AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಪಾನ್ ಕಾರ್ಡ್, ಆಧಾರ್ ಕಾರ್ಡ್ ಪಡೆದು ವಂಚಿಸುವ ಜಾಲ ಪತ್ತೆ

ನಯೀಮ್ ತಾಜ್ ಸುಮಾರು 25 ಜನರನ್ನ ಸೇರಿಸಿದ್ದರು. ಎಲ್ಲರೂ ತಮ್ಮ ಅಧಾರ್ ಕಾರ್ಡ್ ಹಾಗೂ ಪಾನ್ ಕಾರ್ಡ್​ಗಳನ್ನ ನೀಡಿದ್ದರು. ಜನರಿಂದ ಪಡೆದ ದಾಖಲೆಗಳನ್ನ ಉಪಯೋಗಿಸಿ ವಂಚಕರು ಇಂಎಂಐ ನಲ್ಲಿ ವಾಹನಗಳ ಖರೀದಿ ಮಾಡುತ್ತಿದ್ದರಂತೆ.

ಬೆಂಗಳೂರಿನಲ್ಲಿ ಪಾನ್ ಕಾರ್ಡ್, ಆಧಾರ್ ಕಾರ್ಡ್ ಪಡೆದು ವಂಚಿಸುವ ಜಾಲ ಪತ್ತೆ
ಪಾನ್ ಕಾರ್ಡ್ (ಸಾಂದರ್ಭಿಕ ಚಿತ್ರ)
Follow us
TV9 Web
| Updated By: sandhya thejappa

Updated on:Dec 06, 2021 | 11:53 AM

ಬೆಂಗಳೂರು: ಪಾನ್ ಕಾರ್ಡ್ (Pan Card) ಮತ್ತು ಆಧಾರ್ ಕಾರ್ಡ್ (Aadhaar Card) ಪಡೆದು ವಂಚಿಸುತ್ತಿದ್ದ ಜಾಲ ಪತ್ತೆಯಾಗಿದೆ. ನಯೀಮ್ ತಾಜ್ ಎಂಬುವವರ ಬಳಿ ವಂಚಕರು ದಾಖಲೆ ಪಡೆದಿದ್ದರು. ಚೈನ್ ಲಿಂಕ್ ಸ್ಕೀಮ್ ಇದೆ ಎಂದು ಆಧಾರ್, ಪಾನ್ ಪಡೆದಿದ್ದರು. ಪುಲಕೇಶಿನಗರದ ಸಂಗೀತಾ ಶೋ ರೂಂನಲ್ಲಿ ದಾಖಲೆ ಪಡೆದಿದ್ದರು. ದಾಖಲೆ ಪಡೆದು ನೀವು ಸದಸ್ಯರಾಗಿದ್ದೀರೆಂದು ಮಾಹಿತಿ ನೀಡಿದ್ದರು. ನಂತರ ನಯೀಮ್ ತಾಜ್​ಗೆ 1,000 ರೂ. ನೀಡಿದ್ದಾರೆ. ಇನ್ನಷ್ಟು ಜನರನ್ನ ಸೇರಿಸಿದರೆ ಇದೆ ರೀತಿ ಹಣ ಬರುತ್ತೆ ಎಂದಿದ್ದರು.

ಇದನ್ನು ನಂಬಿದ್ದ ನಯೀಮ್ ತಾಜ್ ಸುಮಾರು 25 ಜನರನ್ನ ಸೇರಿಸಿದ್ದರು. ಎಲ್ಲರೂ ತಮ್ಮ ಅಧಾರ್ ಕಾರ್ಡ್ ಹಾಗೂ ಪಾನ್ ಕಾರ್ಡ್​ಗಳನ್ನ ನೀಡಿದ್ದರು. ಜನರಿಂದ ಪಡೆದ ದಾಖಲೆಗಳನ್ನ ಉಪಯೋಗಿಸಿ ವಂಚಕರು ಇಂಎಂಐ ನಲ್ಲಿ ವಾಹನಗಳ ಖರೀದಿ ಮಾಡುತ್ತಿದ್ದರಂತೆ. ನೀವು ವಾಹನ ಖರೀದಿ ಮಾಡಿದ್ದೀರಿ, ಇಎಂಐ ಕಟ್ಟಬೇಕು ಅಂತ ಬ್ಯಾಂಕ್ ಸಿಬ್ಬಂದಿ ದಾಖಲೆ ನೀಡಿದವರಿಗೆ ಕರೆ ಮಾಡುತ್ತಿದ್ದಾರೆ. ಈ ಹಿನ್ನೆಲೆ ನಯೀಮ್ ತಾಜ್ ಪುಲಕೇಶಿನಗರ ಠಾಣೆಗೆ ದೂರು ನೀಡಿದ್ದಾರೆ.

ಮಹಮ್ಮದ್ ಜೈನ್, ಲೋಕೇಶ್, ಕಾರ್ತಿಕ್, ಮುಜಾಹಿದ್ ಹಫೀಜ್, ಮನ್ಸೂರ್ ಎಂಬುವರ ಮೇಲೆ ಎಫ್ಐಆರ್ ದಾಖಲಾಗಿದೆ. ಸದ್ಯ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ನಗರದ ಬೇರೆ ಬೇರೆ ಪೊಲೀಸ್ ಠಾಣೆಗಳಲ್ಲಿಯೂ ಇದೇ ಮಾದರಿಯ ಕೇಸ್ ದಾಖಲಾಗಿವೆ.

ಇದನ್ನೂ ಓದಿ

ಶಾಲೆ, ಕಾಲೇಜುಗಳಲ್ಲಿ ಕೋವಿಡ್ ಸೋಂಕು ಹೆಚ್ಚಳ ಆತಂಕ ತಂದಿದೆ: ಅಲಾರಂ ಬೆಲ್​​ ಹೊಡೆದ ಶಿಕ್ಷಣ ಸಚಿವ ಬಿ ಸಿ ನಾಗೇಶ್

Babri Demolition Anniversary ಮಸೀದಿಯಲ್ಲಿ ಕೃಷ್ಣನ ಮೂರ್ತಿ ಪ್ರತಿಷ್ಠಾಪಿಸುವ ಬೆದರಿಕೆ; ಮಥುರಾದಲ್ಲಿ ಭಾರೀ ಭದ್ರತೆ

Published On - 11:45 am, Mon, 6 December 21

ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್
VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ