AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವರಾಜ್ ವಂಚನೆ: ನಿವೃತ್ತ ನ್ಯಾಯಮೂರ್ತಿ ವಿರುದ್ದವೂ ತನಿಖೆ ನಡೆಸುವಂತೆ CCBಗೆ ವಕೀಲರಿಂದ ದೂರು

ಯುವರಾಜ್​ ಹಲವರಿಗೆ ಕೋಟ್ಯಂತರ ರೂಪಾಯಿ ಮೋಸ ಮಾಡಿದ್ದಾನೆ. ಈ ನಿವೃತ್ತ ನ್ಯಾಯಮೂರ್ತಿಗೆ ಗವರ್ನರ್​ ಹುದ್ದೆ ಕೊಡಿಸುವುದಾಗಿ ಆಸೆ ತೋರಿಸಿ ವಂಚಿಸಿದ್ದಾನೆ. ಇವರು ಉನ್ನತ ಹುದ್ದೆಗಾಗಿ ಹಣ ಸಂದಾಯ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಯುವರಾಜ್ ವಂಚನೆ: ನಿವೃತ್ತ ನ್ಯಾಯಮೂರ್ತಿ ವಿರುದ್ದವೂ ತನಿಖೆ ನಡೆಸುವಂತೆ CCBಗೆ ವಕೀಲರಿಂದ ದೂರು
ಯುವರಾಜ್ ಸ್ವಾಮಿ
Lakshmi Hegde
| Edited By: |

Updated on: Jan 19, 2021 | 12:15 PM

Share

ಬೆಂಗಳೂರು: ವಂಚಕ ಯುವರಾಜ್​ ಸ್ವಾಮಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಕೀಲರೊಬ್ಬರು ನಿವೃತ್ತ ನ್ಯಾಯಮೂರ್ತಿ ವಿರುದ್ಧ ಸಿಸಿಬಿಗೆ ದೂರು ನೀಡಿದ್ದಾರೆ. ಯುವರಾಜ್ ಸ್ವಾಮಿ ಈಗಾಗಲೇ ಹಲವರಿಗೆ ಮೋಸ ಮಾಡಿದ್ದು, ಈ ಕೇಸ್​ನಲ್ಲಿ ನಟಿ ರಾಧಿಕಾ ಕುಮಾರಸ್ವಾಮಿಯ ಹೆಸರೂ ಕೇಳಿಬಂದಿದ್ದು, ಸದ್ಯ ಇದಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಯುತ್ತಿದೆ.

ಇದೀಗ ವಕೀಲ ಅಮೃತೇಶ್​ ಎಂಬುವರು ಯುವರಾಜ್​ ಸ್ವಾಮಿಯಿಂದ ಮೋಸ ಹೋದ ನಿವೃತ್ತ ನ್ಯಾಯಮೂರ್ತಿ ವಿರುದ್ಧ ಸಿಸಿಬಿಗೆ ದೂರು ನೀಡಿದ್ದಾರೆ. ಯುವರಾಜ್​ ಹಲವರಿಗೆ ಕೋಟ್ಯಂತರ ರೂಪಾಯಿ ಮೋಸ ಮಾಡಿದ್ದಾನೆ. ಈ ನಿವೃತ್ತ ನ್ಯಾಯಮೂರ್ತಿಗೆ ಗವರ್ನರ್​ ಹುದ್ದೆ ಕೊಡಿಸುವುದಾಗಿ ಆಸೆ ತೋರಿಸಿ ವಂಚಿಸಿದ್ದಾನೆ. ಇವರು ಉನ್ನತ ಹುದ್ದೆಗಾಗಿ ಹಣ ಸಂದಾಯ ಮಾಡಿದ್ದಾರೆ. ತಾನೂ ಯುವರಾಜ್​ನಿಂದ ಮೋಸ ಹೋಗಿದ್ದಾಗಿ ನಿವೃತ್ತ ನ್ಯಾಯಮೂರ್ತಿ ವಿಲ್ಸನ್​ ಗಾರ್ಡನ್​ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ಹೇಳಿದ್ದಾರೆ. ಇದೆಲ್ಲವನ್ನೂ ಪರಿಗಣಿಸಿ ಸೂಕ್ತ ತನಿಖೆ ನಡೆಸಬೇಕು. ಹಣ ನೀಡಿರುವ ನಿವೃತ್ತ ನ್ಯಾಯಮೂರ್ತಿ ವಿರುದ್ಧವೂ ತನಿಖೆಯಾಗಬೇಕು ಎಂದು ವಕೀಲ ಅಮೃತೇಶ್​ ದೂರಿನಲ್ಲಿ ತಿಳಿಸಿದ್ದಾರೆ.

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್