AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ; ನೀರಿನಲ್ಲಿ ಕೊಚ್ಚಿ ಹೋದ 45 ವರ್ಷದ ರೈತ

ಬೆಳಗಾವಿ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಇಳಿಕೆಯಾದರೂ ಸಹ ಪ್ರವಾಹ ಇನ್ನೂ ತಗ್ಗಿಲ್ಲ. ನದಿಯ ಅಕ್ಕ-ಪಕ್ಕದಲ್ಲಿರುವ ರೈತ ಜಮೀನಿಗೆ ಪ್ರವಾಹದ ಛಾಯೆ ಆವರಿಸಿದೆ.

ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ; ನೀರಿನಲ್ಲಿ ಕೊಚ್ಚಿ ಹೋದ 45 ವರ್ಷದ ರೈತ
ಬೆಳಗಾವಿಯಲ್ಲಿ ರೈತರ ಜಮೀನಿಗೆ ನೀರು
TV9 Web
| Edited By: |

Updated on: Jun 19, 2021 | 7:55 AM

Share

ಬೆಳಗಾವಿ: ಜಿಲ್ಲೆಯಲ್ಲಿ ಭಾರೀ ಮಳೆಯ ಆರ್ಭಟದಿಂದಾಗಿ ಪ್ರವಾಹ ಉಂಟಾಗಿದೆ. ನದಿಯ ಪಕ್ಕದಲ್ಲಿದ್ದ ತನ್ನ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತ ಪ್ರವಾಹಕ್ಕೆ ಸಿಲುಕಿ ಕೊಚ್ಚಿ ಹೋದ ಘಟನೆ ನಡೆದಿದೆ. ರೈತ ಸಿದ್ರಾಯ ದೊಡ್ರಾಮ ಸುತಗಟ್ಟಿ(45) ಎಂದು ತಿಳಿದು ಬಂದಿದೆ. ಕಾಕತಿ ಗ್ರಾಮದ ಮಾರ್ಕಾಂಡೇಯ ನದಿಯಲ್ಲಿ ಘಟನೆ ಸಂಭವಿಸಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ವ್ಯಕ್ತಿಗಾಗಿ ಶೋಧಕಾರ್ಯಾಚರಣೆ ನಡೆಸಿದ್ದಾರೆ. ಈ ಕುರಿತಂತೆ ಕಾಕತಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಇಳಿಕೆಯಾದರೂ ಸಹ ಪ್ರವಾಹ ಇನ್ನೂ ತಗ್ಗಿಲ್ಲ. ನದಿಯ ಅಕ್ಕ-ಪಕ್ಕದಲ್ಲಿರುವ ರೈತ ಜಮೀನಿಗೆ ಪ್ರವಾಹ ಆವರಿಸಿದೆ. ನದಿ ತೀರದಲ್ಲಿರುವ ಸಾವಿರಾರು ಹೆಕ್ಟೇರ್​ ಕಬ್ಬಿನ ಗದ್ದೆಗಳು ಜಲಾವೃತಗೊಂಡಿವೆ. ಮಳೆಯ ಆರ್ಭಟದಿಂದಾಗಿ ಹಿರಣ್ಯಕೇಶಿ , ಮಲಪ್ರಭಾ, ಘಟಪ್ರಭಾ ನದಿಗಳು ಮೈದುಂಬಿ ಹರಿಯುತ್ತಿವೆ. ಮೂಡಲಗಿ ತಾಲೂಕಿನ‌ ಆರು ಸೇತುವೆಗಳು ಮುಳುಗಡೆಯಾಗಿವೆ ಹಾಗೂ ಚಿಕ್ಕೋಡಿ ತಾಲ್ಕೂಕಿನಲ್ಲಿ ಏಳು ಸೇತುವೆಗಳು ಜಲಾವೃತಗೊಂಡಿವೆ.

ಬಾಗಲಕೋಟೆ ಹೊಳೆಬಸವೇಶ್ವರ ದೇವಾಲಯ ಮತ್ತಷ್ಟು ಮುಳುಗಡೆ ಜಿಲ್ಲೆತಲ್ಲಿ ಘಟಪ್ರಭಾ ನದಿ‌ ನೀರಿನ ಹರಿವು ಮತ್ತಷ್ಟು ಹೆಚ್ಚಳವಾಗಿದೆ. ಇದರ ಪರಿಣಾಮ ಮುಧೋಳ ತಾಲೂಕಿನ ಮಾಚಕನೂರು ಹೊಳೆಬಸವೇಶ್ವರ ದೇಗುಲ 10 ಅಡಿಯಷ್ಟು ಮುಳುಗಡೆಯಾಗಿದೆ.

ದೇವಸ್ಥಾನದೊಳಗೆ ಹತ್ತು ಅಡಿಗೂ ಹೆಚ್ಚಾದ ನೀರು ಸೇರಿಕೊಂಡಿದೆ. ಕಳೆದ ಎರಡು ದಿನಗಳಿಂದಲೂ ದೇವಸ್ಥಾನ ಜಲಾವೃತ ಸ್ಥಿತಿಯಲ್ಲಿದೆ ಹಾಗೂ ಮಿರ್ಜಿ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಸೇತುವೆ ಬಳಿ ಇರುವ ನೂರಾರು ಎಕರೆಯಲ್ಲಿದ್ದ ಕಬ್ಬು ಬೆಳೆ ಜಲಾವೃತಗೊಂಡಿದೆ. ಮಳೆಯ ಆರ್ಭಟದಿಂದ ಬೆಳೆದ ಬೆಳೆಗಳು ನಾಶಗೊಂಡಿದ್ದು ರೈತರಿಗೆ ಆತಂಕ ಹೆಚ್ಚಿಸಿದೆ.

ಇದನ್ನೂ ಓದಿ: 

ರಮೇಶ್ ಜಾರಕಿಹೊಳಿಗೆ ಡಿಕೆಶಿ ಠಕ್ಕರ್: ಬೆಳಗಾವಿ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ

ಬ್ರೇಕಿಂಗ್: ಬೆಳಗಾವಿ ಬಳಿ ರಾಷ್ಟ್ರೀಯ ಹೆದ್ದಾರಿ ಮೇಲೆ ಭೀಕರ ರಸ್ತೆ ಅಪಘಾತ

'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!