modi: ಇಂದು ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ
ಪ್ರಧಾನಿ ನರೇಂದ್ರ ಮೋದಿ
ವಿವೇಕ ಬಿರಾದಾರ
|

Updated on: Jun 27, 2023 | 6:58 AM

Share

ಬೆಂಗಳೂರು: ನರೇಂದ್ರ ಮೋದಿಯವರು (Narendra Modi) ಪ್ರಧಾನಿಯಾಗಿ (Prime Minister) 9 ವರ್ಷ ಪೂರೈಸಿದ ಹಿನ್ನೆಲೆ ಇಂದು (ಜೂ.27) ಬಿಜೆಪಿ (BJP) ಕಾರ್ಯಕರ್ತರನ್ನು ಉದ್ದೇಶಿಸಿ ಬೆಳಗ್ಗೆ 10.30ಕ್ಕೆ ವರ್ಚುವಲ್ ಮೂಲಕ ಭಾಷಣ ಮಾಡಲಿದ್ದಾರೆ. ರಾಜ್ಯದ ಎಲ್ಲಾ ಬಿಜೆಪಿ ಕಾರ್ಯಕರ್ತರು ಎಲ್ಲಾ ಬೂತ್​, ತಾಲೂಕು, ಜಿಲ್ಲಾ ಕೇಂದ್ರದಲ್ಲಿ ಸೇರಲು ಸೂಚನೆ ನೀಡಲಾಗಿದೆ. ನಾಳೆ (ಜೂ.28) ರಿಂದ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಒಂದು ವಾರ ಕಾಲ ಬಿಜೆಪಿ ಸಂಪರ್ಕ ಅಭಿಯಾನ ನಡೆಯುತ್ತದೆ.

ಜೂನ್​​ 28ರಿಂದ ಜುಲೈ 5ರವರೆಗೆ ಕರಪತ್ರ ವಿತರಣೆ ಅಭಿಯಾನ

ಜೂನ್​​ 28ರಿಂದ ಜುಲೈ 5ರವರೆಗೆ ಕರಪತ್ರ ವಿತರಣೆ ಅಭಿಯಾನ ನಡೆಯುತ್ತದೆ. ಪ್ರತಿ ಮನೆಗೆ ಕೇಂದ್ರದ ಸಾಧನೆಗಳ ಕರಪತ್ರ ವಿತರಿಸಲು ನಿರ್ಧರಿಸಲಾಗಿದೆ. ಮನೆ ಮನೆಗೆ ಪ್ರಧಾನಿ ಮೋದಿ ಹೆಸರಿನಲ್ಲಿ ಕರಪತ್ರ ವಿತರಣೆ ಮಾಡಲಾಗುತ್ತದೆ. ಸುಮಾರು 50 ಲಕ್ಷ ಮನೆಗಳಿಗೆ ಕರಪತ್ರ ವಿತರಣೆ ಮಾಡುವ ಗುರಿ ರಾಜ್ಯ ಬಿಜೆಪಿ ಘಟಕ ಹೊಂದಿದೆ.

ಇದನ್ನೂ ಓದಿ: ಬಿಜೆಪಿ ಸಭೆಯಲ್ಲಿ ಯತ್ನಾಳ್ – ನಿರಾಣಿ ಪರೋಕ್ಷ ವಾಗ್ದಾಳಿ, ಕಾರ್ಯಕರ್ತರ ಜಟಾಪಟಿ

ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಎರಡನೇ ಅವಧಿ. ಅವರು 2014ರಲ್ಲಿ ಮೊದಲ ಸಲ ಪ್ರಧಾನಮಂತ್ರಿಯಾಗಿದ್ದರು. ನರೇಂದ್ರ ಮೋದಿಯವರು 2019ರ ಮೇ 30 ರಂದು ಎರಡನೇ ಬಾರಿಗೆ ಭಾರತದ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಸ್ವಾತಂತ್ರ್ಯದ ನಂತರ ಜನಿಸಿದ ಮೊದಲ ಪ್ರಧಾನಿ ಎಂಬ ಕೀರ್ತಿಗೆ ಭಾಜನರು.

ಧಾರವಾಡ-ಬೆಂಗಳೂರು ವಂದೇ ಭಾರತ ರೈಲಿಗೆ ಚಾಲನೆ

ಅಲ್ಲದೇ ಇಂದು ಧಾರವಾಡ-ಬೆಂಗಳೂರು ವಂದೇ ಭಾರತ ರೈಲಿಗೆ ಪ್ರಧಾನಿ ಮೋದಿ ವರ್ಚುವಲ್ ಮೂಲಕ ಭೋಪಾಲ್‌ನ ರಾಣಿ ಕಮಲಾಪಥಿ ರೈಲ್ವೆ ನಿಲ್ದಾಣದಿಂದ ಚಾಲನೆ ನೀಡಲಿದ್ದಾರೆ. ಚಾಲನೆ ಬಳಿಕ ಧಾರವಾಡದ ರೈಲ್ವೆ ನಿಲ್ದಾಣದಲ್ಲಿ ಸಾಂಕೇತಿಕ ಕಾರ್ಯಕ್ರಮ ನಡೆಯುತ್ತದೆ. ಬಳಿಕ ಧಾರವಾಡದಿಂದ ರೈಲು ಹೊರಡಲಿದೆ.

ಧಾರವಾಡದಿಂದ ಬೆಳಗ್ಗೆ 10.30ಕ್ಕೆ ಹೊರಡುವ ರೈಲು ಸಂಜೆ 6.40ಕ್ಕೆ ಬೆಂಗಳೂರಿಗೆ ಆಗಮಿಸುತ್ತದೆ. ಪ್ರಧಾನಿ ಮೋದಿ ಇಂದು ಒಟ್ಟು 5 ವಂದೇ ಭಾರತ ರೈಲುಗಳಿಗೆ ಚಾಲನೆ ನೀಡಲಿದ್ದಾರೆ.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ದಿನಸಿ ಸಾಲ ವಾಪಾಸ್ ಕೇಳಿದ್ದಕ್ಕೆ ಅಂಗಡಿಗೇ ಬೆಂಕಿ ಹಚ್ಚಲು ಮುಂದಾದ ವ್ಯಕ್ತಿ!
ದಿನಸಿ ಸಾಲ ವಾಪಾಸ್ ಕೇಳಿದ್ದಕ್ಕೆ ಅಂಗಡಿಗೇ ಬೆಂಕಿ ಹಚ್ಚಲು ಮುಂದಾದ ವ್ಯಕ್ತಿ!
ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಸಂಘರ್ಷ ಶುರುವಾಗಿದೆ: ಅಶೋಕ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಸಂಘರ್ಷ ಶುರುವಾಗಿದೆ: ಅಶೋಕ
ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಅಸಹಾಯಕ ತಂದೆ
ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಅಸಹಾಯಕ ತಂದೆ
ಗಜಲಕ್ಷ್ಮಿ, ಮಹಾಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ಚಾಮುಂಡೇಶ್ವರಿ
ಗಜಲಕ್ಷ್ಮಿ, ಮಹಾಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ಚಾಮುಂಡೇಶ್ವರಿ
ಸ್ಟಂಟ್ ಮಾಡಲು ಹೋಗಿ ಕಾರಿನ ಸಮೇತ 300 ಅಡಿ ಆಳದ ಕಂದಕಕ್ಕೆ ಬಿದ್ದ ವ್ಯಕ್ತಿ
ಸ್ಟಂಟ್ ಮಾಡಲು ಹೋಗಿ ಕಾರಿನ ಸಮೇತ 300 ಅಡಿ ಆಳದ ಕಂದಕಕ್ಕೆ ಬಿದ್ದ ವ್ಯಕ್ತಿ
ಸೇತುವೆ ಲೋಕಾರ್ಪಣೆಗೊಂಡು ಎರಡು ಗಂಟೆಯಲ್ಲೇ ಮುಚ್ಚಿದ್ದೇಕೆ?
ಸೇತುವೆ ಲೋಕಾರ್ಪಣೆಗೊಂಡು ಎರಡು ಗಂಟೆಯಲ್ಲೇ ಮುಚ್ಚಿದ್ದೇಕೆ?
ಲಿಫ್ಟ್​ ಬಾಗಿಲು ಹಾಕಿದ್ದೇಕೆಂದು ಗದರಿ ಬಾಲಕನ ಕೈ ಕಚ್ಚಿದ ವ್ಯಕ್ತಿ
ಲಿಫ್ಟ್​ ಬಾಗಿಲು ಹಾಕಿದ್ದೇಕೆಂದು ಗದರಿ ಬಾಲಕನ ಕೈ ಕಚ್ಚಿದ ವ್ಯಕ್ತಿ
Daily Devotional: ಹುತ್ತವಿರುವ ನಿವೇಶನ ಖರೀದಿಸಿದರೆ ಲಾಭವೋ ನಷ್ಟವೋ?
Daily Devotional: ಹುತ್ತವಿರುವ ನಿವೇಶನ ಖರೀದಿಸಿದರೆ ಲಾಭವೋ ನಷ್ಟವೋ?
Daily horoscope: ಈ ರಾಶಿಯವರಿಗೆ ಆರ್ಥಿಕ ಲಾಭ ಮತ್ತು ವಾಹನ ಖರೀದಿ ಯೋಗ
Daily horoscope: ಈ ರಾಶಿಯವರಿಗೆ ಆರ್ಥಿಕ ಲಾಭ ಮತ್ತು ವಾಹನ ಖರೀದಿ ಯೋಗ