ನೋ ಪಾರ್ಕಿಂಗ್​ನಲ್ಲಿ ನಿಲ್ಲಿಸಿದ್ದ ಕಾರಿಗೆ ಕ್ಲಾಂಪ್​ ಹಾಕಿದ್ದಕ್ಕೆ ಸಂಚಾರಿ ಪೊಲೀಸ್ ಸಿಬ್ಬಂದಿಗೆ ಥಳಿಸಿದ ಚಾಲಕ

ನೋ ಪಾರ್ಕಿಂಗ್​ನಲ್ಲಿ ಕಾರು ನಿಲ್ಲಿಸಿದ್ದ ಹಿನ್ನಲೆ ಬಾಣಸವಾಡಿ ಸಂಚಾರಿ ಠಾಣೆಯ ಪೇದೆ ಉಮೇಶ್ ಎಂಬುವವರು ಕ್ಲಾಂಪ್ ಹಾಕಿದ್ದರು. ಈ ಕಾರಣಕ್ಕೆ ನಡುರಸ್ತೆಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ಹಿಡಿದು ಹಲ್ಲೆ ಮಾಡಿದ ಘಟನೆ ನಡೆದಿದೆ.

ನೋ ಪಾರ್ಕಿಂಗ್​ನಲ್ಲಿ ನಿಲ್ಲಿಸಿದ್ದ ಕಾರಿಗೆ ಕ್ಲಾಂಪ್​ ಹಾಕಿದ್ದಕ್ಕೆ ಸಂಚಾರಿ ಪೊಲೀಸ್ ಸಿಬ್ಬಂದಿಗೆ ಥಳಿಸಿದ ಚಾಲಕ
| Updated By: ಕಿರಣ್ ಹನುಮಂತ್​ ಮಾದಾರ್

Updated on:Jul 20, 2023 | 1:16 PM

ಬೆಂಗಳೂರು: ನೋ ಪಾರ್ಕಿಂಗ್​ನಲ್ಲಿ ಕಾರು ನಿಲ್ಲಿಸಿದ್ದ ಹಿನ್ನಲೆ ಬಾಣಸವಾಡಿ ಸಂಚಾರಿ ಠಾಣೆಯ ಪೇದೆ ಉಮೇಶ್ ಎಂಬುವವರು ಕ್ಲಾಂಪ್ ಹಾಕಿದ್ದರು. ಈ ಕಾರಣಕ್ಕೆ ನಡುರಸ್ತೆಯಲ್ಲಿ ಪೊಲೀಸ್(Police) ಸಿಬ್ಬಂದಿಯನ್ನು ಹಿಡಿದು ಹಲ್ಲೆ ಮಾಡಿದ್ದಾರೆ. ಹಲ್ಲೆಗೊಳಗಾದ ಸಂಚಾರಿ ಪೊಲೀಸ್ ಸಿಬ್ಬಂದಿಯಿ ಬಾಣಸವಾಡಿ ಠಾಣೆಗೆ ದೂರು ನೀಡಿದ್ದಾರೆ. ನಿನ್ನೆ(ಜು.19) ಸಂಜೆ 6 ಗಂಟೆ ಸುಮಾರಿಗೆ ಬಾಣಸವಾಡಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ಈ ಬಗ್ಗೆ ಸಿಬ್ಬಂದಿ ದೂರಿನಲ್ಲಿ ಮಾಹಿತಿ ನೀಡಿದ್ದರು.

ಪಾರ್ಕಿಂಗ್ ವಿಚಾರವಾಗಿ ಪರಿಶೀಲನೆ ನಡೆಸುತಿದ್ದ ಸಂಚಾರಿ ಪೊಲೀಸ್ ಸಿಬ್ಬಂದಿ ಉಮೇಶ್​, ಈ ವೇಳೆ ಕಾರ್ ನೋ ಪಾರ್ಕಿಂಗ್​ನಲ್ಲಿ ನಿಲ್ಲಿಸಿರುವುದು ಪತ್ತೆಯಾಗಿದೆ. ಹೀಗಾಗಿ ಗಾಡಿಯ ಟೈರ್​ಗೆ ಕ್ಲಾಂಪಿಂಗ್ ಹಾಕಿದ್ದರಂತೆ. ಈ ವೇಳೆ ಇದನ್ನು ಪ್ರಶ್ನಿಸಿದ್ದ ವ್ಯಕ್ತಿ, ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆಂದು ಆರೋಪಿಸಿದ್ದಾರೆ. ಸದ್ಯ ಹಲ್ಲೆ ಮಾಡಿದ ವ್ಯಕ್ತಿಗಾಗಿ ಪೊಲೀಸರ ಹುಡುಕಾಟ ನಡೆಸಿದ್ದು, ನಿಜಕ್ಕೂ ಹಲ್ಲೆಗೆ ಕಾರಣ ಏನು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ:ಬಂಧಿಸಲು ತೆರಳಿದ್ದಾಗ ಕಾನ್ಸ್​ಟೇಬಲ್ ಮೇಲೆ ಹಲ್ಲೆ: ಆತ್ಮರಕ್ಷಣೆಗಾಗಿ ರೌಡಿಶೀಟರ್ ಕಾಲಿಗೆ ಫೈರಿಂಗ್ ಮಾಡಿದ ಪೊಲೀಸ್​

ಹಲ್ಲೆ ಮಾಡಿದಾತ ಮಹಿಳೆಯೊರ್ವರನ್ನ ಆಸ್ಪತ್ರೆಗೆ ಕರೆತಂದಿದ್ದ

ಇನ್ನು ಹಲ್ಲೆ ಮಾಡಿದಾತ ಆಸ್ಪತ್ರೆಗೆ ಮಹಿಳೆಯೊರ್ವರನ್ನು ಕರೆತಂದಿದ್ದರು. ಈ ಮಧ್ಯೆ ಗಲಾಟೆಯಾಗಿದೆ. ಈ ಕುರಿತು ಪೊಲೀಸರು ಹಲ್ಲೆ ಮಾಡಿದ ವ್ಯಕ್ತಿಯಿಂದ ಮಾಹಿತಿ ಪಡೆಯಲಿದ್ದಾರೆ. ಬಳಿಕ ಹಲ್ಲೆಯ ಸತ್ಯ ಅಸತ್ಯತೆಗಳು ಹೊರಬಿಳಲಿದೆ. ಸದ್ಯ ಬಾಣಸವಾಡಿ ಪೊಲೀಸರು ಹಲ್ಲೆ ನಡೆಸಿದಾತನ ಹುಡುಕಾಟ ನಡೆಸುತ್ತಿದ್ದಾರೆ. ಈ ನಡುವೆ ಸಾಮಾಜಿಕ ಜಾಲತಾಣದಲ್ಲಿ ಹಲ್ಲೆ ಮಾಡಿದ ವಿಡಿಯೋ ವೈರಲ್ ಆಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:15 pm, Thu, 20 July 23

Follow us
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
‘ಕೆಡಿ’ ಸಿನಿಮಾ ಶೂಟಿಂಗ್ ಸೆಟ್​ನಲ್ಲಿ ಧ್ರುವ ಸರ್ಜಾ ಗಣೇಶೋತ್ಸವ ಆಚರಣೆ
‘ಕೆಡಿ’ ಸಿನಿಮಾ ಶೂಟಿಂಗ್ ಸೆಟ್​ನಲ್ಲಿ ಧ್ರುವ ಸರ್ಜಾ ಗಣೇಶೋತ್ಸವ ಆಚರಣೆ