AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುರಿಗಳ ರಕ್ಷಣೆಗೆ ಹೋಗಿ ಪ್ರಾಣಕ್ಕೆ ಕುತ್ತುತಂದುಕೊಂಡ ಕುರಿಗಾಯಿ: ಎನ್​ಸಿಸಿ ಬೆಟಾಲಿಯನ್ ಸಮಯಪ್ರಜ್ಞೆಯಿಂದ ಬದುಕುಳಿದ

ತುಮಕೂರು ತಾಲ್ಲೂಕಿನ ಹಿರೇಹಳ್ಳಿ ಬಳಿಯ ಮಂದಾರಗಿರಿ ಬೆಟ್ಟದ ಬಳಿ ಕುರಿ ಮೇಯಿಸಲು ತೆರಳಿದ್ದ ಕುರಿಗಾಯಿ ತಮ್ಮ ಪ್ರಾಣಕ್ಕೆ ಕುತ್ತುತಂದುಕೊಂಡಿರುವಂತಹ ಘಟನೆ ನಡೆದಿದೆ. ಡಾಂಬರ್ ಸುರಿದಿದ್ದ ಗುಂಡಿಗೆ ಬಿದಿದ್ದ ಕುರಿಗಳನ್ನು ರಕ್ಷಿಸುವ ಭರದಲ್ಲಿ ಆಯತಪ್ಪಿ ಕುರಿಗಾಯಿ ಕೂಡ ಗುಂಡಿಗೆ ಬಿದಿದ್ದಾರೆ. ಸದ್ಯ ಎನ್​ಸಿಸಿ ಬೆಟಾಲಿಯನ್ ಕ್ಯಾಂಪ್ ತಂಡದಿಂದ ರಕ್ಷಣೆ ಮಾಡಲಾಗಿದೆ.

ಕುರಿಗಳ ರಕ್ಷಣೆಗೆ ಹೋಗಿ ಪ್ರಾಣಕ್ಕೆ ಕುತ್ತುತಂದುಕೊಂಡ ಕುರಿಗಾಯಿ: ಎನ್​ಸಿಸಿ ಬೆಟಾಲಿಯನ್ ಸಮಯಪ್ರಜ್ಞೆಯಿಂದ ಬದುಕುಳಿದ
ಕುರಿಗಳ ರಕ್ಷಣೆಗೆ ಹೋಗಿ ಪ್ರಾಣಕ್ಕೆ ಕುತ್ತುತಂದುಕೊಂಡ ಕುರಿಗಾಯಿ, ಎನ್​ಸಿಸಿ ಬೆಟಾಲಿಯನ್ ಸಮಯಪ್ರಜ್ಞೆಯಿಂದ ಬದುಕುಳಿದ
ಮಹೇಶ್ ಇ, ಭೂಮನಹಳ್ಳಿ
| Edited By: |

Updated on: Jul 25, 2024 | 3:29 PM

Share

ತುಮಕೂರು, ಜುಲೈ 25: ಕುರಿಗಳ ರಕ್ಷಣೆ ಮಾಡಲು ಹೋದ ಕುರಿಗಾಯಿ ಆಯ ತಪ್ಪಿ ರಸ್ತೆಗೆ ಹಾಕುವ ಡಾಂಬರ್ (Dambar) ಸುರಿದಿದ್ದ ಗುಂಡಿಗೆ ಬಿದಿದ್ದು, ಪ್ರಾಣಾಪಾಯದಿಂದ ಪರಾದ ಘಟನೆ ತುಮಕೂರು (Tumakuru) ತಾಲ್ಲೂಕಿನ ಹಿರೇಹಳ್ಳಿ ಬಳಿಯ ಮಂದಾರಗಿರಿ ಬೆಟ್ಟದ ಪಕ್ಕದಲ್ಲಿ ನಡೆದಿದೆ. ಮೈತುಂಬ ಡಾಂಬರ್ ಮೆತ್ತಿಕೊಂಡಿದ್ದ ಕುರಿಗಾಯಿಯನ್ನು ಎಸ್​ಸಿಸಿ ಬೆಟಾಲಿಯನ್ ಕ್ಯಾಂಪ್​ ತಂಡದ ಸದಸ್ಯರ ಸಮಯ ಪ್ರಜ್ಞೆಯಿಂದ ಬದುಕುಳಿದಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಾಣಕ್ಕೆ ಕುತ್ತುತಂದುಕೊಂಡ ಕುರಿಗಾಯಿ 

ಮಂದರಗಿರಿ ಬೆಟ್ಟದ ಬಳಿ ಕುರಿ ಮೇಯಿಸಲು ಕುರಿಗಾಯಿ ತೆರಳಿದ್ದರು. ಈ ವೇಳೆ ರಸ್ತೆಗೆ ಹಾಕುವ ಡಾಂಬರ್ ಸುರಿದಿದ್ದ ಗುಂಡಿಗೆ ಸುಮಾರು ಏಳೆಂಟು ಕುರಿಗಳು ಬಿದಿದ್ದವು. ಅವುಗಳನ್ನು ರಕ್ಷಿಸುವ ಭರದಲ್ಲಿ ಆಯತಪ್ಪಿ ಡಾಂಬರ್ ಗುಂಡಿಗೆ ತಾವೇ ಬಿದ್ದು ಪ್ರಾಣಕ್ಕೆ ಕುತ್ತುತಂದುಕೊಂಡಿದ್ದಾರೆ.

ಇದನ್ನೂ ಓದಿ: ತುಮಕೂರಿನಲ್ಲಿ ಹೆಚ್ಚಿದ ಬೀದಿ ನಾಯಿಗಳ ನಿಯಂತ್ರಣಕ್ಕೆ ಪಾಲಿಕೆ ಹೊಸ ಪ್ಲಾನ್​

ಸುಮಾರು ಎರಡು ಗಂಟೆಗಳ ಕಾಲ ಡಾಂಬರ್ ಗುಂಡಿಯಲ್ಲೇ ಕುರಿಗಾಯಿ ಬಿದಿದ್ದು, ಅದೇ ಸಮಯಕ್ಕೆ ಎನ್​ ಸಿಸಿ ಕ್ಯಾಂಪ್​​ಗೆ ತೆರಳಿದ್ದ ತಂಡ ಫೈರಿಂಗ್ ತರಬೇತಿ ಪಡೆಯುವ ವೇಳೆ ಕುರಿಗಾಯಿಯನ್ನು ಗಮನಿಸಿದ್ದಾರೆ. ಕೂಡಲೇ ಅವರನ್ನು ಗುಂಡಿಯಿಂದ ಮೇಲಕ್ಕೆ ಎತ್ತಿ ರಕ್ಷಣೆ ಮಾಡಲಾಗಿದೆ.

ಇದನ್ನೂ ಓದಿ: ತುಮಕೂರಿನ ಅಂಗನವಾಡಿಯಲ್ಲಿ ಕುಕ್ಕರ್ ಸಿಡಿತ: ತಪ್ಪಿದ ಭಾರೀ ಅನಾಹುತ

ತುಮಕೂರಿನ ನಾಲ್ಕನೇ ಕರ್ನಾಟಕ ಬೆಟಾಲಿಯನ್ ಎನ್‌ಸಿಸಿ ಕ್ಯಾಂಪ್ ತರಬೇತಿಯಲ್ಲಿದ್ದ ಬಿಹೆಚ್​.ಎಂ ತಿಲಕ್ ರಾಜ್, ಕೆಡೆಟ್ ಮಹೇಶ್, ಜುಬೇದ್, ಮನೋಜ್, ದರ್ಶನ್​ರಿಂದ ಕುರಿಗಾಯಿ ಸೇರಿದಂತೆ ಐದು ಕುರಿಗಳ ರಕ್ಷಣೆ ಮಾಡಲಾಗಿದೆ.

ಭಾರಿ ಮಳೆಗೆ ಮರ ಬಿದ್ದು 2 ಬೈಕ್​ಗಳು ಜಖಂ

ಹುಬ್ಬಳ್ಳಿ: ನಿರಂತರ ಭಾರಿ ಮಳೆಗೆ ಮರ ಬಿದ್ದು 2 ಬೈಕ್​ಗಳು ಜಖಂ ಆಗಿರುವಂತಹ ಘಟನೆ ನಗರದ ವೆಂಕಟೇಶ ಕಾಲೋನಿಯಲ್ಲಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೃಹತ್ ಮರ ಬಿದ್ದು ವಾಹನ ಸಂಚಾರ ಸಂಪೂರ್ಣ ಬಂದ್ ಆಗಿದೆ.

ಜರ್ಕಿನ್ ಹಾಕಿಕೊಂಡು ಮನೆಗೆ ಎಂಟ್ರಿ ಕೊಟ್ಟ ಕಳ್ಳ: ಕಳ್ಳತನಕ್ಕೆ ವಿಪಲ ಯತ್ನ

ಕಲಬುರಗಿ: ತಡರಾತ್ರಿ ಕಳ್ಳತನಕ್ಕೆ ಯತ್ನಿಸಿದ್ದು, ಬಂದ ಕಾರ್ಯ ಯಶಸ್ವಿಯಾಗದೆ ಕಳ್ಳನಿಂದ ವಿಫಲ ಯತ್ನ ನಡೆದಿರುವಂತಹ ಘಟನೆ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಚಂದಾಪುರದ ಹುನಮಾನ್ ನಗರದಲ್ಲಿ ನಡೆದಿದೆ. ಜಿಟಿ ಜಿಟಿ ಮಳೆಯಲ್ಲಿ ಖತರ್ನಾಕ್ ಕಳ್ಳ ಜರ್ಕಿನ್ ಹಾಕಿಕೊಂಡು ಮನೆಗೆ ಎಂಟ್ರಿ ಕೊಟ್ಟಿದ್ದಾನೆ. ಕಳ್ಳತನಕ್ಕೆ ಮುಂದಾಗಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Mahesha E
Mahesha E

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...

Read More
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?