AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ಫೋನ್ ಕರೆಯಿಂದ ಕೋಟ್ಯಾಂತರ ರೂ ಹಣ ಕಳೆದುಕೊಂಡ ದಂಪತಿ: ಲಂಡನ್​ನಲ್ಲಿ ಕುಳಿತು ಕೃತ್ಯ

ಹಣ ಡಬ್ಲಿಂಗ್​ ಹೆಸರಿನಲ್ಲಿ ಬೆಂಗಳೂರಿನ ಟೆಕ್ಕಿ ದಂಪತಿಗೆ 2,66,75,791 ರೂಪಾಯಿ ವಂಚನೆ ಮಾಡಿರುವಂತಹ ಘಟನೆಯೊಂದು ಬೆಳಕಿಗೆ ಬಂದಿದೆ. ಹೂಡಿಕೆ ಮಾಡಿದರೆ ಡಬಲ್ ಹಣ ನೀಡುವುದಾಗಿ ದಂಪತಿಗೆ ಆಮಿಷವೊಡ್ಡಿ ಕೋಟ್ಯಾಂತರ ರೂ ವಂಚನೆ ಮಾಡಲಾಗಿದೆ. ಸದ್ಯ ಈ ಬಗ್ಗೆ ಬೆಂಗಳೂರು ಪೂರ್ವ ವಿಭಾಗದ CEN ಠಾಣೆಗೆ ದೂರು ನೀಡಲಾಗಿದೆ.

ಒಂದು ಫೋನ್ ಕರೆಯಿಂದ ಕೋಟ್ಯಾಂತರ ರೂ ಹಣ ಕಳೆದುಕೊಂಡ ದಂಪತಿ: ಲಂಡನ್​ನಲ್ಲಿ ಕುಳಿತು ಕೃತ್ಯ
ಒಂದು ಫೋನ್ ಕರೆಯಿಂದ ಕೋಟ್ಯಾಂತರ ರೂ ಹಣ ಕಳೆದುಕೊಂಡ ದಂಪತಿ: ಲಂಡನ್​ನಲ್ಲಿ ಕುಳಿತು ಕೃತ್ಯ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Aug 10, 2024 | 9:54 PM

Share

ಬೆಂಗಳೂರು, ಆಗಸ್ಟ್​ 10: 1 ಫೋನ್ ಕರೆಯಿಂದ ಬೆಂಗಳೂರಿನ ಟೆಕ್ಕಿ ದಂಪತಿ (couple) 2,66,75,791 ರೂ. ಹಣ (money) ಕಳೆದುಕೊಂಡಿರುವಂತಹ ಘಟನೆ ನಗರದಲ್ಲಿ ನಡೆದಿದೆ. ಬಳಿಕ ಪೂರ್ವ ವಿಭಾಗ ಸಿ.ಇ.ಎನ್​ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಕೇಸ್ ದಾಖಲಿಸಿ ತನಿಖೆ ಮಾಡಿದಾಗ ಹಣದ ವರ್ಗಾವಣೆ ಜಾಲ ಪತ್ತೆ ಆಗಿದೆ. ಸುಮಾರು ಐವತ್ತು ಅಕೌಂಟ್​ಗಳಿಗೆ ಹಣ ಹೋಗಿರುವುದು ಪತ್ತೆಯಾಗಿದ್ದು, ಹಂತ ಹಂತವಾಗಿ ಒಟ್ಟು ಒಂದು ಕೋಟಿ ಐದು ಲಕ್ಷ ರೂ. ಪೊಲೀಸರು ಫ್ರೀಜ್ ಮಾಡಿದ್ದು, ನಂತರ ನ್ಯಾಯಾಲಯದ ಅನುಮತಿ ಪಡೆದು ವಾಪಸ್ಸು ನೀಡಿದ್ದಾರೆ.

ಕೋಟ್ಯಾಂತರ ರೂ ಕಳೆದುಕೊಂಡ ದಂಪತಿಗೆ ಮೊದಲಿಗೆ ಕರೆ ಮಾಡಿ ಯುಟ್ಯೂಬ್​ನಲ್ಲಿ ವಿಡಿಯೋ ನೋಡಿ ಸಬ್​ಸ್ಕ್ರೈಬ್​ ಮಾಡಿದರೆ 50 ರೂ. ನೀಡುವುದಾಗಿ ಹೇಳಿದ್ದರು. ವಿಡಿಯೋ ಸಬ್​ಸ್ಕ್ರೈಬ್ ಮಾಡಿದ್ದ ಟೆಕ್ಕಿ ದಂಪತಿಗೆ ಹಣ ನೀಡಿದ್ದರು. ನಂತರ ಟೆಲಿಗ್ರಾಂ ಗ್ರೂಪ್​ಗೆ ಆ್ಯಡ್ ಮಾಡಿ ಹೂಡಿಕೆ ಮಾಡಿದರೆ ಡಬಲ್ ಹಣ ನೀಡುವುದಾಗಿ ದಂಪತಿಗೆ ಆಮಿಷ ಒಡಲಾಗಿದೆ.

ಇದನ್ನೂ ಓದಿ: ಬೆಂಗಳೂರು: ಕಟ್ಟಡ ನಿರ್ಮಾಣ ವೇಳೆ ಸೆಂಟ್ರಿಂಗ್​ ಕುಸಿತ: ಮೂವರ ಪೈಕಿ ಇಬ್ಬರು ಕಾರ್ಮಿಕರು ಸಾವು

ಮೊದಲಿಗೆ 2-3 ಲಕ್ಷ ರೂ. ಹೂಡಿಕೆ ಮಾಡಿದ್ದವರಿಗೆ ಲಾಭಾಂಶ ನೀಡಿದ್ರು. ನಂತರ ಹಂತಹಂತವಾಗಿ 2,66,75,791 ರೂ ದಂಪತಿ ಹೂಡಿಕೆ ಮಾಡಿದ್ದಾರೆ. ಹಣ ವಾಪಸ್ಸು ಪಡೆಯಲು ಮುಂದಾದಾಗ ಬಂದಿಲ್ಲ. ಪ್ರಶ್ನೆ ಮಾಡಿದಾಗ ಮತ್ತೆ ಐವತ್ತು ಲಕ್ಷ ರೂ. ಹೂಡಿಕೆ ಮಾಡಲು ಸೂಚಿಸಲಾಗಿದೆ. ಹೀಗಾಗಿ ಹೆದರಿ ದಂಪತಿ ಪೊಲೀಸರಿಗೆ ದೂರು ನೀಡಿದ್ದಾರೆ.

ಲಂಡನ್​​ನಲ್ಲಿ ಕುಳಿತು ಕೃತ್ಯ

ಆರೋಪಿ ಲಂಡನ್​​ನಲ್ಲಿ ಕುಳಿತು ಕೃತ್ಯ ಎಸಗಿರುವ ಬಗ್ಗೆ ಮಾಹಿತಿ ಇದ್ದು, ಉತ್ತರ ಭಾರತದ ಹಲವಾರು ಅಕೌಂಟ್​ಗಳನ್ನು ಬಳಕೆ ಮಾಡಿದ್ದಾರೆ. ಶೇರ್ ಮಾರ್ಕೆಟ್ ಬ್ರೋಕರೇಜ್ ರೀತಿಯ ನಕಲಿ ವೆಬ್​ಸೈಟ್ ರಚನೆ ಮಾಡಿದ್ದಾರೆ. ವೆಬ್​ಸೈಟ್​ನಲ್ಲಿ ನಕಲಿಯಾಗಿ ಹಣ ಹೆಚ್ಚಾಗಿರುವಂತೆ ಬಿಂಬಿಸಿದ್ದಾರೆ. ಹೀಗೆ ವಿವಿಧ ಮಾದರಿಯಲ್ಲಿ ವಂಚನೆ ಮಾಡಿರುವುದು ಬೆಳಕಿಗೆ ಬಂದಿದ್ದು ಸದ್ಯ ಆರೋಪಿ ಯಾರು ಎಂಬುದರ ಸ್ಪಷ್ಟತೆ ಇಲ್ಲಾ. ಆದರೆ ಕಳೆದುಕೊಂಡ ಹಣವನ್ನು ಪೊಲೀಸರು ವಾಪಸ್ಸು ಕೊಡಿಸುತ್ತಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಪ್ರಜ್ವಲ್​ ಕುಮಾರ್ ಎನ್​ ವೈ
ಪ್ರಜ್ವಲ್​ ಕುಮಾರ್ ಎನ್​ ವೈ

2017 ಜೂನ್​ನಿಂದ ಟಿವಿ9 ಕನ್ನಡ ವಾಹಿನಿಯಲ್ಲಿ ಕ್ರೈಮ್ ವರದಿಗಾರನಾಗಿ ವೃತ್ತಿ. ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿ ಮಾಡುತಿದ್ದೇನೆ. ಮೂಲತಃ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನವನಾಗಿದ್ದು ಹಾಸನ ಮತ್ತು ತುಮಕೂರಿನಲ್ಲಿ ವಿದ್ಯಾಭ್ಯಾಸ ಮುಗಿಸಿದ ನಂತರ ಒಂದು ವರ್ಷ ಜನಶ್ರೀ ಸುದ್ದಿ ವಾಹಿನಿಯಲ್ಲಿ ಕ್ರೈಮ್ ರಿಪೋರ್ಟರ್ ಆಗಿ ಕೆಲಸ ಮಾಡಿ ನಂತರ 2017 ರಿಂದ ಇಲ್ಲಿಯವರೆಗೆ ಟಿವಿ9 ನಲ್ಲಿ ಕೆಲಸ ಮಾಡುತಿದ್ದೇನೆ.

Read More
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್