AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಜಂಬೂ ಸವಾರಿಗೆ ಕೊಪ್ಪಳದಲ್ಲಿ ಶತಮಾನದ ಹಿಂದೆ ನಡೆದ ಅಂಬಾರಿ ಮೆರವಣಿಗೆ ಪ್ರೇರಣೆ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೇಮಗುಡ್ಡದಲ್ಲಿ ಇಂದು ಅದ್ದೂರಿ ದಸರಾ ಜಂಬೂಸವಾರಿ ನಡೆದಿದೆ. ಮೈಸೂರಲ್ಲಿ ನಡೆಯುವ ಅದ್ಧೂರಿ ದಸರಾಗೆ ಐತಿಹಾಸಿಕ ಹಿನ್ನೆಲೆ ದೊಡ್ಡದಿದೆ. ಅದೂ ಇಂದು ನಿನ್ನೆಯದಲ್ಲ, ಅದೂ ಮೊದಲು ಶುರುವಾಗಿದ್ದು, ಈಗಿನ ಕಲ್ಯಾಣ ಕರ್ನಾಟಕ ಭಾಗದ ಕುಮ್ಮಟ ದುರ್ಗದಲ್ಲಿ. 11ನೇ ಶತಮಾನದಲ್ಲಿ ಶುರುವಾದ ದಸರಾ ಜಂಬೂ ಸವಾರಿ, ಇಂದು ವಿಶ್ವ ವಿಖ್ಯಾತ ಮೈಸೂರು ದಸರಾ ಆಗಿ ಪ್ರಸಿದ್ದಿ ಪಡೆದಿದೆ ಅಂತ ಹೇಳಲಾಗುತ್ತದೆ.

ಮೈಸೂರು ಜಂಬೂ ಸವಾರಿಗೆ ಕೊಪ್ಪಳದಲ್ಲಿ ಶತಮಾನದ ಹಿಂದೆ ನಡೆದ ಅಂಬಾರಿ ಮೆರವಣಿಗೆ ಪ್ರೇರಣೆ
Follow us
ಸಂಜಯ್ಯಾ ಚಿಕ್ಕಮಠ, ಕೊಪ್ಪಳ
| Updated By: ಗಂಗಾಧರ​ ಬ. ಸಾಬೋಜಿ

Updated on:Oct 11, 2024 | 9:46 PM

ಕೊಪ್ಪಳ, ಅಕ್ಟೋಬರ್​ 11: ಜಂಬೂ ಸವಾರಿ (jamboo savari) ಅಂದರೆ ಅದು ಮೈಸೂರು ಅಂತ ಇಡಿ ವಿಶ್ವಕ್ಕೆ ಗೊತ್ತು. ದಸರಾ ಹಬ್ಬದ ದಿನ ಇಡಿ ಜಗತ್ತಿನ ಕಣ್ಣು ಮೈಸೂರು ಅಂಬಾರಿಯ ಮೇಲಿರುತ್ತದೆ. ಆದರೆ ಆ ಜಂಬೂ ಸವಾರಿಗೆ ಪ್ರೇರಣೆ ಸಿಕ್ಕಿದ್ದು ಕಲ್ಯಾಣ ಕರ್ನಾಟಕ ಭಾಗದಲ್ಲಿ ಶತಮಾನದ ಹಿಂದೆ ನಡೆದ ಅಂಬಾರಿ ಮೆರವಣಿಗೆ ಅನ್ನೋದು ಹೆಚ್ಚಿನ ಜನರಿಗೆ ಗೊತ್ತಿಲ್ಲ. ಅದು 11ನೇ ಶತಮಾನದಲ್ಲಿಯೇ ಅಂಬಾರಿ ಮೆರವಣಿಗೆ ಅದ್ದೂರಿಯಾಗಿ ನಡೆಯುತ್ತಿತ್ತು. ಇದೀಗ ಪ್ರತಿ ವರ್ಷ ಆ ಜಾಗದಲ್ಲಿ ಮೈಸೂರು ದಸರಾಗೂ ಒಂದು ದಿನ ಮುಂಚೆ ಜಂಬೂ ಸವಾರಿ ನಡೆಯತ್ತೆ. ಈ ಕುರಿತಾದ ಕುತೂಹಲಕಾರಿ ಸ್ಟೋರಿ ಇಲ್ಲಿದೆ.

ಕೊಪ್ಪಳದ ಹೇಮಗುಡ್ಡದಲ್ಲಿ ಇಂದು ಅದ್ದೂರಿ ದಸರಾ ಜಂಬೂಸವಾರಿ 

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೇಮಗುಡ್ಡದಲ್ಲಿ ಇಂದು ಅದ್ದೂರಿ ದಸರಾ ಜಂಬೂಸವಾರಿ ನಡೆದಿದೆ. ಮೈಸೂರಲ್ಲಿ ನಡೆಯುವ ಅದ್ಧೂರಿ ದಸರಾಗೆ ಐತಿಹಾಸಿಕ ಹಿನ್ನೆಲೆ ದೊಡ್ಡದಿದೆ. ಅದೂ ಇಂದು ನಿನ್ನೆಯದಲ್ಲ, ಅದೂ ಮೊದಲು ಶುರುವಾಗಿದ್ದು, ಈಗಿನ ಕಲ್ಯಾಣ ಕರ್ನಾಟಕ ಭಾಗದ ಕುಮ್ಮಟ ದುರ್ಗದಲ್ಲಿ. ಹೌದು ಈಗಿನ ಕಲ್ಯಾಣ ಕರ್ನಾಟಕ ಭಾಗದ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೇಮಗುಡ್ಡದಲ್ಲಿ 11ನೇ ಶತಮಾನದಲ್ಲಿ ಶುರುವಾದ ದಸರಾ ಜಂಬೂ ಸವಾರಿ, ಇಂದು ವಿಶ್ವ ವಿಖ್ಯಾತ ಮೈಸೂರು ದಸರಾ ಆಗಿ ಪ್ರಸಿದ್ದಿ ಪಡೆದಿದೆ ಅಂತ ಹೇಳಲಾಗುತ್ತದೆ.

ಇದನ್ನೂ ಓದಿ: ದುರ್ಗಾ ದೇವಿ ಮೂರ್ತಿ ಮೆರವಣಿಗೆ: ಬೆಂಗಳೂರಿನ ಈ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧ, ಪಾರ್ಕಿಂಗ್​ ನಿಷೇಧ

11ನೇ ಶತಮಾನದಲ್ಲಿ ಗಂಡುಗಲಿ ಅಂತಲೇ ಪ್ರಸಿದ್ದಿ ಪಡೆದಿದ್ದ ಕುಮಾರರಾಮನ ಸಾಮ್ರಾಜ್ಯದ ದೇವತೆಯಾದ ದುರ್ಗಾಪರಮೇಶ್ವರಿ ದೇವಿಗೆ ಪ್ರತಿ ವರ್ಷ ಗಜಪಡೆಯ ಮೇಲೆ ಜಂಬೂಸವಾರಿಯನ್ನು ಅಂದೇ ನಡೆಸಲಾಗುತ್ತಿತ್ತಂತೆ. ಈ ಪರಂಪರೆ 14ನೇ ಶತಮಾನದಲ್ಲಿ ವಿಜಯನಗರ ಅರಸರು ನಡೆಸಿಕೊಂಡು ಬಂದಿದ್ದರು. ಆಮೇಲೆ ಪೆನುಗೊಂಡ ನಂತರ ಅದು ಮೈಸೂರು ಅರಸರು ಅದನ್ನು ನಡೆಸಿಕೊಂಡು ಬಂದರು. ಮೈಸೂರು ಅರಸರ ಕಾಲದಲ್ಲಿ ಚಿನ್ನದ ಅಂಬಾರಿಯ ಮೇಲೆ ಜಂಬೂ ಸವಾರಿ ನಡೆಯುತ್ತ ಬಂದಿದ್ದು ಇಂದು ವಿಶ್ವ ವಿಖ್ಯಾತಿ ಪಡೆದಿದೆ. ಆದರೆ ಈ ಜಂಬೂ ಸವಾರಿಯ ಮೂಲ ಸ್ಥಾನ ಅಂದಿನ ಕುಮ್ಮಟದುರ್ಗ, ಇಂದಿನ ಹೇಮಗುಡ್ಡದಲ್ಲಿ ಮೈಸೂರು ದಸರಾಗೂ ಒಂದು ದಿನ ಮೊದಲು ಆಯುಧ ಪೂಜೆಯ ದಿನ ದುರ್ಗಾಪರಮೇಶ್ವರಿ ದೇವಿಗೆ ಆನೆಯ ಮೇಲೆ ಅದ್ಧೂರಿಯಾಗಿ ಜಂಬೂ ಸವಾರಿ ನೆರವೇರತ್ತದೆ. ಇಂದು ಅದ್ದೂರಿ ಜಂಬೂ ಸವಾರಿ ನಡೆಯಿತು.

ಮೈಸೂರು ದಸರಾಗೆ ಪ್ರೇರಣೆಯಾದ ಹೇಮಗುಡ್ಡ ದಸರಾ ಅನಾದಿಕಾಲದಿಂದಲೂ ಕೂಡ ಪ್ರತಿ ವರ್ಷ ಕಟ್ಟಿಗೆಯ ಅಂಬಾರಿಯಲ್ಲಿ ಆನೆಯ ಮೇಲೆ ದೇವಿಯ ಮೆರವಣಿಗೆ ನಡೆಸಲಾಗತ್ತಿತ್ತಂತೆ. ಇದೇ ಪರಂಪರೆ ಇದೀಗ ಮೈಸೂರಿನಲ್ಲಿ ಮುಂದುವರಿದಿದೆ. ಪರಂಪರೆ ಆರಂಭವಾದ ಸ್ಥಳದಲ್ಲೇ ಅಂಬಾರಿ ಮೆರವಣಿಗೆ ಪರಂಪರೆ ನಿಂತುಹೋಗಿತ್ತು. ಆದರೆ ಕಳೆದ ನಲವತ್ತು ವರ್ಷಗಳಿಂದ ಹಳೆಯ ಪರಂಪರೆಯನ್ನು ಮತ್ತೆ ಮುಂದುವರಿಸಿಕೊಂಡು ಬರಲಾಗುತ್ತಿದೆ.

ಇದನ್ನೂ ಓದಿ: Dasara: ಖಾಸಗಿ ಬಸ್​​ಗಳ ಟಿಕೆಟ್ ದರ ದುಪ್ಪಟ್ಟು, ಪ್ರಯಾಣಿಕರು ಕಂಗಾಲು; ನಿಮ್ಮೂರಿಗೆ ಎಷ್ಟು ನೋಡಿ

ದಸರಾ ಜಂಬೂ ಸವಾರಿ ಮೆರವಣಿಗೆಯಲ್ಲಿ ಕೊಪ್ಪಳ, ಗಂಗಾವತಿ ಸೇರಿ ಸುತ್ತಮುತ್ತಲಿನ ಜನರು ಭಾಗವಹಿಸಿ ಈ ದಸರಾ ವೈಭೋಗವನ್ನ ಕಣ್ತುಂಬಿಕೊಳ್ತಾರೆ. ಮೈಸೂರು ದಸರಾ ಮಾದರಿಯಲ್ಲೇ ನಡೆಯುವ ದುರ್ಗಾಪರಮೇಶ್ವರಿ ದೇವಿಯ ಜಂಬೂಸವಾರಿ ಕಲ್ಯಾಣ ಕರ್ನಾಟಕ ಭಾಗದ ದಸರಾ ಎಂದೆ ಖ್ಯಾತಿ ಪಡೆದಿದ್ದು, ಜನರನ್ನ ತನ್ನತ್ತ ಆಕರ್ಷಿಸುತ್ತಿದೆ. ಇನ್ನೂ ಹೇಮಗುಡ್ಡ ದಸರಾ ವೀಕ್ಷಣೆಗೆ ಬರುವ ಜನರು ಮೈಸೂರು ದಸರಾ ನೋಡಿದಷ್ಟೇ ಖುಷಿ ಪಡುತ್ತಾರೆ.

ಶರನ್ನವರಾತ್ರಿ ಅಂಗವಾಗಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಗಳು ಸಾಮೂಹಿಕ ವಿವಾಹಗಳು ಸಹ ಇಲ್ಲಿ ನಡೆಯುತ್ತವೆ. ಹೇಮಗುಡ್ಡದಲ್ಲಿ ನಡೆಯುವ ಜಂಬೂ ಸವಾರಿ ಮೈಸೂರು ದಸರಾ ಜಂಬೂ ಸವಾರಿಯನ್ನೇ ನೆನಪು ಮಾಡುತ್ತೆ. ಸದ್ಯ ಮೈಸೂರಿಗೆ ಹೋಗಲಿಕ್ಕಾಗದೇ ಇರೋರು ಇಲ್ಲಿನ ಜಂಬೂ ಸವಾರಿ ನೋಡಿ ಸಂತಸಪಡುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:42 pm, Fri, 11 October 24

ಪಾಟ್ನಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಬೃಹತ್ ರೋಡ್ ಶೋ
ಪಾಟ್ನಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಬೃಹತ್ ರೋಡ್ ಶೋ
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ