AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ಅಭಿಮಾನಿ ಕೈಯಿಂದ ಶೂ ಹಾಕಿಸಿಕೊಂಡ ಸಚಿವ ‘ಶ್ರೀಮಂತ’ ಪಾಟೀಲ; ಜನ ವಲಯದಲ್ಲಿ ಆಕ್ರೋಶ

ಸಚಿವರು ಪೂಜಾ ಕೈಂಕರ್ಯ ಮುಗಿಸಿ ಹೊರಬಂದು ಶೂವಿಗೆ ಕಾಲು ಹಾಕಿದ್ದರಷ್ಟೆ. ಆ ಕ್ಷಣದಲ್ಲಿ ಅಭಿಮಾನಿ ಓಡಿಬಂದು ಸಚಿವರಿಗೆ ಶೂ ಹಾಕಿ ಲೇಸ್ ಕಟ್ಟಿದ್ದಾನೆ. ಸಚಿವರಾಗಲಿ, ಅವರ ಬೆಂಬಲಿಗರಾಗಲಿ ಅದನ್ನು ತಡೆಯುವ ಪ್ರಯತ್ನ ಮಾಡಿಲ್ಲ. ಆದರೆ ಈ ಘಟನೆ ಇದೀಗ ವಿವಾದಕ್ಕೀಡಾಗಿದೆ.

ಬೆಳಗಾವಿಯಲ್ಲಿ ಅಭಿಮಾನಿ ಕೈಯಿಂದ ಶೂ ಹಾಕಿಸಿಕೊಂಡ ಸಚಿವ ‘ಶ್ರೀಮಂತ' ಪಾಟೀಲ; ಜನ ವಲಯದಲ್ಲಿ ಆಕ್ರೋಶ
ಶೂ ಹಾಕಿಸಿಕೊಳ್ಳುತ್ತಿರುವ ಶ್ರೀಮಂತ ಪಾಟೀಲ
TV9 Web
| Edited By: sandhya thejappa|

Updated on: Jun 21, 2021 | 11:33 AM

Share

ಬೆಳಗಾವಿ: ಜನಪ್ರತಿನಿಧಿ ಅಂದರೆ ಜನರ ಸೇವಕರು. ಆದರೆ ಸಚಿವ ಶ್ರೀಮಂತ ಪಾಟೀಲ ಮಾತ್ರ ಅಭಿಮಾನಿ ಒಬ್ಬರಿಂದ ಕಾಲಿಗೆ ಶೂ ಹಾಕಿಸಿಕೊಳ್ಳುವ ಮೂಲಕ ವಿವಾದಕ್ಕೀಡಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಕೃಷ್ಣಾ ಕಿತ್ತೂರು ಗ್ರಾಮದ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಈ ಘಟನೆ ನಡೆದಿದೆ. ನಿನ್ನೆ (ಜೂನ್ 20) ಮಧ್ಯಾಹ್ನ ತಮ್ಮ ಬೆಂಬಲಿಗರೊಂದಿಗೆ ದೇವಸ್ಥಾನಕ್ಕೆ ಆಗಮಿಸಿದ ಸಚಿವ ಶ್ರೀಮಂತ ಪಾಟೀಲ ಅರ್ಚಕರನ್ನು ಕರೆಸಿ ಬಾಗಿಲು ತೆಗೆಸಿದ್ದಾರೆ. ಮಾತ್ರವಲ್ಲ ಪೂಜೆಯನ್ನೂ ಮಾಡಿಸಿದ್ದಾರೆ.

ಸಚಿವರು ಪೂಜಾ ಕೈಂಕರ್ಯ ಮುಗಿಸಿ ಹೊರಬಂದು ಶೂವಿಗೆ ಕಾಲು ಹಾಕಿದ್ದರಷ್ಟೆ. ಆ ಕ್ಷಣದಲ್ಲಿ ಅಭಿಮಾನಿ ಓಡಿಬಂದು ಸಚಿವರಿಗೆ ಶೂ ಹಾಕಿ ಲೇಸ್ ಕಟ್ಟಿದ್ದಾನೆ. ಸಚಿವರಾಗಲಿ, ಅವರ ಬೆಂಬಲಿಗರಾಗಲಿ ಅದನ್ನು ತಡೆಯುವ ಪ್ರಯತ್ನ ಮಾಡಿಲ್ಲ. ಆದರೆ ಈ ಘಟನೆ ಇದೀಗ ವಿವಾದಕ್ಕೀಡಾಗಿದೆ.

ಯುವಕನೇನೋ ಅಭಿಮಾನದಿಂದ ಶೂ ಹಾಕಿದ. ಆದರೆ ಸಚಿವರಾಗಿ ಅದನ್ನು ಮಾಡಿಸಿಕೊಳ್ಳುವುದು ಎಷ್ಟು ಸರಿ ಅಂತ ಸಾರ್ವಜನಿಕರು ಚರ್ಚಿಸುವಂತಾಗಿದೆ. ಅಲ್ಲದೆ ಇಲ್ಲಿ ಶೂ ಹಾಕಿರುವುದು ಸಚಿರ ಬೆಂಬಲಿಗರಲ್ಲ. ಬದಲಿಗೆ ಒಬ್ಬ ಅಭಿಮಾನಿ ಎಂಬುದು ಗಮನಾರ್ಹ. ಅದರ ಜೊತೆಗೆ ಕೊರೊನಾ ಲಾಕ್ಡೌನ್ ಸಂದರ್ಭದಲ್ಲಿ ದೇವಸ್ಥಾನಕ್ಕೆ ಹೋಗಿ ಬಾಗಿಲು ತೆಗೆಸಿ ಸರ್ಕಾರದ ಆದೇಶವನ್ನು ಸಚಿವರೇ ಗಾಳಿಗೆ ತೂರಿದ್ದಾರೆ.

ಇದನ್ನೂ ಓದಿ

ಅಲ್ಲಿ ನೋಡಿದರೆ ಪಿಚ್ ಒದ್ದೆಯಾಗಿ ಆಡುವುದೇ ಕಷ್ಟವಾಗಿದೆ; ಇಲ್ಲಿ ನೋಡಿದರೆ ಬಿಚ್ಚುಗಾತಿ ಪೂನಮ್ಮ ಮತ್ತೆ ಬಿಚ್ಚುವ ಮಾತಾಡಿದ್ದಾಳೆ!

ಬಿಗ್​ ಬಾಸ್​ 2ನೇ ಇನ್ನಿಂಗ್ಸ್ ಶುರುವಿಗೂ ಮುನ್ನ ದಿವ್ಯಾ ಉರುಡುಗಗೆ 5 ಲಕ್ಷ ಜನರ ಬೆಂಬಲ; ಏನಿದು ಲೆಕ್ಕಾಚಾರ?

Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’