AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಂಚಕ್ಕಾಗಿ ಅಧಿಕಾರಿಗಳಿಂದ ಕಿರುಕುಳ, ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದ ದಂಪತಿಗಳು

ಇಬ್ಬರು ದಂಪತಿಗಳು ಸರ್ಕಾರಿ ಅಧಿಕಾರಿಗಳ ಕಿರುಕುಳಕ್ಕೆ ಮನನೊಂದು ನಮಗೆ ದಯಾಮರಣ ನೀಡುವಂತೆ ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಪತ್ರ ಬರೆದಿದ್ದಾರೆ. ಈ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಖಂಡಿಕಾಯಲ್ಲಿ ನಡೆದಿದೆ.

ಲಂಚಕ್ಕಾಗಿ ಅಧಿಕಾರಿಗಳಿಂದ ಕಿರುಕುಳ, ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದ ದಂಪತಿಗಳು
ಇಬ್ಬರು ದಂಪತಿಗಳು ಸರ್ಕಾರಿ ಅಧಿಕಾರಿಗಳ ಕಿರುಕುಳಕ್ಕೆ ಮನನೊಂದು ನಮಗೆ ದಯಾಮರಣ ನೀಡುವಂತೆ ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಪತ್ರ ಬರೆದಿದ್ದಾರೆ.
TV9 Web
| Edited By: |

Updated on:Nov 11, 2022 | 3:25 PM

Share

ಶಿವಮೊಗ್ಗ: ಇಬ್ಬರು ದಂಪತಿಗಳು ಸರ್ಕಾರಿ ಅಧಿಕಾರಿಗಳ ಕಿರುಕುಳಕ್ಕೆ ಮನನೊಂದು ನಮಗೆ ದಯಾಮರಣ ನೀಡುವಂತೆ ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಪತ್ರ ಬರೆದಿದ್ದಾರೆ. ಈ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಖಂಡಿಕಾಯಲ್ಲಿ ನಡೆದಿದೆ. ಅಧಿಕಾರಿಗಳ ಲಂಚಬಾಕತನಕ್ಕೆ ಬೇಸತ್ತು ದಯಾಮರಣಕ್ಕೆ ಅರ್ಜಿಯನ್ನು ಸಲ್ಲಿಸಿದ್ದೇವೆ ಎಂದು ದಂಪತಿಗಳು ಹೇಳಿದ್ದಾರೆ. ಶ್ರೀಕಾಂತ್ ನಾಯ್ಕ್-ಸುಜಾತ ನಾಯ್ಕ್​​ ದಯಾಮರಣಕ್ಕೆ ರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ.

ಕಾಂತ್ ನಾಯ್ಕ್-ಸುಜಾತ ನಾಯ್ಕ್ ದಂಪತಿಗಳಿಗೆ ಸಂಬಂಧಿಸಿದ ಜಮೀನಿನಲ್ಲಿ‌ರುವ ಸೈಟ್​ಗಳ ಅಭಿವೃದ್ಧಿಗೆ ಅನುಮೋದನೆ ಮತ್ತು ನಿವೇಶನಗಳ ಅಭಿವೃದ್ಧಿಗೆ ಲಂಚ ನೀಡುವಂತೆ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಪತ್ರದಲ್ಲಿ ಬರೆದಿದ್ದಾರೆ. ಗ್ರಾಮ ಪಂಚಾಯತಿಗೆ ಶುಲ್ಕ ನೀಡಿ ಅನುಮೋದನೆಗೆ ಮನವಿ ಮಾಡಿದ್ದೇವು, ಆದರೆ ಶುಲ್ಕ ನೀಡಿದರೂ ಅಧಿಕಾರಿಗಳು 3-4 ಬಾರಿ ಅಲೆದಾಡಿಸಿದ್ದಾರೆ, ಪ್ರತಿದಿನ ಸರ್ಕಾರಿ ಕಚೇರಿ ಮುಂದೆ ನಿಂತು ನಿಂತು ಸಾಕಾಗಿದೆ. ಇದೀಗ ಪಿಡಿಒ 5 ಲಕ್ಷ ಹಣ ಹಾಗೂ ತಾ.ಪಂ. ಇಒ 10 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಇಷ್ಟೊಂದು ಹಣವನ್ನು ನಾವು ಎಲ್ಲಿಂದ ತರಬೇಕು, ಅನೇಕ ಬಾರಿ ಈ ಬಗ್ಗೆ ದೂರು ನೀಡದರು ಯಾವುದೇ ಪ್ರಯೋಜನ ಆಗಿಲ್ಲ ಎಂದು ಹೇಳಿದ್ದಾರೆ.

ಇದನ್ನು ಓದಿ: ಸೂಕ್ತ ಪರಿಹಾರ ಕೊಡಿಸಿ ಇಲ್ಲವೇ ದಯಾಮರಣ ಕೊಡಿ; ತಾಯಿ ಮತ್ತು ಮಗನಿಂದ ರಾಷ್ಟ್ರಪತಿಗೆ ಪತ್ರ

ಇಬ್ಬರು ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆಂದು ಪಿಡಿಒ, ತಾ.ಪಂ. ಇಒ ವಿರುದ್ಧ ಶ್ರೀಕಾಂತ್ ದಂಪತಿಗಳು ಆರೋಪಿಸಿದ್ದಾರೆ. ಅಧಿಕಾರಿಗಳ ಲಂಚಬಾಕತನಕ್ಕೆ ಬೇಸತ್ತು ದಯಾಮರಣ ನೀಡುವಂತೆ ರಾಷ್ಟ್ರಪತಿಗಳಿಗೆ ಅರ್ಜಿ ಸಲ್ಲಿಸಿದ್ದೇವೆ ಎಂದ ಶ್ರೀಕಾಂತ್​ ದಂಪತಿಗಳು ಹೇಳಿದ್ದಾರೆ.  ಅಧಿಕಾರಿಗಳು ಅಷ್ಟೊಂದು ಮೊತ್ತದ ಹಣಕ್ಕೆ ಬೇಡಿಕೆ ಇಟ್ಟರೆ, ಬಡ ಕುಟುಂಬಗಳು ಏನು ಮಾಡಬೇಕು. ಈ ಕಾರಣಕ್ಕೆ ನಾವು   ದಯಾಮರಣ ನೀಡುವಂತೆ ರಾಷ್ಟ್ರಪತಿಗೆ ಪತ್ರ ಬರೆದಿದ್ದೇವೆ ಎಂದು ಹೇಳಿದ್ದಾರೆ.

Published On - 3:25 pm, Fri, 11 November 22

Follow Us
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು