AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿಯಲ್ಲಿ ಬಾಲಕನನ್ನ ಕೂಡಿಹಾಕಿ ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ; ಐವರು ವಶಕ್ಕೆ

ಕಳೆದ ಎರಡ್ಮೂರು ತಿಂಗಳ ಹಿಂದೆ ಸೆಕೆಂಡ್‌ ಹ್ಯಾಂಡ್ ಕಾರು ಮಾರಾಟ ಮಾಡುವ ಯುವಕರನ್ನ ಬೆತ್ತಲೆಗೊಳಿಸಿ ಮರ್ಮಾಂಗಕ್ಕೆ ವಿದ್ಯುತ್ ಶಾಕ್ ಕೊಟ್ಟ ಸುದ್ದಿ ರಾಜ್ಯಾದ್ಯಂತ ದೊಡ್ಡಮಟ್ಟದಲ್ಲಿ ಆಕ್ರೋಶಕ್ಕೆ ಕಾರಣವಾಗಿತ್ತು. ಆ ಘಟನೆ ಮಾಸುವ ಮುನ್ನವೇ ಇದೀಗ ಅದೇ ಮಾದರಿಯಲ್ಲಿ ಮತ್ತೊಂದು ಘಟನೆ ಕಲಬುರಗಿಯಲ್ಲಿ ನಡೆದಿದೆ. ಅಪ್ರಾಪ್ತ ಬಾಲಕನನ್ನ ಕೋಣೆಯಲ್ಲಿ ಕೂಡಿಹಾಕಿ ಸಿಗರೇಟ್‌ನಿಂದ ಕೈ ಕಾಲಿಗೆ ಸುಟ್ಟು ಕಿಡಿಗೇಡಿಗಳು ಅಟ್ಟಹಾಸ ಮೆರೆದಿದ್ದಾರೆ. ಅಷ್ಟಕ್ಕೂ ಈ ಪೈಶಾಚಿಕ ಕೃತ್ಯಕ್ಕೆ ಕಾರಣ ಏನು ಅಂತೀರಾ? ಈ ಸ್ಟೋರಿ ಓದಿ.

ಕಲಬುರಗಿಯಲ್ಲಿ ಬಾಲಕನನ್ನ ಕೂಡಿಹಾಕಿ ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ; ಐವರು ವಶಕ್ಕೆ
ಕಲಬುರಗಿಯಲ್ಲಿ ಬಾಲಕನನ್ನ ಕೂಡಿಹಾಕಿ ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Aug 07, 2024 | 10:41 PM

Share

ಕಲಬುರಗಿ, ಆ.07: ಮನೆಯಲ್ಲಿನ ಹುಂಡಿ ಹಣ ಕದ್ದಿದಿಯಾ ಎಂದು ಆರೋಪಿಸಿ ಅಪ್ರಾಪ್ತ ಬಾಲಕನೋರ್ವನನ್ನ ಕೋಣೆಯಲ್ಲಿ ಕೂಡಿಹಾಕಿ ಸಿಗರೇಟ್‌ನಿಂದ ಕೈ ಕಾಲಿಗೆ ಸುಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಕಲಬುರಗಿ(Kalaburagi) ನಗರದಲ್ಲಿ ನಡೆದಿದೆ. ನಗರದ ದುಬೈ ಕಾಲೋನಿಯ ನಿವಾಸಿ 14 ವರ್ಷದ ಬಾಲಕ ಅಭಿಷೇಕ್ ಚಿತ್ರಹಿಂಸೆಗೊಳಗಾಗಿದ್ದಾನೆ. ಅಂದಹಾಗೇ ಎಂದಿನಂತೆ ಅಭಿಷೇಕ್ ಶಾಲೆಗೆ ಹೋಗಿ ಬರುತ್ತಿದ್ದ. ಈ ವೇಳೆ ಶಿವಕುಮಾರ್ ಮನೆಯಲ್ಲಿ ಹುಂಡಿ ಹಣ ಕದ್ದಿದಿಯಾ ಎಂದು ಶ್ರೀಶೈಲ್ ವಾರದ್ ಎಂಬಾತನ ಕೋಣೆಗೆ ಕರೆದುಕೊಂಡು ಹೋಗಿ ಸಿಗರೇಟ್‌ನಿಂದ ಕೈಕಾಲಿಗೆ ಸುಟ್ಟಿದ್ದಾರೆ. ಶಿವಕುಮಾರ್, ಜಗನ್ನಾಥ್, ಸೈಬಣ್ಣ, ಮಲ್ಲಿಕ್, ಆದಿತ್ಯ ಸೇರಿಕೊಂಡು ಬಾಲಕನಿಗೆ ಹಣ ಕದ್ದಿದ್ದು ಒಪ್ಪಿಕೋ ಎಂದು ತಲೆ ಕೆಳಗೆ, ಕಾಲು ಮೇಲೆ ಮಾಡಿ ಅಮಾನುಷ ಕೃತ್ಯ ಎಸಗಿದ್ದಾರೆ.

ಇನ್ನು ಚಿತ್ರಹಿಂಸೆಗೊಳಗಾದ ಅಪ್ರಾಪ್ತ ಬಾಲಕನ ಪೋಷಕರು ಹೈದರಾಬಾದ್‌ನಲ್ಲಿ ಕೆಲಸ ಮಾಡುತ್ತಿದ್ದು, ವಿಷಯ ತಿಳಿಯುತ್ತಲೆ ಓಡೊಡಿ ಬಂದಿದ್ದಾರೆ. ಅಪ್ರಾಪ್ತ ಬಾಲಕ ಅಭಿಷೇಕ್ ತಾನು ಹಣ ಕದ್ದಿಲ್ಲವೆಂದರೂ, ನೀನೇ ಹಣ ಕದ್ದಿದಿಯಾ ಒಪ್ಪಿಕೋ ಎಂದು ನಾಲ್ಕೈದು ಜನ ಯುವಕರು ಸೇರಿಕೊಂಡು ಸಿಗರೇಟ್‌ನಿಂದ ಸುಟ್ಟು ಸತತ ಮೂರ್ನಾಲ್ಕು ಗಂಟೆ ಥಳಿಸಿದ್ದಲ್ಲದೇ ಫ್ಯಾನ್‌ಗೆ ಬಾಲಕನ ಕಾಲು ಸಿಲುಕಿಸಲು ಯತ್ನಿಸಿದ್ದಾರೆ. ಬಾಲಕ ಎಷ್ಟೇ ಕೂಗಾಟ, ಚಿರಾಟ ಮಾಡಿದರೂ ಸಹ ನೆರೆ-ಹೊರೆಯವರು ಸಹಾಯಕ್ಕೆ ಬರಲಿಲ್ಲ. ಬಳಿಕ ನೀನು ಒಪ್ಪಿಕೊಳ್ಳದಿದ್ದರೆ ನಿನ್ನನ್ನ ಸಾಯಿಸುವುದಾಗಿ ಧಮ್ಕಿ ಹಾಕಿದ್ದಾರೆ. ಇಲ್ಲವಾದಲ್ಲಿ ನೀನು ಸರಾಯಿ ಕುಡಿದಿರೋ, ಸಿಗರೇಟ್‌ ಸೇದಿರೋ ವಿಡಿಯೋಗಳನ್ನ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಕೊನೆಗೆ ಅವರ ಚಿತ್ರಹಿಂಸೆ ತಾಳಲಾರದೇ ಹೌದು ನಾನೇ ಹುಂಡಿ ಹಣ ಕಳ್ಳತನ ಮಾಡಿರುವುದಾಗಿ ಬಾಲಕ ಒಪ್ಪಿಕೊಂಡಿದ್ದಾನೆ.

ಇದನ್ನೂ ಓದಿ:ಹಾಡಹಗಲೇ ಅಕ್ಕ-ತಂಗಿಯನ್ನು ರಸ್ತೆಯಿಂದ ಕಿಡ್ನಾಪ್ ಮಾಡಿ, ಕಚ್ಚಿ ಚಿತ್ರಹಿಂಸೆ ನೀಡಿದ ಯುವಕರು

ಐವರ ವಿರುದ್ಧ ಎಫ್‌ಐಆರ್ ದಾಖಲು

ಇದಾದ ಬಳಿಕ ನೀನು ನಮಗೆ ಐದು ಸಾವಿರ ರೂಪಾಯಿ ಹಣ ಕೊಡಬೇಕು ಮತ್ತು ಚಿನ್ನಾಭರಣ ಕಳ್ಳತನ ಮಾಡಿಕೊಂಡು ನಮಗೆ ತಂದುಕೊಡಬೇಕೆಂದು ಆವಾಜ್ ಹಾಕಿ ಬಾಲಕನನ್ನ ಬಿಟ್ಟು ಕಳಿಸಿದ್ದಾರೆ. ಇನ್ನು ಘಟನೆ ಸಂಬಂಧ ಚೌಕ್ ಠಾಣೆಯಲ್ಲಿ ಐವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಎಫ್‌ಐಆರ್ ದಾಖಲಾಗುತ್ತಿದ್ದಂತೆ ಪೊಲೀಸರು ಐವರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಅದೇನೇ ಇರಲಿ ಬಾಲಕ ತಪ್ಪು ಮಾಡಿದ್ದೆ ಆದಲ್ಲಿ ಪೋಷಕರ ಗಮನಕ್ಕೆ ತರುವುದನ್ನ ಬಿಟ್ಟು, ಅಪ್ರಾಪ್ತ ಬಾಲಕ ಎನ್ನುವುದು ನೋಡದೇ ಪೈಶಾಚಿಕ ಕೃತ್ಯ ಎಸಗಿದ್ದು ಮಾತ್ರ ದುರಂತವೇ ಸರಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದಿನಿಂದ ಫ್ರೀ ಬಸ್ ಪಾಸ್​ಗೆ ಅರ್ಜಿ ಸಲ್ಲಿಕೆ
ಇಂದಿನಿಂದ ಫ್ರೀ ಬಸ್ ಪಾಸ್​ಗೆ ಅರ್ಜಿ ಸಲ್ಲಿಕೆ
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ