AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿ.ವೈ.ವಿಜಯೇಂದ್ರ ಅವರಿಗೆ ಸಂಪುಟದಲ್ಲಿ ಸ್ಥಾನ ಸಿಕ್ಕಿಲ್ಲವೆಂದು ಕೈ ಕೊಯ್ದುಕೊಂಡ ಅಭಿಮಾನಿ..

ಮಂಡ್ಯ ಜಿಲ್ಲೆಯ ಶಿವಕುಮಾರ್ ಎಂಬುವರು ತಮ್ಮ ಕೈಕೊಯ್ದುಕೊಂಡಿದ್ದು, ತಾನು ವಿಜಯೇಂದ್ರ ಅಭಿಮಾನಿ ಎಂದಿದ್ದಾರೆ. ನಮ್ಮ ಸಾಹೇಬರ (ಬಿ.ಎಸ್​.ಯಡಿಯೂರಪ್ಪ) ಮಗನನ್ನು ಸಂಪುಟಕ್ಕೆ ಸೇರಿಸಿಲ್ಲ. ನನಗೆ ತುಂಬ ನೋವಾಗುತ್ತಿದೆ ಎಂದಿದ್ದಾರೆ.

ಬಿ.ವೈ.ವಿಜಯೇಂದ್ರ ಅವರಿಗೆ ಸಂಪುಟದಲ್ಲಿ ಸ್ಥಾನ ಸಿಕ್ಕಿಲ್ಲವೆಂದು ಕೈ ಕೊಯ್ದುಕೊಂಡ ಅಭಿಮಾನಿ..
ಬಿ.ವೈ.ವಿಜಯೇಂದ್ರ
TV9 Web
| Updated By: Lakshmi Hegde|

Updated on:Aug 04, 2021 | 4:44 PM

Share

ಬೆಂಗಳೂರು: ಇತ್ತೀಚೆಗೆ ಯಡಿಯೂರಪ್ಪ (BS Yediyurappa)ನವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿದಾಗ ಅವರ ಅಭಿಮಾನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರು. ಹಾಗೇ, ಈಗವರ ಪುತ್ರ ಬಿ.ವೈ.ವಿಜಯೇಂದ್ರ(B.Y.Vijayendra) ಅವರಿಗೆ ಸಂಪುಟದಲ್ಲಿ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಅಭಿಮಾನಿಯೊಬ್ಬರು ಕಾವೇರಿಯ ನಿವಾಸದ ಸಮೀಪ ಕೈಕೊಯ್ದುಕೊಂಡು ಪ್ರತಿಭಟನೆ ನಡೆಸಿದ್ದಾರೆ.  ಮಂಡ್ಯ ಜಿಲ್ಲೆಯ ಶಿವಕುಮಾರ್ ಎಂಬುವರು ತಮ್ಮ ಕೈಕೊಯ್ದುಕೊಂಡಿದ್ದು, ತಾನು ವಿಜಯೇಂದ್ರ ಅಭಿಮಾನಿ ಎಂದಿದ್ದಾರೆ. ನಮ್ಮ ಸಾಹೇಬರ (ಬಿ.ಎಸ್​.ಯಡಿಯೂರಪ್ಪ) ಮಗನನ್ನು ಸಂಪುಟಕ್ಕೆ ಸೇರಿಸಿಲ್ಲ. ನನಗೆ ತುಂಬ ನೋವಾಗುತ್ತಿದೆ. ನಾನು ಪ್ರಾಣ ಕಳೆದುಕೊಳ್ಳಬೇಕು ಎನ್ನಿಸುತ್ತಿದೆ. ಆದರೆ ನನಗೂ ಕುಟುಂಬ ಇದೆ. ಹಾಗಾಗಿ ಸಾಯುವುದಿಲ್ಲ. ವಿಜಯೇಂದ್ರ ಇಲ್ಲದೆ ಇದ್ದರೆ ಅದು ಸಂಪುಟವೇ ಅಲ್ಲ ಎಂದು ಹೇಳಿದ್ದಾರೆ. 

ಈ ಹಿಂದೆ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಸಂಪುಟ ರಚನೆಗೆ ಗ್ರೀನ್​ ಸಿಗ್ನಲ್​ ನೀಡಲು ಹೈಕಮಾಂಡ್​ ತುಂಬ ವಿಳಂಬ ಮಾಡಿತ್ತು. ಆದರೆ ಬೊಮ್ಮಾಯಿ ವಿಚಾರದಲ್ಲಿ ಹಾಗಾಗಲಿಲ್ಲ. ಮುಖ್ಯಮಂತ್ರಿಯಾದ ವಾರದಲ್ಲಿ ಸಂಪುಟವೂ ರಚನೆಯಾಯ್ತು. ಅದನ್ನೂ ದೆಹಲಿಗೆ ಹೋಗಿ ಚರ್ಚಿಸಿ, ಇಂದು ಬೆಳಗ್ಗೆಯಷ್ಟೇ ಪಟ್ಟಿ ಸಿದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಬಾರಿ ಕೆಲವು ಹಳಬರನ್ನು ಕೈಬಿಟ್ಟು, ಹೊಸಬರನ್ನು ಸೇರಿಸಲಾಗಿದೆ. ಹಾಗೇ, ವಿಜಯೇಂದ್ರ ಬಗ್ಗೆಯೂ ತುಂಬ ಕುತೂಹಲ ಇತ್ತು. ಅದರಲ್ಲೂ ಯಡಿಯೂರಪ್ಪನವರು ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಟ್ಟಿದ್ದಕ್ಕೆ ಪ್ರತಿಯಾಗಿ, ವಿಜಯೇಂದ್ರನಿಗೆ ಸಚಿವರ ಸ್ಥಾನ ಸಿಗಬಹುದು ಎಂಬ ನಿರೀಕ್ಷೆ ಸಹಜವಾಗಿಯೇ ಮೂಡಿತ್ತು. ಆದರೆ ಬೆಳಗ್ಗೆ ಸುದ್ದಿಗೋಷ್ಠಿ ನಡೆಸಿದ್ದ ಬಸವರಾಜ ಬೊಮ್ಮಾಯಿ, ಸಚಿವ ಸಂಪುಟದಲ್ಲಿ ವಿಜಯೇಂದ್ರ ಇರವುದಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದರು. ಇದು ಅವರ ಅಭಿಮಾನಿಗಳಿಗೆ ನಿರಾಸೆಯನ್ನುಂಟು ಮಾಡಿದೆ.

ಇದನ್ನೂ ಓದಿ: Karnataka Cabinet: ಬೊಮ್ಮಾಯಿ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ಪಡೆದ ಬೆಂಗಳೂರಿನ ಶಾಸಕರಿವರು

ಅಟ್ಲೀ-ಶಾರುಖ್​ ಖಾನ್​ ಸಿನಿಮಾದ ಬಗ್ಗೆ ಹೊಸ​ ಅಪ್​ಡೇಟ್​; ಆಗಸ್ಟ್ 15ಕ್ಕೆ ಅಭಿಮಾನಿಗಳಿಗೆ ಸಿಗುತ್ತಿದೆ ಸರ್​ಪ್ರೈಸ್

Published On - 4:34 pm, Wed, 4 August 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ