AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

9 Years Of PM Modi: ಇಂದು ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ನರೇಂದ್ರ ಮೋದಿಯವರು ಪ್ರಧಾನಿಯಾಗಿ 9 ವರ್ಷ ಪೂರೈಸಿದ ಹಿನ್ನೆಲೆ ಇಂದು ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಬೆಳಗ್ಗೆ 10.30ಕ್ಕೆ ವರ್ಚುವಲ್ ಮೂಲಕ ಭಾಷಣ ಮಾಡಲಿದ್ದಾರೆ.

9 Years Of PM Modi: ಇಂದು ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ
ಪ್ರಧಾನಿ ನರೇಂದ್ರ ಮೋದಿ
ವಿವೇಕ ಬಿರಾದಾರ
|

Updated on: Jun 27, 2023 | 6:58 AM

Share

ಬೆಂಗಳೂರು: ನರೇಂದ್ರ ಮೋದಿಯವರು (Narendra Modi) ಪ್ರಧಾನಿಯಾಗಿ (Prime Minister) 9 ವರ್ಷ ಪೂರೈಸಿದ ಹಿನ್ನೆಲೆ ಇಂದು (ಜೂ.27) ಬಿಜೆಪಿ (BJP) ಕಾರ್ಯಕರ್ತರನ್ನು ಉದ್ದೇಶಿಸಿ ಬೆಳಗ್ಗೆ 10.30ಕ್ಕೆ ವರ್ಚುವಲ್ ಮೂಲಕ ಭಾಷಣ ಮಾಡಲಿದ್ದಾರೆ. ರಾಜ್ಯದ ಎಲ್ಲಾ ಬಿಜೆಪಿ ಕಾರ್ಯಕರ್ತರು ಎಲ್ಲಾ ಬೂತ್​, ತಾಲೂಕು, ಜಿಲ್ಲಾ ಕೇಂದ್ರದಲ್ಲಿ ಸೇರಲು ಸೂಚನೆ ನೀಡಲಾಗಿದೆ. ನಾಳೆ (ಜೂ.28) ರಿಂದ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಒಂದು ವಾರ ಕಾಲ ಬಿಜೆಪಿ ಸಂಪರ್ಕ ಅಭಿಯಾನ ನಡೆಯುತ್ತದೆ.

ಜೂನ್​​ 28ರಿಂದ ಜುಲೈ 5ರವರೆಗೆ ಕರಪತ್ರ ವಿತರಣೆ ಅಭಿಯಾನ

ಜೂನ್​​ 28ರಿಂದ ಜುಲೈ 5ರವರೆಗೆ ಕರಪತ್ರ ವಿತರಣೆ ಅಭಿಯಾನ ನಡೆಯುತ್ತದೆ. ಪ್ರತಿ ಮನೆಗೆ ಕೇಂದ್ರದ ಸಾಧನೆಗಳ ಕರಪತ್ರ ವಿತರಿಸಲು ನಿರ್ಧರಿಸಲಾಗಿದೆ. ಮನೆ ಮನೆಗೆ ಪ್ರಧಾನಿ ಮೋದಿ ಹೆಸರಿನಲ್ಲಿ ಕರಪತ್ರ ವಿತರಣೆ ಮಾಡಲಾಗುತ್ತದೆ. ಸುಮಾರು 50 ಲಕ್ಷ ಮನೆಗಳಿಗೆ ಕರಪತ್ರ ವಿತರಣೆ ಮಾಡುವ ಗುರಿ ರಾಜ್ಯ ಬಿಜೆಪಿ ಘಟಕ ಹೊಂದಿದೆ.

ಇದನ್ನೂ ಓದಿ: ಬಿಜೆಪಿ ಸಭೆಯಲ್ಲಿ ಯತ್ನಾಳ್ – ನಿರಾಣಿ ಪರೋಕ್ಷ ವಾಗ್ದಾಳಿ, ಕಾರ್ಯಕರ್ತರ ಜಟಾಪಟಿ

ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಎರಡನೇ ಅವಧಿ. ಅವರು 2014ರಲ್ಲಿ ಮೊದಲ ಸಲ ಪ್ರಧಾನಮಂತ್ರಿಯಾಗಿದ್ದರು. ನರೇಂದ್ರ ಮೋದಿಯವರು 2019ರ ಮೇ 30 ರಂದು ಎರಡನೇ ಬಾರಿಗೆ ಭಾರತದ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಸ್ವಾತಂತ್ರ್ಯದ ನಂತರ ಜನಿಸಿದ ಮೊದಲ ಪ್ರಧಾನಿ ಎಂಬ ಕೀರ್ತಿಗೆ ಭಾಜನರು.

ಧಾರವಾಡ-ಬೆಂಗಳೂರು ವಂದೇ ಭಾರತ ರೈಲಿಗೆ ಚಾಲನೆ

ಅಲ್ಲದೇ ಇಂದು ಧಾರವಾಡ-ಬೆಂಗಳೂರು ವಂದೇ ಭಾರತ ರೈಲಿಗೆ ಪ್ರಧಾನಿ ಮೋದಿ ವರ್ಚುವಲ್ ಮೂಲಕ ಭೋಪಾಲ್‌ನ ರಾಣಿ ಕಮಲಾಪಥಿ ರೈಲ್ವೆ ನಿಲ್ದಾಣದಿಂದ ಚಾಲನೆ ನೀಡಲಿದ್ದಾರೆ. ಚಾಲನೆ ಬಳಿಕ ಧಾರವಾಡದ ರೈಲ್ವೆ ನಿಲ್ದಾಣದಲ್ಲಿ ಸಾಂಕೇತಿಕ ಕಾರ್ಯಕ್ರಮ ನಡೆಯುತ್ತದೆ. ಬಳಿಕ ಧಾರವಾಡದಿಂದ ರೈಲು ಹೊರಡಲಿದೆ.

ಧಾರವಾಡದಿಂದ ಬೆಳಗ್ಗೆ 10.30ಕ್ಕೆ ಹೊರಡುವ ರೈಲು ಸಂಜೆ 6.40ಕ್ಕೆ ಬೆಂಗಳೂರಿಗೆ ಆಗಮಿಸುತ್ತದೆ. ಪ್ರಧಾನಿ ಮೋದಿ ಇಂದು ಒಟ್ಟು 5 ವಂದೇ ಭಾರತ ರೈಲುಗಳಿಗೆ ಚಾಲನೆ ನೀಡಲಿದ್ದಾರೆ.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ