AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿಯಲ್ಲಿ ಮುಂದುವರೆದ ಹುಚ್ಚು ನಾಯಿಗಳ ಅಟ್ಟಹಾಸ: ಮತ್ತೊಂದು ಮಗು ಬಲಿ

ಹುಚ್ಚು ನಾಯಿ ಕಡಿತಕ್ಕೆ ಮತ್ತೊಂದು ಮಗು ಸಾವನ್ನಪ್ಪಿರುವ ಘಟನೆ ಬಳ್ಳಾರಿ ನಗರದಲ್ಲಿ ನಡೆದಿದೆ. ತಯಿಬಾ (4) ಮೃತ ಮಗು.

ಬಳ್ಳಾರಿಯಲ್ಲಿ ಮುಂದುವರೆದ ಹುಚ್ಚು ನಾಯಿಗಳ ಅಟ್ಟಹಾಸ: ಮತ್ತೊಂದು ಮಗು ಬಲಿ
ಮೃತ ಮಗು (ಎಡಚಿತ್ರ) ನಾಯಿ (ಬಲಚಿತ್ರ) ಸಾಂಧರ್ಬಿಕ ಚಿತ್ರ
TV9 Web
| Edited By: |

Updated on: Feb 26, 2023 | 7:51 AM

Share

ಬಳ್ಳಾರಿ: ಕಳೆದ ಕೆಲವುದಿನಗಳ ಹಿಂದೆ ಮಗುವೊಂದನ್ನು ಬೀದಿ ನಾಯಿಗಳು ಕಚ್ಚಿ (Dog Bite) ಮಗುವನ್ನು ಕಿತ್ತು ತಿಂದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ (Social Media) ವೈರಲ್​ ಆಗಿತ್ತು. ಹಾಗೆ ಜಿಲ್ಲೆಯಲ್ಲಿಯೇ ಕಳೆದ ಎರಡು ತಿಂಗಳ ಹಿಂದೆ ಬಾದನಹಟ್ಟಿ ಗ್ರಾಮದಲ್ಲಿ ನಾಯಿ ಕಡಿತಕ್ಕೆ 2 ಮಕ್ಕಳು ಬಲಿಯಾಗಿದ್ದವು. ಅದರಂತೆ ಈಗ ಮತ್ತೆ ಹುಚ್ಚು ನಾಯಿ ಕಡಿತಕ್ಕೆ ಮತ್ತೊಂದು ಮಗು ಸಾವನ್ನಪ್ಪಿರುವ ಘಟನೆ ಬಳ್ಳಾರಿ (Bellary) ನಗರದಲ್ಲಿ ನಡೆದಿದೆ. ತಯಿಬಾ (4) ಮೃತ ಮಗು. ಹುಚ್ಚು ನಾಯಿಯೊಂದು ಫೆಬ್ರವರಿ 7 ರಂದು ವಟ್ಟಪ್ಪಗೆರೆ ಪ್ರದೇಶದ 30 ಜನರ ಮೇಲೆ ದಾಳಿ ಮಾಡಿತ್ತು.

ಆಗ ಬಳ್ಳಾರಿ ನಗರದ 31 ನೇ ವಾರ್ಡ್ ನ ನಿವಾಸಿ ಕಿಶಾರ್ ಎನ್ನುವರ ಮಗು ಗಾಯಗೊಂಡಿತ್ತು. ಅಂದು ಬಳ್ಳಾರಿಯ ವಿಮ್ಸ್​​​ನಲ್ಲಿ ಚಿಕಿತ್ಸೆ ಪಡೆದು, ಬಳಿಕ ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು. ಆದರೆ ದುರಾದೃಷ್ಟವಶಾತ್​ ಚಿಕಿತ್ಸೆ ಫಲಕಾರಿಯಾಗದೆ ಮಗು ನಿನ್ನೆ ಬೆಳಿಗ್ಗೆ (ಫೆ.25) ಸಾವನ್ನಪ್ಪಿದೆ. ಬಳ್ಳಾರಿಯಲ್ಲಿ ಪದೇ ಪದೇ ಹುಚ್ಚು ನಾಯಿ ದಾಳಿ ಆಗುತ್ತಿದ್ದರು ಪಾಲಿಕೆ ಅಧಿಕಾರಿಗಳು ಮಾತ್ರ ಕ್ರಮ ಕೈಗೊಳ್ಳುತ್ತಿಲ್ಲ.

ಇದನ್ನೂ ಓದಿ:  ಒಳ್ಳಾರಿಯಲ್ಲಿ ಮಲಗಿದ್ದವರ ಮೇಲೆ ಹುಚ್ಚು ನಾಯಿ ದಾಳಿ: 20 ಮಂದಿ ಆಸ್ಪತ್ರೆಗೆ ದಾಖಲು, ನಾಯಿಗಾಗಿ ತಲಾಶ್

ಫೆ. 21 ರಂದು ಜಿಲ್ಲೆಯ ಮರಿಯಮ್ಮನಹಳ್ಳಿ ಪಟ್ಟಣದ 12ನೇ ವಾರ್ಡಿನಲ್ಲಿ ಹುಚ್ಚು ನಾಯಿಯೊಂದು ಸಾರ್ವಜನಿಕರ ಮೇಲೆ ದಾಳಿ  ಮಾಡಿತ್ತು. ಘಟನೆಯಲ್ಲಿ 5 ವಿದ್ಯಾರ್ಥಿಗಳು ಸೇರಿದಂತೆ 6 ಮಂದಿ ಗಾಯಗೊಂಡಿದ್ದರು. ಪಟ್ಟಣದ 12ನೇ ವಾರ್ಡ್ ವ್ಯಾಪ್ತಿಯಯಲ್ಲಿನ ನವೋದಯ ಕೋಚಿಂಗ್ ಮುಗಿಸಿ ಮನೆಗೆ ತೆರಳುವ ವಿದ್ಯಾರ್ಥಿಗಳು ಸೇರಿದಂತೆ ಹಲವು ಜನರ ಮೇಲೆ ಹುಚ್ಚು ನಾಯಿಯು ಏಕಾಏಕಿ ದಾಳಿ ನಡೆಸಿದ್ದು, ಬೆನ್ನು, ತೊಡೆ, ಕೈ, ಕಾಲು, ಮುಖದ ಭಾಗಕ್ಕೆ ಕಚ್ಚಿತ್ತು. ಸದ್ಯ ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇತ್ತೀಚಿಗೆ ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಿದ್ದು, ಜನರು ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳು ಮನೆಯಿಂದ ಹೊರ ಬಂದು ಓಡಾಡಲು ಭಯಪಡುತ್ತಿದ್ದಾರೆ.

ಕೆಲವು ತಿಂಗಳ ಹಿಂದೆ ಕಲಬುರಗಿ ಅಫಜಲಪುರ (Afjalpur) ತಾಲೂಕಿನ ಗಾಣಗಾಪುರದ ದತ್ತಾತ್ರೇಯ ದೇವಸ್ಥಾನದ ಸನ್ನಿಧಿಯಲ್ಲಿ  ರಸ್ತೆ ಬದಿ ಮಲಗಿದ್ದ ವೃದ್ಧೆಯನ್ನು ನಾಯಿಗಳು ಕಚ್ಚಿ ತಿಂದಿರುವ ಮನಕಲಕುವ ಘಟನೆ ನಡೆದಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ