AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಚ್ಚರಿ ಅನ್ನಿಸಿದರೂ ಸತ್ಯ: ಹಾಸ್ಟೆಲ್​​ನಲ್ಲಿ ಮಗುವಿಗೆ ಜನ್ಮ ನೀಡಿದ 9ನೇ ತರಗತಿ ವಿದ್ಯಾರ್ಥಿನಿ!

ಹಾಸ್ಟೆಲ್‌ನಲ್ಲಿ ಅಪ್ರಾಪ್ತ ಬಾಲಕಿಯರು ಅಥವಾ ವಿದ್ಯಾರ್ಥಿನಿಯರು ಮಗುವಿಗೆ ಜನ್ಮ ನೀಡುವಂತಹ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಆಘಾತಕಾರಿ ಬೆಳವಣಿಗೆಯಾಗಿ ಹೊರಹೊಮ್ಮಿವೆ. ಇಂತಹ ಘಟನೆಗಳು ಹಾಸ್ಟೆಲ್ ಸಿಬ್ಬಂದಿ ಹಾಗೂ ಮಕ್ಕಳ ರಕ್ಷಣೆಯ ವ್ಯವಸ್ಥೆಯ ನಿರ್ಲಕ್ಷ್ಯವನ್ನು ಎತ್ತಿ ತೋರಿಸುತ್ತವೆ. ಕೊಪ್ಪಳ, ಯಾದಗಿರಿ ಬೆನ್ನಲ್ಲೇ ಇದೀಗ ಉತ್ತರ ಕನ್ನಡ ಜಿಲ್ಲೆಯಲ್ಲೂ ಸಹ 9ನೇ ತರಗತಿ ವಿದ್ಯಾರ್ಥಿನಿ ಹಾಸ್ಟೆಲ್​​ನಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ.

ಅಚ್ಚರಿ ಅನ್ನಿಸಿದರೂ ಸತ್ಯ: ಹಾಸ್ಟೆಲ್​​ನಲ್ಲಿ ಮಗುವಿಗೆ ಜನ್ಮ ನೀಡಿದ 9ನೇ ತರಗತಿ ವಿದ್ಯಾರ್ಥಿನಿ!
ಪ್ರಾತಿನಿಧಿಕ ಚಿತ್ರ
ಸೂರಜ್​, ಮಹಾವೀರ್​ ಉತ್ತುರೆ
| Edited By: |

Updated on:Jun 12, 2026 | 3:21 PM

Share

ಕಾರವಾರ, (ಜೂನ್ 12): 9ನೇ ತರಗತಿ ವಿದ್ಯಾರ್ಥಿನಿಯೋರ್ವಳು (Student) ಹಾಸ್ಟೆಲ್​​​ನಲ್ಲಿ (Hostel) ಮಗುವಿಗೆ ಜನ್ಮ ನೀಡಿದ ಆಘಾತಕಾರಿ ಘಟನೆ  ಉತ್ತರ ಕನ್ನಡ (Uttara Kannada) ಜಿಲ್ಲೆಯ ಶಿರಸಿ (Sirsi) ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಚ್ಚರಿ ಅನ್ನಿಸಿದರೂ ಸತ್ಯ. ಶಿರಸಿ ತಾಲೂಕಿನ ಹಾಸ್ಟೆಲ್ ನಲ್ಲಿದ್ದ 9ನೇ ತರಗತಿ ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ್ದು, ಸದ್ಯ ಮಗುವಿನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಶಿರಸಿ ತಹಶಿಲ್ದಾರ್ ಹಾಗೂ ಪಿಎಸ್ಐ ಭೇಟಿ ಮಾಹಿತಿ ಪಡೆದುಕೊಂಡಿದ್ದಾರೆ. ಇನ್ನು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ಮುಖ್ಯಾಂಶಗಳು

  • ಮಗುವಿಗೆ ಜನ್ಮ ನೀಡಿದ ಹಾಸ್ಟೆಲ್ ವಿದ್ಯಾರ್ಥಿನಿ
  • ಶಿರಸಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ
  • ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಹಾಸ್ಟೆಲ್ ನಲ್ಲಿರುತ್ತಿದ್ದ 9 ನೇ ತರಗತಿ ವಿದ್ಯಾರ್ಥಿನಿ.
  • ಸದ್ಯ ಮಗುವಿನ ಪರಿಸ್ಥಿತಿ ಗಂಭೀರವಾಗಿದ್ದು, ಸ್ಥಳಕ್ಕೆ ಶಿರಸಿ ತಹಶಿಲ್ದಾರ ಹಾಗೂ ಪಿಎಸ್ಐ ಭೇಟಿ

ಇದನ್ನೂ ಓದಿ: ಮಗುವಿಗೆ ಜನ್ಮ ನೀಡಿದ 9ನೇ ಕ್ಲಾಸ್ ಬಾಲಕಿ; ಹಾಸ್ಟೆಲ್​ನಲ್ಲಿದ್ದ ಬಾಲಕಿ ಗರ್ಭಿಣಿಯಾಗಿದ್ದು ಹೇಗೆ?

ಆಕೆ 9ನೇ ತರಗತಿ ಅಂದ್ರೆ ಏನೋ ಹದಿನಾಲ್ಕು ಹದಿನೈದು ವರ್ಷ ಇರಬಹುದು. ತಮ್ಮ ಮಗಳು ಹಾಸ್ಟೆಲ್​ನಲ್ಲಿ ಸುರಕ್ಷಿತಳಾಗಿದ್ದಾಳೆ ಎಂದು ಆಕೆಯ ಪೋಷಕರು ಕೂಡ ನಿರಾಳವಾಗಿದ್ದರು. ಆದ್ರೆ, ಇಷ್ಟು ಚಿಕ್ಕ ವಯಸ್ಸಿನಲ್ಲಿ ಮಗುವನ್ನು ಹೇರಿರುವ ಸುದ್ದಿ ಕೇಳಿ ಶಾಕ್​​​ ಆಗಿದ್ದಾರೆ. ಬಾಲಕಿಯ ಈ ಸ್ಥಿತಿಗೆ ಯಾರು ಕಾರಣ? ಗರ್ಭಿಣಿಯಾಗಿರುವುದು ಗೊತ್ತಾಗಿಲ್ವಾ ಹೀಗೆ ಹತ್ತಾರು ಪ್ರಶ್ನೆಗಳು ಉದ್ಭವಿಸಿವೆ. ಯಾಕಂದ್ರೆ, ಮೊನ್ನೆ ಅಷ್ಟೇ ಶಾಲೆಗಳು ಪ್ರಾರಂಭವಾಗಿದ್ದು, 10 ದಿನದಲ್ಲೇ ಮಗುವಿಗೆ ಜನ್ಮ ನೀಡಿರುವುದು ನಿಜಕ್ಕೂ ಅಚ್ಚರಿ ಮೂಡಿಸಿದೆ. ಸದ್ಯ ಪೊಲೀಸರು ತನಿಖೆ ನಡೆಸಿದ್ದಾರೆ.

Published On - 3:15 pm, Fri, 12 June 26

Follow Us
ಹೀರೋ ಆಗಬೇಕೆಂಬ ಕನಸು ಈಡೇರಿಸಿಕೊಂಡ ರೈತ ಚೇತನ್: ವಿಡಿಯೋ
ಹೀರೋ ಆಗಬೇಕೆಂಬ ಕನಸು ಈಡೇರಿಸಿಕೊಂಡ ರೈತ ಚೇತನ್: ವಿಡಿಯೋ
ಬಾಗಲಕೋಟೆಯಲ್ಲಿ ಏಕಾಏಕಿ ಕಾರು ಸ್ಫೋಟ: ಬಾಂಬ್ ಶಂಕೆ, ಖಾಕಿ ತನಿಖೆ
ಬಾಗಲಕೋಟೆಯಲ್ಲಿ ಏಕಾಏಕಿ ಕಾರು ಸ್ಫೋಟ: ಬಾಂಬ್ ಶಂಕೆ, ಖಾಕಿ ತನಿಖೆ
ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ದಿಟ್ಟ ನಿರ್ಧಾರ ಕೈಗೊಂಡ ಮೋದಿ, ಏನದು?
ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ದಿಟ್ಟ ನಿರ್ಧಾರ ಕೈಗೊಂಡ ಮೋದಿ, ಏನದು?
ಇವಾನ್ಸ್ ಹಿಡಿದ ಅತ್ಯದ್ಭುತ ಕ್ಯಾಚ್​​ಗೆ ಶತಕ ವಂಚಿತರಾದ ವೈಭವ್
ಇವಾನ್ಸ್ ಹಿಡಿದ ಅತ್ಯದ್ಭುತ ಕ್ಯಾಚ್​​ಗೆ ಶತಕ ವಂಚಿತರಾದ ವೈಭವ್
ಯುವಕರೊಂದಿಗೆ ಮೋದಿ ಸಂವಾದ ಹೇಗಿತ್ತು? ವಿದ್ಯಾರ್ಥಿಗಳು ಹೇಳಿದ್ದೇನು?
ಯುವಕರೊಂದಿಗೆ ಮೋದಿ ಸಂವಾದ ಹೇಗಿತ್ತು? ವಿದ್ಯಾರ್ಥಿಗಳು ಹೇಳಿದ್ದೇನು?
102 ಮೀ. ಉದ್ದದ ಸಿಕ್ಸರ್ ಬಾರಿಸಿದ ವೈಭವ್; ವಿಡಿಯೋ
102 ಮೀ. ಉದ್ದದ ಸಿಕ್ಸರ್ ಬಾರಿಸಿದ ವೈಭವ್; ವಿಡಿಯೋ
ವಿಕಸಿತ್ ವೈಬ್ರೆಂಟ್‌ ವಿಲೇಜ್‌:ಯುವಕರೊಂದಿಗೆ ಮೋದಿ ಸಂವಾದ ನೇರ ಪ್ರಸಾರ
ವಿಕಸಿತ್ ವೈಬ್ರೆಂಟ್‌ ವಿಲೇಜ್‌:ಯುವಕರೊಂದಿಗೆ ಮೋದಿ ಸಂವಾದ ನೇರ ಪ್ರಸಾರ
ಬಾಗಲಕೋಟೆಯ ಹಿಪ್ಪರಗಿ ಬಳಿ ಕಾರು ಸ್ಫೋಟದ ಬಗ್ಗೆ ಎಸ್​ಪಿ ಹೇಳಿದ್ದೇನು?
ಬಾಗಲಕೋಟೆಯ ಹಿಪ್ಪರಗಿ ಬಳಿ ಕಾರು ಸ್ಫೋಟದ ಬಗ್ಗೆ ಎಸ್​ಪಿ ಹೇಳಿದ್ದೇನು?
ರಾಜ್ ಬಿ. ಶೆಟ್ಟಿ ಹೋದಲ್ಲೆಲ್ಲ ‘ಕರಾವಳಿ’ ಸಿನಿಮಾಗೆ ಭರ್ಜರಿ ಪ್ರತಿಕ್ರಿಯೆ
ರಾಜ್ ಬಿ. ಶೆಟ್ಟಿ ಹೋದಲ್ಲೆಲ್ಲ ‘ಕರಾವಳಿ’ ಸಿನಿಮಾಗೆ ಭರ್ಜರಿ ಪ್ರತಿಕ್ರಿಯೆ
ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಲ್ಹಾದ್ ಜೋಶಿ ಅಧಿಕಾರ ಸ್ವೀಕಾರ
ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಲ್ಹಾದ್ ಜೋಶಿ ಅಧಿಕಾರ ಸ್ವೀಕಾರ