AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ಫೋನ್ ಕರೆಯಿಂದ ಕೋಟ್ಯಾಂತರ ರೂ ಹಣ ಕಳೆದುಕೊಂಡ ದಂಪತಿ: ಲಂಡನ್​ನಲ್ಲಿ ಕುಳಿತು ಕೃತ್ಯ

ಹಣ ಡಬ್ಲಿಂಗ್​ ಹೆಸರಿನಲ್ಲಿ ಬೆಂಗಳೂರಿನ ಟೆಕ್ಕಿ ದಂಪತಿಗೆ 2,66,75,791 ರೂಪಾಯಿ ವಂಚನೆ ಮಾಡಿರುವಂತಹ ಘಟನೆಯೊಂದು ಬೆಳಕಿಗೆ ಬಂದಿದೆ. ಹೂಡಿಕೆ ಮಾಡಿದರೆ ಡಬಲ್ ಹಣ ನೀಡುವುದಾಗಿ ದಂಪತಿಗೆ ಆಮಿಷವೊಡ್ಡಿ ಕೋಟ್ಯಾಂತರ ರೂ ವಂಚನೆ ಮಾಡಲಾಗಿದೆ. ಸದ್ಯ ಈ ಬಗ್ಗೆ ಬೆಂಗಳೂರು ಪೂರ್ವ ವಿಭಾಗದ CEN ಠಾಣೆಗೆ ದೂರು ನೀಡಲಾಗಿದೆ.

ಒಂದು ಫೋನ್ ಕರೆಯಿಂದ ಕೋಟ್ಯಾಂತರ ರೂ ಹಣ ಕಳೆದುಕೊಂಡ ದಂಪತಿ: ಲಂಡನ್​ನಲ್ಲಿ ಕುಳಿತು ಕೃತ್ಯ
ಒಂದು ಫೋನ್ ಕರೆಯಿಂದ ಕೋಟ್ಯಾಂತರ ರೂ ಹಣ ಕಳೆದುಕೊಂಡ ದಂಪತಿ: ಲಂಡನ್​ನಲ್ಲಿ ಕುಳಿತು ಕೃತ್ಯ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Aug 10, 2024 | 9:54 PM

Share

ಬೆಂಗಳೂರು, ಆಗಸ್ಟ್​ 10: 1 ಫೋನ್ ಕರೆಯಿಂದ ಬೆಂಗಳೂರಿನ ಟೆಕ್ಕಿ ದಂಪತಿ (couple) 2,66,75,791 ರೂ. ಹಣ (money) ಕಳೆದುಕೊಂಡಿರುವಂತಹ ಘಟನೆ ನಗರದಲ್ಲಿ ನಡೆದಿದೆ. ಬಳಿಕ ಪೂರ್ವ ವಿಭಾಗ ಸಿ.ಇ.ಎನ್​ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಕೇಸ್ ದಾಖಲಿಸಿ ತನಿಖೆ ಮಾಡಿದಾಗ ಹಣದ ವರ್ಗಾವಣೆ ಜಾಲ ಪತ್ತೆ ಆಗಿದೆ. ಸುಮಾರು ಐವತ್ತು ಅಕೌಂಟ್​ಗಳಿಗೆ ಹಣ ಹೋಗಿರುವುದು ಪತ್ತೆಯಾಗಿದ್ದು, ಹಂತ ಹಂತವಾಗಿ ಒಟ್ಟು ಒಂದು ಕೋಟಿ ಐದು ಲಕ್ಷ ರೂ. ಪೊಲೀಸರು ಫ್ರೀಜ್ ಮಾಡಿದ್ದು, ನಂತರ ನ್ಯಾಯಾಲಯದ ಅನುಮತಿ ಪಡೆದು ವಾಪಸ್ಸು ನೀಡಿದ್ದಾರೆ.

ಕೋಟ್ಯಾಂತರ ರೂ ಕಳೆದುಕೊಂಡ ದಂಪತಿಗೆ ಮೊದಲಿಗೆ ಕರೆ ಮಾಡಿ ಯುಟ್ಯೂಬ್​ನಲ್ಲಿ ವಿಡಿಯೋ ನೋಡಿ ಸಬ್​ಸ್ಕ್ರೈಬ್​ ಮಾಡಿದರೆ 50 ರೂ. ನೀಡುವುದಾಗಿ ಹೇಳಿದ್ದರು. ವಿಡಿಯೋ ಸಬ್​ಸ್ಕ್ರೈಬ್ ಮಾಡಿದ್ದ ಟೆಕ್ಕಿ ದಂಪತಿಗೆ ಹಣ ನೀಡಿದ್ದರು. ನಂತರ ಟೆಲಿಗ್ರಾಂ ಗ್ರೂಪ್​ಗೆ ಆ್ಯಡ್ ಮಾಡಿ ಹೂಡಿಕೆ ಮಾಡಿದರೆ ಡಬಲ್ ಹಣ ನೀಡುವುದಾಗಿ ದಂಪತಿಗೆ ಆಮಿಷ ಒಡಲಾಗಿದೆ.

ಇದನ್ನೂ ಓದಿ: ಬೆಂಗಳೂರು: ಕಟ್ಟಡ ನಿರ್ಮಾಣ ವೇಳೆ ಸೆಂಟ್ರಿಂಗ್​ ಕುಸಿತ: ಮೂವರ ಪೈಕಿ ಇಬ್ಬರು ಕಾರ್ಮಿಕರು ಸಾವು

ಮೊದಲಿಗೆ 2-3 ಲಕ್ಷ ರೂ. ಹೂಡಿಕೆ ಮಾಡಿದ್ದವರಿಗೆ ಲಾಭಾಂಶ ನೀಡಿದ್ರು. ನಂತರ ಹಂತಹಂತವಾಗಿ 2,66,75,791 ರೂ ದಂಪತಿ ಹೂಡಿಕೆ ಮಾಡಿದ್ದಾರೆ. ಹಣ ವಾಪಸ್ಸು ಪಡೆಯಲು ಮುಂದಾದಾಗ ಬಂದಿಲ್ಲ. ಪ್ರಶ್ನೆ ಮಾಡಿದಾಗ ಮತ್ತೆ ಐವತ್ತು ಲಕ್ಷ ರೂ. ಹೂಡಿಕೆ ಮಾಡಲು ಸೂಚಿಸಲಾಗಿದೆ. ಹೀಗಾಗಿ ಹೆದರಿ ದಂಪತಿ ಪೊಲೀಸರಿಗೆ ದೂರು ನೀಡಿದ್ದಾರೆ.

ಲಂಡನ್​​ನಲ್ಲಿ ಕುಳಿತು ಕೃತ್ಯ

ಆರೋಪಿ ಲಂಡನ್​​ನಲ್ಲಿ ಕುಳಿತು ಕೃತ್ಯ ಎಸಗಿರುವ ಬಗ್ಗೆ ಮಾಹಿತಿ ಇದ್ದು, ಉತ್ತರ ಭಾರತದ ಹಲವಾರು ಅಕೌಂಟ್​ಗಳನ್ನು ಬಳಕೆ ಮಾಡಿದ್ದಾರೆ. ಶೇರ್ ಮಾರ್ಕೆಟ್ ಬ್ರೋಕರೇಜ್ ರೀತಿಯ ನಕಲಿ ವೆಬ್​ಸೈಟ್ ರಚನೆ ಮಾಡಿದ್ದಾರೆ. ವೆಬ್​ಸೈಟ್​ನಲ್ಲಿ ನಕಲಿಯಾಗಿ ಹಣ ಹೆಚ್ಚಾಗಿರುವಂತೆ ಬಿಂಬಿಸಿದ್ದಾರೆ. ಹೀಗೆ ವಿವಿಧ ಮಾದರಿಯಲ್ಲಿ ವಂಚನೆ ಮಾಡಿರುವುದು ಬೆಳಕಿಗೆ ಬಂದಿದ್ದು ಸದ್ಯ ಆರೋಪಿ ಯಾರು ಎಂಬುದರ ಸ್ಪಷ್ಟತೆ ಇಲ್ಲಾ. ಆದರೆ ಕಳೆದುಕೊಂಡ ಹಣವನ್ನು ಪೊಲೀಸರು ವಾಪಸ್ಸು ಕೊಡಿಸುತ್ತಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?