AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲ: ಮಹಿಳೆಯ ಶವ ಕಾಯುತ್ತಿದ್ದವರಿಗೆ ಶಾಕ್, ಜನರನ್ನು ಬೆದರಿಸಿ ಮೃತದೇಹ ಹೊತ್ತೊಯ್ಯಲೆತ್ನಿಸಿದ ಚಿರತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಸಿನೆಮಾ ಶೈಲಿಯ ಭಯಾನಕ ಘಟನೆಯೊಂದು ನಡೆದಿದೆ. ಚಿರತೆಯೊಂದು ಮೃತದೇಹವನ್ನು ಹೊತ್ತೊಯಲು ಯತ್ನಿಸಿರುವಂತಹ ಘಟನೆ ನಡೆದಿದೆ. ಘಟನೆಯಿಂದ ಗ್ರಾಮಸ್ಥರು ಭಯಭೀತರಾಗಿದ್ದು, ಅರಣ್ಯ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಡಿಎಫ್​ಓ, ಆರ್​ಎಫ್​ಓ ಬರುವಂತ್ತೆ ಪಟ್ಟುಹಿಡಿದಿದ್ದಾರೆ. 

ನೆಲಮಂಗಲ: ಮಹಿಳೆಯ ಶವ ಕಾಯುತ್ತಿದ್ದವರಿಗೆ ಶಾಕ್, ಜನರನ್ನು ಬೆದರಿಸಿ ಮೃತದೇಹ ಹೊತ್ತೊಯ್ಯಲೆತ್ನಿಸಿದ ಚಿರತೆ
ನೆಲಮಂಗಲ: ಮಹಿಳೆಯ ಶವ ಕಾಯುತ್ತಿದ್ದವರಿಗೆ ಶಾಕ್, ಜನರನ್ನು ಬೆದರಿಸಿ ಮೃತದೇಹ ಹೊತ್ತೊಯ್ಯಲೆತ್ನಿಸಿದ ಚಿರತೆ
Follow us
ಬಿ ಮೂರ್ತಿ, ನೆಲಮಂಗಲ
| Updated By: ಗಂಗಾಧರ​ ಬ. ಸಾಬೋಜಿ

Updated on:Nov 18, 2024 | 9:49 AM

ನೆಲಮಂಗಲ, ನವೆಂಬರ್​ 18: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಆಗಾಗ ಚಿರತೆಗಳು (leopard) ಕಾಣಿಸಿಕೊಳ್ಳುತ್ತಿವೆ. ಕೆಲವೊಮ್ಮೆ ಜನರ ಮೇಲೆ ದಾಳಿ ಕೂಡ ಮಾಡಿವೆ. ಹಾಗಾಗಿ ಜನರು ಹೊಲ, ಗದ್ದೆಗಳಿಗೆ ಹೋಗುವುದಕ್ಕೆ ಭಯಪಡುವಂತಾಗಿದೆ. ಇದರ ಮಧ್ಯೆ ಅದೊಂದು ಘಟನೆ ಮಾತ್ರ ಎಂಥವರನ್ನು ಬೆಚ್ಚಿಬೀಳಿಸುತ್ತದೆ. ಮಹಿಳೆಯ ಶವ ಕಾಯುತ್ತಿದ್ದವರನ್ನು ಬೆದರಿಸಿ ಚಿರತೆ ಮೃತದೇಹವನ್ನು ಹೊತ್ತೊಯಲು ಯತ್ನಿಸಿರುವಂತಹ ಘಟನೆ ನಡೆದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಬಳಿಯ ಕಂಬಾಳು ಗೊಲ್ಲರಹಟ್ಟಿ ಗ್ರಾಮದ ಬಳಿ ಚಿರತೆ ದಾಳಿಗೆ ಕರಿಯಮ್ಮ(45) ಎನ್ನುವವರು ಬಲಿ ಆಗಿದ್ದಾರೆ. ರುಂಡವನ್ನು ಚಿರತೆ ತಿಂದಿದ್ದರಿಂದ ಮುಂಡ ಮಾತ್ರ ಪತ್ತೆ ಆಗಿತ್ತು. ಅರಣ್ಯಾಧಿಕಾರಿಗಳು ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದರು. ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲ ಸಾರ್ವಜನಿಕ ಆಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿತ್ತು. ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ರಾಯಚೂರು: ಚಿರತೆ ಹೆದರಿಸಲು ಹೋದವರ ಮೇಲೆ ಚಿರತೆ ದಾಳಿ, ಮೂವರಿಗೆ ಗಂಭೀರ ಗಾಯ

ಇಷ್ಟೆಲ್ಲಾ ಆದ ಬಳಿಕ ಮೃತದೇಹವನ್ನು ಕುಟುಂಸ್ಥರಿಗೆ ಹಸ್ತಾಂತರಿಸಲಾಗಿದೆ. ಬೆಂಕಿ ಹಾಕಿ ಮಹಿಳೆಯ ಶವ ಕಾಯುತ್ತಿದ್ದವರಿಗೆ ಈ ವೇಳೆ ಮತ್ತೊಂದು ಶಾಕ್ ಎದುರಾಗಿದೆ. ಪೊಲೀಸ್ ಹಾಗೂ ಸಾರ್ವಜನಿಕರನ್ನೇ ಬೆದರಿಸಿ ಮೃತದೇಹವನ್ನು ಹೊತ್ತೊಯಲು ಚಿರತೆ ಯತ್ನಿಸಿದೆ. ಕೂಡಲೇ ಅಲ್ಲೇ ಇದ್ದ ದೊಣ್ಣೆ, ಮಚ್ಚು ಮತ್ತು ಟಾರ್ಚ್ ಬಳಸಿ ಮತ್ತೊಮ್ಮೆ ಚಿರತೆ ಬಾಯಿಯಿಂದ ಮೃತದೇಹವನ್ನು ಬಿಡಿಸಿಕೊಂಡಿದ್ದಾರೆ. ಸಿನೆಮಾ ಶೈಲಿಯ ಈ ಭಯಾನಕ ಘಟನೆ ಬಗ್ಗೆ ಗ್ರಾಮಸ್ಥರು ಟಿವಿ9 ಕ್ಯಾಮರಾ ಮುಂದೆ ಬಿಚ್ಚಿಟ್ಟಿದ್ದಾರೆ.

ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರು ಆಕ್ರೋಶ 

ಸದ್ಯ ಈ ಘಟನೆಯಿಂದ ಗ್ರಾಮಸ್ಥರು ಒಂದು ಕಡೆ ಭಯಗೊಂಡಿದ್ದರೆ, ಮತ್ತೊಂದು ಕಡೆ ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಲೆಮಾರುಗಳಿಂದ ಇಲ್ಲೇ ವಾಸ ಮಾಡುತ್ತಿದ್ದೇವೆ, ನಮಗೆ ರಕ್ಷಣೆ ಇಲ್ಲ. ಯಾವೊಬ್ಬ ಅರಣ್ಯ ಸಿಬ್ಬಂದಿಗಳು ಇಲ್ಲಿ ಬರುವುದಿಲ್ಲ. ಮನುಷ್ಯ ಹಾಗೂ ಪ್ರಾಣಿಗಳ ಮೇಲೆ ದಾಳಿ ನಡೆದಾಗ ಮಾತ್ರ ಬಂದು ಹೋಗುತ್ತಾರೆ. ಇದುವರೆಗೂ ಯಾವುದೇ ಪರಿಹಾರ ಕೊಟ್ಟಿಲ್ಲ. ಹೀಗಾಗಿ ಸ್ಥಳಕ್ಕೆ ಡಿಎಫ್​ಓ, ಆರ್​ಎಫ್​ಓ ಬರುವಂತ್ತೆ ಪಟ್ಟುಹಿಡಿದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:46 am, Mon, 18 November 24

ಬರ್ತ್​ಡೇ ಪಾರ್ಟಿಯಲ್ಲಿ ಡ್ರಗ್ಸ್, ಗಾಯಕಿ ಮಂಗ್ಲಿ ಸ್ಪಷ್ಟನೆ
ಬರ್ತ್​ಡೇ ಪಾರ್ಟಿಯಲ್ಲಿ ಡ್ರಗ್ಸ್, ಗಾಯಕಿ ಮಂಗ್ಲಿ ಸ್ಪಷ್ಟನೆ
ಮೋದಿ ಸರ್ಕಾರದ ಆಡಳಿತ ವೈಖರಿ, ಜನಾಭಿಪ್ರಾಯ ಸಂಗ್ರಹಕ್ಕೆ ಜನ್ ಮನ್ ಸಮೀಕ್ಷೆ
ಮೋದಿ ಸರ್ಕಾರದ ಆಡಳಿತ ವೈಖರಿ, ಜನಾಭಿಪ್ರಾಯ ಸಂಗ್ರಹಕ್ಕೆ ಜನ್ ಮನ್ ಸಮೀಕ್ಷೆ
ಜೆಕೆ ರಾಜುಗೆ ಎಂದೂ ಮರೆಯಲಾಗದ ಉಡುಗೊರೆ ನೀಡಿದ ವಿಜಯ್ ಪ್ರಕಾಶ್
ಜೆಕೆ ರಾಜುಗೆ ಎಂದೂ ಮರೆಯಲಾಗದ ಉಡುಗೊರೆ ನೀಡಿದ ವಿಜಯ್ ಪ್ರಕಾಶ್
ಹುಲಿಯ ನಿರ್ಭೀತ ನಡಿಗೆ, ಗತ್ತು ನೋಡಿ ನೀವೂ ರೋಮಾಂಚಿತರಾಗುತ್ತೀರಿ!
ಹುಲಿಯ ನಿರ್ಭೀತ ನಡಿಗೆ, ಗತ್ತು ನೋಡಿ ನೀವೂ ರೋಮಾಂಚಿತರಾಗುತ್ತೀರಿ!
ಭಾರಿ ಮಳೆ, ಕಾರವಾರ ಕೆಎಸ್ಆರ್​ಟಿಸಿ ಡಿಪೋ ಜಲಾವೃತ
ಭಾರಿ ಮಳೆ, ಕಾರವಾರ ಕೆಎಸ್ಆರ್​ಟಿಸಿ ಡಿಪೋ ಜಲಾವೃತ
ಮೂಲ ನಕ್ಷತ್ರದಲ್ಲಿ ಚಂದ್ರ ಸಂಚಾರ: ಈ ದಿನದ ರಾಶಿ ಭವಿಷ್ಯ ಇಲ್ಲಿ ನೋಡಿ
ಮೂಲ ನಕ್ಷತ್ರದಲ್ಲಿ ಚಂದ್ರ ಸಂಚಾರ: ಈ ದಿನದ ರಾಶಿ ಭವಿಷ್ಯ ಇಲ್ಲಿ ನೋಡಿ
ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ