ಸಿಡಿ ಸಂತ್ರಸ್ತೆ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್​; ಮಗಳ ಹೇಳಿಕೆ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ತಂದೆ

ಸಿಡಿ ಸಂತ್ರಸ್ತೆ ನಿನ್ನೆ ಕೋರ್ಟ್​ಗೆ ಹಾಜರಾಗಿ ಜಡ್ಜ್ ಎದುರು ಹೇಳಿಕೆಗಳನ್ನು ದಾಖಲಿಸಿದ್ದಾಳೆ. ಅದಾದ ಬಳಿಕ ಎಸ್​ಐಟಿ ವಶದಲ್ಲಿದ್ದು, ವಿಚಾರಣೆಗೆ ಒಳಪಟ್ಟಿದ್ದಾಳೆ. ನಿನ್ನೆ ಆಕೆ ಕೋರ್ಟ್​ಗೆ ಬರುತ್ತಿದ್ದಂತೆ ಪಾಲಕರು ಗಾಬರಿಗೊಂಡು, ಕಣ್ಣೀರು ಹಾಕಿದ್ದರು.

ಸಿಡಿ ಸಂತ್ರಸ್ತೆ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್​; ಮಗಳ ಹೇಳಿಕೆ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ತಂದೆ
ಸಿಡಿ ಸಂತ್ರಸ್ತೆಯ ತಂದೆ
Edited By:

Updated on: Mar 31, 2021 | 7:17 PM

ಬೆಂಗಳೂರು: ಸಿಡಿ ಸಂತ್ರಸ್ತೆ ಪ್ರಕರಣಕ್ಕೆ ಮತ್ತೊಂದು ಬಿಗ್ ಟ್ವಿಸ್ಟ್​ ಸಿಕ್ಕಿದೆ. ಯುವತಿಯ ತಂದೆ ಹೈಕೋರ್ಟ್​ ಮೆಟ್ಟಿಲೇರಿದ್ದಾರೆ. ನನ್ನ ಮಗಳು ನೀಡಿರುವ ಹೇಳಿಕೆಗಳನ್ನು ಯಾವ ಕಾರಣಕ್ಕೂ ಪರಿಗಣಿಸಬೇಡಿ.. CRPC 164 ಅಡಿಯಲ್ಲಿ ದಾಖಲು ಮಾಡಿಕೊಳ್ಳಲಾದ ಹೇಳಿಕೆಗಳನ್ನು ರದ್ದುಗೊಳಿಸಿ ಎಂದು ಹೈಕೋರ್ಟ್​ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ.

ನನ್ನ ಮಗಳು ಯಾವುದೋ ಒತ್ತಡಕ್ಕೆ ಒಳಗಾಗಿ ಹೇಳಿಕೆ ನೀಡಿದ್ದಾಗಿ ಶಂಕೆ ವ್ಯಕ್ತವಾಗುತ್ತಿದೆ. ಆಕೆ ಸ್ವ ಇಚ್ಛೆಯಿಂದ ಹೇಳಿಕೆ ನೀಡುವ ಸ್ಥಿತಿಯಲ್ಲಿ ಈಗಿಲ್ಲ. ಕೆಲ ದಿನಗಳ ಕಾಲ ಆಕೆಯನ್ನು ಏಕಾಂತದಲ್ಲಿ ಇರಿಸಬೇಕು ಅಥವಾ ನ್ಯಾಯಾಂಗದ ಸುಪರ್ಧಿಯಲ್ಲಿ ಇಡಬೇಕು. ಅದೂ ಆಗದೆ ಇದ್ದರೆ ಕೋರ್ಟ್ ಸೂಚಿಸಿದ ಸ್ವತಂತ್ರ್ಯ ಸಂಸ್ಥೆಯ ಸುಪರ್ಧಿಯಲ್ಲಿ ಇಡಬೇಕು. ಅಂದಾಗ ಮಾತ್ರ ನನ್ನ ಮಗಳು ಸ್ವ ಇಚ್ಛೆಯಿಂದ ಹೇಳಿಕೆ ನೀಡಲು ಸಾಧ್ಯ. ಈ ವಿಚಾರವನ್ನು ಹಿಂದೆ ಮಾಧ್ಯಮಗಳ ಮೂಲಕವೂ ಮನವಿ ಮಾಡಿದ್ದೇನೆ ಎಂದು ಹೈಕೋರ್ಟ್​ಗೆ ಸಲ್ಲಿಸಿದ ಅರ್ಜಿಯಲ್ಲಿ ಯುವತಿಯ ತಂದೆ ಉಲ್ಲೇಖಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಿಡಿ ಸಂತ್ರಸ್ತೆ ನಿನ್ನೆ ಕೋರ್ಟ್​ಗೆ ಹಾಜರಾಗಿ ಜಡ್ಜ್ ಎದುರು ಹೇಳಿಕೆಗಳನ್ನು ದಾಖಲಿಸಿದ್ದಾಳೆ. ಅದಾದ ಬಳಿಕ ಎಸ್​ಐಟಿ ವಶದಲ್ಲಿದ್ದು, ವಿಚಾರಣೆಗೆ ಒಳಪಟ್ಟಿದ್ದಾಳೆ. ನಿನ್ನೆ ಆಕೆ ಕೋರ್ಟ್​ಗೆ ಬರುತ್ತಿದ್ದಂತೆ ಪಾಲಕರು ಗಾಬರಿಗೊಂಡು, ಕಣ್ಣೀರು ಹಾಕಿದ್ದರು. ಆಕೆಯ ತಂದೆ-ತಾಯಿ, ಇಬ್ಬರು ಸಹೋದರರು ಈಗಾಗಲೇ ಡಿ.ಕೆ.ಶಿವಕುಮಾರ್​ ವಿರುದ್ಧ ಆರೋಪ ಮಾಡಿದ್ದಾರೆ. ವಾಪಸ್ ತಮ್ಮ ಬಳಿ ಬರುವಂತೆ ಮಗಳಿಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಕೆಪಿಸಿಸಿ ಕಚೇರಿಯಿಂದಲೇ ಲೈಂಗಿಕ ಸಿಡಿ ಕೇಸ್​ ನಿರ್ವಹಣೆಯಾಗುತ್ತಿದೆ: ಬಿಜೆಪಿ ಟ್ವೀಟ್

ಇದನ್ನೂ ಓದಿ: ಸಿಡಿ ಯುವತಿಗೆ ವಿಶ್ರಾಂತಿ ಇಲ್ಲ; ತಲೆ ನೋವು, ಕೈಕಾಲು ನಡುಗುತ್ತಿದೆ: ಬೌರಿಂಗ್ ಆಸ್ಪತ್ರೆಯಲ್ಲಿ ಕೌನ್ಸಿಲಿಂಗ್

YouTube video player

Published On - 7:14 pm, Wed, 31 March 21

Follow Us