AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಕಳವು ಮಾಡುತ್ತಿದ್ದ ಬಿಹಾರಿ ಗ್ಯಾಂಗ್ ಬಂಧನ

ಬೆಂಗಳೂರಿನ ಪಿಜಿಯಲ್ಲಿ ವಾಸವಿದ್ದ ಆರೋಪಿಯೊಬ್ಬ ಬಿಹಾರದಿಂದ ಸ್ನೇಹಿತರನ್ನ ಕರೆಸಿ ಕೃತ್ಯ ನಡೆಸುತ್ತಿದ್ದ. ಬಿಹಾರದಿಂದ ಬಂದಿದ್ದ ಆರೋಪಿಗಳು ಕೋರಮಂಗಲದ ಮನೆಯೊಂದರಲ್ಲಿ ಕಳವು ಮಾಡಿದ್ದರು.

ಬೆಂಗಳೂರಿನಲ್ಲಿ ಕಳವು ಮಾಡುತ್ತಿದ್ದ ಬಿಹಾರಿ ಗ್ಯಾಂಗ್ ಬಂಧನ
ಬಂಧಿತ ಆರೋಪಿಗಳು
TV9 Web
| Edited By: sandhya thejappa|

Updated on: Jul 19, 2021 | 10:22 AM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳವು ಮಾಡುತ್ತಿದ್ದ ಬಿಹಾರಿ ಗ್ಯಾಂಗ್​ನ ಪೊಲೀಸರು ಬಂಧಿಸಿದ್ದಾರೆ. ಕೋರಮಂಗಲ ಠಾಣೆ ಪೊಲೀಸರು ಪಂಕಜ್ ಕುಮಾರ್, ಚೋಟು ಕುಮಾರ್, ರಂಜಿತ್ ಕುಮಾರ್, ಗೌತಮ್ ಎಂಬುವವರನ್ನು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 20 ಲಕ್ಷ ರೂ. ಮೌಲ್ಯದ ಬೆಳ್ಳಿ ವಸ್ತುಗಳು ಮತ್ತು ವಾಚ್​ಗಳನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ಮನೆ ಮಾಲೀಕರು ಹೊರ ರಾಜ್ಯಕ್ಕೆ ಹೋದಾಗ ಕೃತ್ಯ ಎಸಗಿದ್ದರು ಎಂಬ ಮಾಹಿತಿ ತಿಳಿದುಬಂದಿದೆ.

ಬೆಂಗಳೂರಿನ ಪಿಜಿಯಲ್ಲಿ ವಾಸವಿದ್ದ ಆರೋಪಿಯೊಬ್ಬ ಬಿಹಾರದಿಂದ ಸ್ನೇಹಿತರನ್ನ ಕರೆಸಿ ಕೃತ್ಯ ನಡೆಸುತ್ತಿದ್ದ. ಬಿಹಾರದಿಂದ ಬಂದಿದ್ದ ಆರೋಪಿಗಳು ಕೋರಮಂಗಲದ ಮನೆಯೊಂದರಲ್ಲಿ ಕಳವು ಮಾಡಿದ್ದರು. ಈ ಘಟನೆ ಸಂಬಂಧ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಗದಗದಲ್ಲಿ ವ್ಯಕ್ತಿಯ ಭೀಕರ ಕೊಲೆ ಗದಗ: ನಗರದ ತೀಸ್ ಬಿಲ್ಡಿಂಗ್ ಬಳಿ ವ್ಯಕ್ತಿಯ ಕೊಲೆಯಾಗಿದ್ದು, ಬೆಟಗೇರಿ ನಿವಾಸಿ ಗುಂಡಪ್ಪ ಚಲವಾದ(28) ಎಂಬುವವರು ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದೆ. ಹಣಕಾಸಿನ ವಿಷಯಕ್ಕೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಗುಂಡಪ್ಪ ಬ್ಯಾಂಕ್ ರಸ್ತೆಯಲ್ಲಿ ಹಣ್ಣು ಮಾರಾಟ ಮಾರಿ ಜೀವನ ಮಾಡುತ್ತಿದ್ದ. ದುಷ್ಕರ್ಮಿಗಳು ಮಚ್ಚು, ಚಾಕುವಿನಿಂದ ಕತ್ತು, ತಲೆ, ಎದೆ ಭಾಗದ ಇರಿದು ಹತ್ಯೆ ಎಸಗಿದ್ದಾರೆ. ಸ್ಥಳಕ್ಕೆ ಡಿವೈಎಸ್​ಪಿ ಶಿವಾನಂದ ಪವಾಡಶೆಟ್ಟರ ಹಾಗೂ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ

ಕೆಆರ್​ಎಸ್ ಡ್ಯಾಂ ಬಳಿ ಕಲ್ಲುಗಳ ಕುಸಿತ: ಸ್ಥಳಕ್ಕೆ ಭೇಟಿ ನೀಡಿ, ಶಾಸಕ‌ ರವೀಂದ್ರ ಶ್ರೀಕಂಠಯ್ಯ ಹೇಳಿದ್ದೇನು?

ಬೆಂಗಳೂರಿನಿಂದ ಹೊರಟ ಐರಾವತ ಬಸ್ ಅರಣ್ಯಕ್ಕೆ ನುಗ್ಗಿ, ಮರಕ್ಕೆ ಡಿಕ್ಕಿ: ಚಾಲಕ ಸ್ಥಳದಲ್ಲೇ ದುರ್ಮರಣ

(A Bihari gang has been arrested by the police in Bangalore)

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ