AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಹಿಂದಿನ ಅಸಲಿ ಕಾರಣ ಬಹಿರಂಗ

5 ವರ್ಷದ ಹಿಂದೆ ಕಲಬುರಗಿಯಿಂದ ಬೆಂಗಳೂರಿಗೆ ಕುಟುಂಬ ಸಮೇತ ಬಂದಿದ್ದರು. ಗಂಡನ ಆರ್ಥಿಕ ಸಂಕಷ್ಟದಿಂದ ಪತ್ನಿ ಮಮತಾ ಆತ್ಮಹತ್ಯೆಗೆ ನಿರ್ಧರಿಸಿದ್ದಾರೆ. ಮೊದಲಿಗೆ ಇಬ್ಬರು ಮಕ್ಕಳ ಕತ್ತು ಹಿಸುಕಿ ಕೊಂದಿದ್ದು, ನಂತರ ತಾನು ಹಗ್ಗ ಕಟ್ಟಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಹಿಂದಿನ ಅಸಲಿ ಕಾರಣ ಬಹಿರಂಗ
ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಹಿಂದಿನ ಅಸಲಿ ಕಾರಣ ಬಹಿರಂಗ
ನವೀನ್ ಕುಮಾರ್ ಟಿ
| Edited By: |

Updated on: Oct 14, 2024 | 3:08 PM

Share

ಬೆಂಗಳೂರು, ಅಕ್ಟೋಬರ್​ 14: ಜಿಲ್ಲೆಯ ಯಲಹಂಕ ತಾಲೂಕಿನ ಗ್ರಾಮ ಸಿಂಗನಾಯಕನಹಳ್ಳಿಯ ಯಡಿಯೂರಪ್ಪ ನಗರದಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ (death) ಮಾಡಿಕೊಂಡಿರುವ ಘಟನೆ ನಡೆದಿದೆ.  ನೇಣುಬಿಗಿದುಕೊಂಡು ದಂಪತಿ ಅವಿನಾಶ್(33), ಮಮತಾ ಹಾಗೂ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.  ಸ್ಥಳಕ್ಕೆ ರಾಜಾನುಕುಂಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಹಣಕಾಸಿನ ಆರ್ಥಿಕ ತೊಂದರೆಯಿಂದ ಮನನೊಂದು ಕುಟುಂಬ ಆತ್ಮಹತ್ಯೆಗೆ ಶರಣಾಗಿದೆ.

ಗಂಡನ ಆರ್ಥಿಕ ಸಂಕಷ್ಟವೇ ಆತ್ಮಹತ್ಯೆಗೆ ಕಾರಣವಾಯ್ತಾ?

5 ವರ್ಷಗಳಿಂದ ಟ್ಯಾಕ್ಸಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಅವಿನಾಶ್​, 5 ವರ್ಷದ ಹಿಂದೆ ಕಲಬುರಗಿಯಿಂದ ಬೆಂಗಳೂರಿಗೆ ಕುಟುಂಬ ಸಮೇತ ಬಂದಿದ್ದರು. ಗಂಡನ ಆರ್ಥಿಕ ಸಂಕಷ್ಟದಿಂದ ಪತ್ನಿ ಮಮತಾ ಆತ್ಮಹತ್ಯೆಗೆ ನಿರ್ಧರಿಸಿದ್ದಾರೆ. ಮೊದಲಿಗೆ ಇಬ್ಬರು ಮಕ್ಕಳ ಕತ್ತು ಹಿಸುಕಿ ಕೊಂದಿದ್ದು, ನಂತರ ತಾನು ಹಗ್ಗ ಕಟ್ಟಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಗಂಡನಿಗೆ ಕರೆ ಮಾಡಿ ಮಮತಾ ಮಾತನಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಇನ್ನು ಸಂಜೆ ಪತಿ ಹಲವು ಭಾರಿ ಕರೆ ಮಾಡಿದರು ಫೋನ್ ರಿಸೀವ್ ಮಾಡಿಲ್ಲ. ಹೀಗಾಗಿ ಮೇಲಿನ ಮನೆಯವರಿಗೆ ಕರೆ ಮಾಡಿ ಪತ್ನಿಗೆ ಫೋನ್ ನೀಡುವಂತೆ ಪತಿ ಅವಿನಾಶ್ ಹೇಳಿದ್ದಾರೆ. ಈ ವೇಳೆ ಹಲವು ಭಾರೀ ಬಾಗಿಲು ಬಡಿದರು ತೆಗೆದಿಲ್ಲ. ಹೀಗಾಗಿ ರಾತ್ರಿ 9 ಗಂಟೆ ಸುಮಾರಿಗೆ ಅವಿನಾಶ್​ ಮನೆಗೆ ವಾಪಸ್ ಬಂದಿದ್ದಾರೆ. ಮತ್ತೊಂದು ಕೀ ಇಂದು ಮನೆ ಬೀಗ ತೆಗೆದು ಒಳ ಹೋದಾಗ ಮಕ್ಕಳನ್ನ ಸಾಯಿಸಿ ಪತ್ನಿ ಆತ್ಮಹತ್ಯೆಗೆ ಶರಣಾಗಿರುವುದು ಪತ್ತೆಯಾಗಿದೆ. ಪತ್ನಿ ಮಕ್ಕಳ ಕೊಲೆ ಕಂಡು ಅವಿನಾಶ್ ಬೆಚ್ಚಿಬಿದ್ದಿದ್ದಾರೆ. ನಂತರ ಪತ್ನಿ ಮೃತದೇಹ ತೆಗೆದು ಅದೇ ಹಗ್ಗಕ್ಕೆ ಅವಿನಾಶ್ ಕೂಡ ನೇಣಿಗೆ ಶರಣಾಗಿದ್ದಾರೆ. ಸದ್ಯ ನಾಲ್ವರ ಮೃತದೇಹಗಳನ್ನು ಯಲಹಂಕ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಯಲಿದೆ.

ಅವಿನಾಶ್ ಸಂಬಂಧಿ ಹೇಳಿದ್ದೇನು?

ಅವಿನಾಶ್ ಸಂಬಂಧಿ ದತ್ತು ರಾಥೋಡ್​ ಪ್ರತಿಕ್ರಿಯಿಸಿದ್ದು, ಸುಮಾರು 6 ವರ್ಷಗಳಿಂದ ದಂಪತಿ ಇಲ್ಲಿ ನೆಲೆಸಿದ್ದರು. ಸ್ವಂತ ಕ್ಯಾಬ್ ತೆಗೆದುಕೊಂಡು ಓಲಾ ಮತ್ತು ಊಬರ್​ಗೆ ಅಟ್ಯಾಚ್ ಮಾಡಿ ಕೆಲಸ ಮಾಡುತ್ತಿದ್ದರು. ಗಂಡ-ಹೆಂಡತಿ ಇಬ್ಬರು ಅನ್ಯೋನ್ಯವಾಗಿದ್ದರು. ಈ ಘಟನೆ ನಮಗೆ ಶಾಕ್ ನೀಡಿದೆ.

ಇದನ್ನೂ ಓದಿ: ಪ್ರೇಯಸಿ ಪ್ರೀತಿಸಿ ಕೈಕೊಟ್ಟಳು ಅಂತ ಆಕೆಯೊಂದಿಗಿನ ಖಾಸಗಿ ಫೋಟೋ ಹರಿಬಿಟ್ಟ ದರ್ಶನ್​!

ಕಳೆದ ವಾರ ನಮ್ಮ ಮಾವನಿಗೆ ಅವಿನಾಶ್ ಕರೆ ಮಾಡಿದ್ದರು. ಕ್ರೆಡಿಟ್ ಕಾರ್ಡ್​​ಗೆ ಹಣ ಬೇಕು ಅಂತ ಕೇಳಿದ್ದರು. ಈಗ ನನ್ನ ಹತ್ತಿರ ಹಣ ಇಲ್ಲ ನೋಡುತ್ತೇನೆ ಅಂತ ನಮ್ಮ ಮಾವ ಹೇಳಿದ್ದರು. ನನ್ನ ಪ್ರಕಾರ ಹಣಕಾಸಿಗೆ ಸಂಬಂಧಿಸಿದಂತೆ ಆಗಿರಬಹುದು ಎಂದು ಹೇಳಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
ಬೆಂಗಳೂರಲ್ಲಿ ಸಿಎನ್​​ಜಿ ದರ 2 ರೂ ಏರಿಕೆ: ವಾಹನ ಸವಾರರು ಕಂಗಾಲು
ಬೆಂಗಳೂರಲ್ಲಿ ಸಿಎನ್​​ಜಿ ದರ 2 ರೂ ಏರಿಕೆ: ವಾಹನ ಸವಾರರು ಕಂಗಾಲು
ಸ್ಪೀಡ್ ಬ್ರೇಕರ್ ಕಾಣದೆ ವೇಗವಾಗಿ ಬಂದ ಬೈಕ್​; ಮುಂದೇನಾಯಿತು ನೋಡಿ
ಸ್ಪೀಡ್ ಬ್ರೇಕರ್ ಕಾಣದೆ ವೇಗವಾಗಿ ಬಂದ ಬೈಕ್​; ಮುಂದೇನಾಯಿತು ನೋಡಿ
ಬಳ್ಳಾರಿ: ಪಾಲಿಕೆ ಸದಸ್ಯೆ ಪತಿಯಿಂದ ಬಡವರಿಗೆ ಮಹಾವಂಚನೆ!
ಬಳ್ಳಾರಿ: ಪಾಲಿಕೆ ಸದಸ್ಯೆ ಪತಿಯಿಂದ ಬಡವರಿಗೆ ಮಹಾವಂಚನೆ!
ಕಾನ್​ ಸಿನಿಮೋತ್ಸವದಲ್ಲಿ ಫ್ಲೈಯಿಂಗ್ ಕಿಸ್ ಕೊಟ್ಟ ಐಶ್ವರ್ಯಾ ರೈ
ಕಾನ್​ ಸಿನಿಮೋತ್ಸವದಲ್ಲಿ ಫ್ಲೈಯಿಂಗ್ ಕಿಸ್ ಕೊಟ್ಟ ಐಶ್ವರ್ಯಾ ರೈ
ಗುರು ಸಂಚಾರ ಸಿಂಹ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಗುರು ಸಂಚಾರ ಸಿಂಹ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ, 80ಕ್ಕೂ ಅಧಿಕ ಮಂದಿ ಸಾವು
ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ, 80ಕ್ಕೂ ಅಧಿಕ ಮಂದಿ ಸಾವು
ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸೊಸೆ ಗರ್ಭಿಣಿ, ಮಗ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದ ಮೃತನ ತಂದೆ
ಸೊಸೆ ಗರ್ಭಿಣಿ, ಮಗ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದ ಮೃತನ ತಂದೆ
ಯುವಕರಿಗೆ ಸ್ವಿಮ್ಮಿಂಗ್ ಪೂಲ್ ಆಗಿದ್ದ ಹೊಂಡಕ್ಕೆ ಮೊಸಳೆ ಎಂಟ್ರಿ
ಯುವಕರಿಗೆ ಸ್ವಿಮ್ಮಿಂಗ್ ಪೂಲ್ ಆಗಿದ್ದ ಹೊಂಡಕ್ಕೆ ಮೊಸಳೆ ಎಂಟ್ರಿ
ಟೈರ್ ಬ್ಲಾಸ್ಟ್ ಆಗಿ ಟಿಟಿ ವಾಹನ ಪಲ್ಟಿ, ಮಗು ಸೇರಿ 12 ಜನರಿಗೆ ಗಾಯ
ಟೈರ್ ಬ್ಲಾಸ್ಟ್ ಆಗಿ ಟಿಟಿ ವಾಹನ ಪಲ್ಟಿ, ಮಗು ಸೇರಿ 12 ಜನರಿಗೆ ಗಾಯ