AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿಯಲ್ಲಿ ಬಾಲಕನನ್ನ ಕೂಡಿಹಾಕಿ ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ; ಐವರು ವಶಕ್ಕೆ

ಕಳೆದ ಎರಡ್ಮೂರು ತಿಂಗಳ ಹಿಂದೆ ಸೆಕೆಂಡ್‌ ಹ್ಯಾಂಡ್ ಕಾರು ಮಾರಾಟ ಮಾಡುವ ಯುವಕರನ್ನ ಬೆತ್ತಲೆಗೊಳಿಸಿ ಮರ್ಮಾಂಗಕ್ಕೆ ವಿದ್ಯುತ್ ಶಾಕ್ ಕೊಟ್ಟ ಸುದ್ದಿ ರಾಜ್ಯಾದ್ಯಂತ ದೊಡ್ಡಮಟ್ಟದಲ್ಲಿ ಆಕ್ರೋಶಕ್ಕೆ ಕಾರಣವಾಗಿತ್ತು. ಆ ಘಟನೆ ಮಾಸುವ ಮುನ್ನವೇ ಇದೀಗ ಅದೇ ಮಾದರಿಯಲ್ಲಿ ಮತ್ತೊಂದು ಘಟನೆ ಕಲಬುರಗಿಯಲ್ಲಿ ನಡೆದಿದೆ. ಅಪ್ರಾಪ್ತ ಬಾಲಕನನ್ನ ಕೋಣೆಯಲ್ಲಿ ಕೂಡಿಹಾಕಿ ಸಿಗರೇಟ್‌ನಿಂದ ಕೈ ಕಾಲಿಗೆ ಸುಟ್ಟು ಕಿಡಿಗೇಡಿಗಳು ಅಟ್ಟಹಾಸ ಮೆರೆದಿದ್ದಾರೆ. ಅಷ್ಟಕ್ಕೂ ಈ ಪೈಶಾಚಿಕ ಕೃತ್ಯಕ್ಕೆ ಕಾರಣ ಏನು ಅಂತೀರಾ? ಈ ಸ್ಟೋರಿ ಓದಿ.

ಕಲಬುರಗಿಯಲ್ಲಿ ಬಾಲಕನನ್ನ ಕೂಡಿಹಾಕಿ ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ; ಐವರು ವಶಕ್ಕೆ
ಕಲಬುರಗಿಯಲ್ಲಿ ಬಾಲಕನನ್ನ ಕೂಡಿಹಾಕಿ ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Aug 07, 2024 | 10:41 PM

Share

ಕಲಬುರಗಿ, ಆ.07: ಮನೆಯಲ್ಲಿನ ಹುಂಡಿ ಹಣ ಕದ್ದಿದಿಯಾ ಎಂದು ಆರೋಪಿಸಿ ಅಪ್ರಾಪ್ತ ಬಾಲಕನೋರ್ವನನ್ನ ಕೋಣೆಯಲ್ಲಿ ಕೂಡಿಹಾಕಿ ಸಿಗರೇಟ್‌ನಿಂದ ಕೈ ಕಾಲಿಗೆ ಸುಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಕಲಬುರಗಿ(Kalaburagi) ನಗರದಲ್ಲಿ ನಡೆದಿದೆ. ನಗರದ ದುಬೈ ಕಾಲೋನಿಯ ನಿವಾಸಿ 14 ವರ್ಷದ ಬಾಲಕ ಅಭಿಷೇಕ್ ಚಿತ್ರಹಿಂಸೆಗೊಳಗಾಗಿದ್ದಾನೆ. ಅಂದಹಾಗೇ ಎಂದಿನಂತೆ ಅಭಿಷೇಕ್ ಶಾಲೆಗೆ ಹೋಗಿ ಬರುತ್ತಿದ್ದ. ಈ ವೇಳೆ ಶಿವಕುಮಾರ್ ಮನೆಯಲ್ಲಿ ಹುಂಡಿ ಹಣ ಕದ್ದಿದಿಯಾ ಎಂದು ಶ್ರೀಶೈಲ್ ವಾರದ್ ಎಂಬಾತನ ಕೋಣೆಗೆ ಕರೆದುಕೊಂಡು ಹೋಗಿ ಸಿಗರೇಟ್‌ನಿಂದ ಕೈಕಾಲಿಗೆ ಸುಟ್ಟಿದ್ದಾರೆ. ಶಿವಕುಮಾರ್, ಜಗನ್ನಾಥ್, ಸೈಬಣ್ಣ, ಮಲ್ಲಿಕ್, ಆದಿತ್ಯ ಸೇರಿಕೊಂಡು ಬಾಲಕನಿಗೆ ಹಣ ಕದ್ದಿದ್ದು ಒಪ್ಪಿಕೋ ಎಂದು ತಲೆ ಕೆಳಗೆ, ಕಾಲು ಮೇಲೆ ಮಾಡಿ ಅಮಾನುಷ ಕೃತ್ಯ ಎಸಗಿದ್ದಾರೆ.

ಇನ್ನು ಚಿತ್ರಹಿಂಸೆಗೊಳಗಾದ ಅಪ್ರಾಪ್ತ ಬಾಲಕನ ಪೋಷಕರು ಹೈದರಾಬಾದ್‌ನಲ್ಲಿ ಕೆಲಸ ಮಾಡುತ್ತಿದ್ದು, ವಿಷಯ ತಿಳಿಯುತ್ತಲೆ ಓಡೊಡಿ ಬಂದಿದ್ದಾರೆ. ಅಪ್ರಾಪ್ತ ಬಾಲಕ ಅಭಿಷೇಕ್ ತಾನು ಹಣ ಕದ್ದಿಲ್ಲವೆಂದರೂ, ನೀನೇ ಹಣ ಕದ್ದಿದಿಯಾ ಒಪ್ಪಿಕೋ ಎಂದು ನಾಲ್ಕೈದು ಜನ ಯುವಕರು ಸೇರಿಕೊಂಡು ಸಿಗರೇಟ್‌ನಿಂದ ಸುಟ್ಟು ಸತತ ಮೂರ್ನಾಲ್ಕು ಗಂಟೆ ಥಳಿಸಿದ್ದಲ್ಲದೇ ಫ್ಯಾನ್‌ಗೆ ಬಾಲಕನ ಕಾಲು ಸಿಲುಕಿಸಲು ಯತ್ನಿಸಿದ್ದಾರೆ. ಬಾಲಕ ಎಷ್ಟೇ ಕೂಗಾಟ, ಚಿರಾಟ ಮಾಡಿದರೂ ಸಹ ನೆರೆ-ಹೊರೆಯವರು ಸಹಾಯಕ್ಕೆ ಬರಲಿಲ್ಲ. ಬಳಿಕ ನೀನು ಒಪ್ಪಿಕೊಳ್ಳದಿದ್ದರೆ ನಿನ್ನನ್ನ ಸಾಯಿಸುವುದಾಗಿ ಧಮ್ಕಿ ಹಾಕಿದ್ದಾರೆ. ಇಲ್ಲವಾದಲ್ಲಿ ನೀನು ಸರಾಯಿ ಕುಡಿದಿರೋ, ಸಿಗರೇಟ್‌ ಸೇದಿರೋ ವಿಡಿಯೋಗಳನ್ನ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಕೊನೆಗೆ ಅವರ ಚಿತ್ರಹಿಂಸೆ ತಾಳಲಾರದೇ ಹೌದು ನಾನೇ ಹುಂಡಿ ಹಣ ಕಳ್ಳತನ ಮಾಡಿರುವುದಾಗಿ ಬಾಲಕ ಒಪ್ಪಿಕೊಂಡಿದ್ದಾನೆ.

ಇದನ್ನೂ ಓದಿ:ಹಾಡಹಗಲೇ ಅಕ್ಕ-ತಂಗಿಯನ್ನು ರಸ್ತೆಯಿಂದ ಕಿಡ್ನಾಪ್ ಮಾಡಿ, ಕಚ್ಚಿ ಚಿತ್ರಹಿಂಸೆ ನೀಡಿದ ಯುವಕರು

ಐವರ ವಿರುದ್ಧ ಎಫ್‌ಐಆರ್ ದಾಖಲು

ಇದಾದ ಬಳಿಕ ನೀನು ನಮಗೆ ಐದು ಸಾವಿರ ರೂಪಾಯಿ ಹಣ ಕೊಡಬೇಕು ಮತ್ತು ಚಿನ್ನಾಭರಣ ಕಳ್ಳತನ ಮಾಡಿಕೊಂಡು ನಮಗೆ ತಂದುಕೊಡಬೇಕೆಂದು ಆವಾಜ್ ಹಾಕಿ ಬಾಲಕನನ್ನ ಬಿಟ್ಟು ಕಳಿಸಿದ್ದಾರೆ. ಇನ್ನು ಘಟನೆ ಸಂಬಂಧ ಚೌಕ್ ಠಾಣೆಯಲ್ಲಿ ಐವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಎಫ್‌ಐಆರ್ ದಾಖಲಾಗುತ್ತಿದ್ದಂತೆ ಪೊಲೀಸರು ಐವರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಅದೇನೇ ಇರಲಿ ಬಾಲಕ ತಪ್ಪು ಮಾಡಿದ್ದೆ ಆದಲ್ಲಿ ಪೋಷಕರ ಗಮನಕ್ಕೆ ತರುವುದನ್ನ ಬಿಟ್ಟು, ಅಪ್ರಾಪ್ತ ಬಾಲಕ ಎನ್ನುವುದು ನೋಡದೇ ಪೈಶಾಚಿಕ ಕೃತ್ಯ ಎಸಗಿದ್ದು ಮಾತ್ರ ದುರಂತವೇ ಸರಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ದತ್ತಾತ್ರೇಯ ಪಾಟೀಲ, ಕಲಬುರಗಿ
ದತ್ತಾತ್ರೇಯ ಪಾಟೀಲ, ಕಲಬುರಗಿ

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್