AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಂತಿನಗರದಲ್ಲಿ ಭೀಕರ ಅಪಘಾತ: ಬೈಕ್​ ಸವಾರರ ಪಾಲಿಗೆ ಯಮನಾದ ಆ್ಯಂಬುಲೆನ್ಸ್​

ಶಾಂತಿನಗರದಲ್ಲಿ ಭೀಕರ ಅಪಘಾತ: ಬೈಕ್​ ಸವಾರರ ಪಾಲಿಗೆ ಯಮನಾದ ಆ್ಯಂಬುಲೆನ್ಸ್​

ಪ್ರಸನ್ನ ಹೆಗಡೆ
|

Updated on:Nov 02, 2025 | 6:42 AM

Share

ವೇಗವಾಗಿ ಬಂದ ಆ್ಯಂಬುಲೆನ್ಸ್​ ಬೈಕ್​ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಶಾಂತಿನಗರ ಬಸ್ ನಿಲ್ದಾಣ ಬಳಿ ನಡೆದಿದೆ. ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಬಳಿಕ ಸ್ಥಳದಿಂದ ಆಂಬ್ಯುಲೆನ್ಸ್​ ಚಾಲಕ ಪರಾರಿಯಾಗಿದ್ದಾನೆ.

ಬೆಂಗಳೂರು, ನವೆಂಬರ್​ 02: ನಗರದ ಶಾಂತಿನಗರ ಬಸ್ ನಿಲ್ದಾಣ ಬಳಿ ಭೀಕರ ಅಪಘಾತ (Accident) ನಡೆದಿದ್ದು, ವೇಗವಾಗಿ ಬಂದ ಆ್ಯಂಬುಲೆನ್ಸ್​ 2 ಬೈಕ್​ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಮೃತ ದುರ್ದೈವಿಗಳನ್ನ ಬೈಕ್​ನಲ್ಲಿದ್ದ ಇಸ್ಮಾಯಿಲ್(40) ಮತ್ತು ಸಮೀನ ಬಾನು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರೆಡ್​ ಸಿಗ್ನಲ್​ ಇದ್ದ ಕಾರಣ ನಿಂತಿದ್ದ ಬೈಕ್​ ಸವಾರರಿಗೆ ರಿಚ್ಮಂಡ್ ಸರ್ಕಲ್ ಕಡೆಯಿಂದ ವೇಗವಾಗಿ ಬಂದ ಆಂಬ್ಯುಲೆನ್ಸ್​ ಡಿಕ್ಕಿ ಹೊಡೆದಿದೆ. 50 ಮೀಟರ್ ದೂರ ಬೈಕ್​ಗಳನ್ನ ಆಂಬ್ಯುಲೆನ್ಸ್ ಎಳೆದೊಯ್ದಿದ್ದು, ಬಳಿಕ ಪೊಲೀಸ್ ಚೌಕಿಗೆ ಗುದ್ದಿದೆ. ಅಪಘಾತ ಬಳಿಕ ಸ್ಥಳದಿಂದ ಆಂಬ್ಯುಲೆನ್ಸ್​ ಚಾಲಕ ಪರಾರಿಯಾಗಿದ್ದಾನೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.

 

Published on: Nov 02, 2025 06:35 AM