AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ಫೋನ್ ಕರೆಯಿಂದ ಕೋಟ್ಯಾಂತರ ರೂ ಹಣ ಕಳೆದುಕೊಂಡ ದಂಪತಿ: ಲಂಡನ್​ನಲ್ಲಿ ಕುಳಿತು ಕೃತ್ಯ

ಹಣ ಡಬ್ಲಿಂಗ್​ ಹೆಸರಿನಲ್ಲಿ ಬೆಂಗಳೂರಿನ ಟೆಕ್ಕಿ ದಂಪತಿಗೆ 2,66,75,791 ರೂಪಾಯಿ ವಂಚನೆ ಮಾಡಿರುವಂತಹ ಘಟನೆಯೊಂದು ಬೆಳಕಿಗೆ ಬಂದಿದೆ. ಹೂಡಿಕೆ ಮಾಡಿದರೆ ಡಬಲ್ ಹಣ ನೀಡುವುದಾಗಿ ದಂಪತಿಗೆ ಆಮಿಷವೊಡ್ಡಿ ಕೋಟ್ಯಾಂತರ ರೂ ವಂಚನೆ ಮಾಡಲಾಗಿದೆ. ಸದ್ಯ ಈ ಬಗ್ಗೆ ಬೆಂಗಳೂರು ಪೂರ್ವ ವಿಭಾಗದ CEN ಠಾಣೆಗೆ ದೂರು ನೀಡಲಾಗಿದೆ.

ಒಂದು ಫೋನ್ ಕರೆಯಿಂದ ಕೋಟ್ಯಾಂತರ ರೂ ಹಣ ಕಳೆದುಕೊಂಡ ದಂಪತಿ: ಲಂಡನ್​ನಲ್ಲಿ ಕುಳಿತು ಕೃತ್ಯ
ಒಂದು ಫೋನ್ ಕರೆಯಿಂದ ಕೋಟ್ಯಾಂತರ ರೂ ಹಣ ಕಳೆದುಕೊಂಡ ದಂಪತಿ: ಲಂಡನ್​ನಲ್ಲಿ ಕುಳಿತು ಕೃತ್ಯ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Aug 10, 2024 | 9:54 PM

Share

ಬೆಂಗಳೂರು, ಆಗಸ್ಟ್​ 10: 1 ಫೋನ್ ಕರೆಯಿಂದ ಬೆಂಗಳೂರಿನ ಟೆಕ್ಕಿ ದಂಪತಿ (couple) 2,66,75,791 ರೂ. ಹಣ (money) ಕಳೆದುಕೊಂಡಿರುವಂತಹ ಘಟನೆ ನಗರದಲ್ಲಿ ನಡೆದಿದೆ. ಬಳಿಕ ಪೂರ್ವ ವಿಭಾಗ ಸಿ.ಇ.ಎನ್​ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಕೇಸ್ ದಾಖಲಿಸಿ ತನಿಖೆ ಮಾಡಿದಾಗ ಹಣದ ವರ್ಗಾವಣೆ ಜಾಲ ಪತ್ತೆ ಆಗಿದೆ. ಸುಮಾರು ಐವತ್ತು ಅಕೌಂಟ್​ಗಳಿಗೆ ಹಣ ಹೋಗಿರುವುದು ಪತ್ತೆಯಾಗಿದ್ದು, ಹಂತ ಹಂತವಾಗಿ ಒಟ್ಟು ಒಂದು ಕೋಟಿ ಐದು ಲಕ್ಷ ರೂ. ಪೊಲೀಸರು ಫ್ರೀಜ್ ಮಾಡಿದ್ದು, ನಂತರ ನ್ಯಾಯಾಲಯದ ಅನುಮತಿ ಪಡೆದು ವಾಪಸ್ಸು ನೀಡಿದ್ದಾರೆ.

ಕೋಟ್ಯಾಂತರ ರೂ ಕಳೆದುಕೊಂಡ ದಂಪತಿಗೆ ಮೊದಲಿಗೆ ಕರೆ ಮಾಡಿ ಯುಟ್ಯೂಬ್​ನಲ್ಲಿ ವಿಡಿಯೋ ನೋಡಿ ಸಬ್​ಸ್ಕ್ರೈಬ್​ ಮಾಡಿದರೆ 50 ರೂ. ನೀಡುವುದಾಗಿ ಹೇಳಿದ್ದರು. ವಿಡಿಯೋ ಸಬ್​ಸ್ಕ್ರೈಬ್ ಮಾಡಿದ್ದ ಟೆಕ್ಕಿ ದಂಪತಿಗೆ ಹಣ ನೀಡಿದ್ದರು. ನಂತರ ಟೆಲಿಗ್ರಾಂ ಗ್ರೂಪ್​ಗೆ ಆ್ಯಡ್ ಮಾಡಿ ಹೂಡಿಕೆ ಮಾಡಿದರೆ ಡಬಲ್ ಹಣ ನೀಡುವುದಾಗಿ ದಂಪತಿಗೆ ಆಮಿಷ ಒಡಲಾಗಿದೆ.

ಇದನ್ನೂ ಓದಿ: ಬೆಂಗಳೂರು: ಕಟ್ಟಡ ನಿರ್ಮಾಣ ವೇಳೆ ಸೆಂಟ್ರಿಂಗ್​ ಕುಸಿತ: ಮೂವರ ಪೈಕಿ ಇಬ್ಬರು ಕಾರ್ಮಿಕರು ಸಾವು

ಮೊದಲಿಗೆ 2-3 ಲಕ್ಷ ರೂ. ಹೂಡಿಕೆ ಮಾಡಿದ್ದವರಿಗೆ ಲಾಭಾಂಶ ನೀಡಿದ್ರು. ನಂತರ ಹಂತಹಂತವಾಗಿ 2,66,75,791 ರೂ ದಂಪತಿ ಹೂಡಿಕೆ ಮಾಡಿದ್ದಾರೆ. ಹಣ ವಾಪಸ್ಸು ಪಡೆಯಲು ಮುಂದಾದಾಗ ಬಂದಿಲ್ಲ. ಪ್ರಶ್ನೆ ಮಾಡಿದಾಗ ಮತ್ತೆ ಐವತ್ತು ಲಕ್ಷ ರೂ. ಹೂಡಿಕೆ ಮಾಡಲು ಸೂಚಿಸಲಾಗಿದೆ. ಹೀಗಾಗಿ ಹೆದರಿ ದಂಪತಿ ಪೊಲೀಸರಿಗೆ ದೂರು ನೀಡಿದ್ದಾರೆ.

ಲಂಡನ್​​ನಲ್ಲಿ ಕುಳಿತು ಕೃತ್ಯ

ಆರೋಪಿ ಲಂಡನ್​​ನಲ್ಲಿ ಕುಳಿತು ಕೃತ್ಯ ಎಸಗಿರುವ ಬಗ್ಗೆ ಮಾಹಿತಿ ಇದ್ದು, ಉತ್ತರ ಭಾರತದ ಹಲವಾರು ಅಕೌಂಟ್​ಗಳನ್ನು ಬಳಕೆ ಮಾಡಿದ್ದಾರೆ. ಶೇರ್ ಮಾರ್ಕೆಟ್ ಬ್ರೋಕರೇಜ್ ರೀತಿಯ ನಕಲಿ ವೆಬ್​ಸೈಟ್ ರಚನೆ ಮಾಡಿದ್ದಾರೆ. ವೆಬ್​ಸೈಟ್​ನಲ್ಲಿ ನಕಲಿಯಾಗಿ ಹಣ ಹೆಚ್ಚಾಗಿರುವಂತೆ ಬಿಂಬಿಸಿದ್ದಾರೆ. ಹೀಗೆ ವಿವಿಧ ಮಾದರಿಯಲ್ಲಿ ವಂಚನೆ ಮಾಡಿರುವುದು ಬೆಳಕಿಗೆ ಬಂದಿದ್ದು ಸದ್ಯ ಆರೋಪಿ ಯಾರು ಎಂಬುದರ ಸ್ಪಷ್ಟತೆ ಇಲ್ಲಾ. ಆದರೆ ಕಳೆದುಕೊಂಡ ಹಣವನ್ನು ಪೊಲೀಸರು ವಾಪಸ್ಸು ಕೊಡಿಸುತ್ತಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
೨೫ ಪಂದ್ಯಗಳ ಬಳಿಕ ಸೋತ ಅಫ್ಘಾನಿಸ್ತಾನ್!
೨೫ ಪಂದ್ಯಗಳ ಬಳಿಕ ಸೋತ ಅಫ್ಘಾನಿಸ್ತಾನ್!
ಟಿಎಂಸಿ ಗೂಂಡಾಗಳಿಗೇ ಹೆದರಿಲ್ಲ ಇಲ್ಯಾವ ಲೆಕ್ಕ: ತೇಜಸ್ವಿ ಸೂರ್ಯ ಆಕ್ರೋಶ
ಟಿಎಂಸಿ ಗೂಂಡಾಗಳಿಗೇ ಹೆದರಿಲ್ಲ ಇಲ್ಯಾವ ಲೆಕ್ಕ: ತೇಜಸ್ವಿ ಸೂರ್ಯ ಆಕ್ರೋಶ
ಕಾಂಗ್ರೆಸ್ ಸರ್ಕಾರ ಖಾಲಿ ಸರ್ಕಾರ ಎಂದು ಬರೆದಿರುವ ಟ್ರಂಕ್ ಹಿಡಿದ ತೇಜಸ್ವಿ !
ಕಾಂಗ್ರೆಸ್ ಸರ್ಕಾರ ಖಾಲಿ ಸರ್ಕಾರ ಎಂದು ಬರೆದಿರುವ ಟ್ರಂಕ್ ಹಿಡಿದ ತೇಜಸ್ವಿ !
ತಮಿಳುನಾಡಲ್ಲಿ ಕರ್ನಾಟಕ ಧ್ವಜ ಎತ್ತಿ ಹಿಡಿದ ಬಗ್ಗೆ ಸುದೀಪ್ ಮಾತು
ತಮಿಳುನಾಡಲ್ಲಿ ಕರ್ನಾಟಕ ಧ್ವಜ ಎತ್ತಿ ಹಿಡಿದ ಬಗ್ಗೆ ಸುದೀಪ್ ಮಾತು