ಪುರುಷರು ಹೆದರಿ ಹಿಂದೆ ಸರಿಯುವಾಗ ಮುಂದೆ ಬಂದು ಬೃಹತ್ ಹೆಬ್ಬಾವು ಹಿಡಿದ ಧೀರ ಮಹಿಳೆ

Edited By:

Updated on: Nov 06, 2024 | 5:31 PM

ಪುರುಷರು ಹೆದರಿಕೊಳ್ಳುತ್ತಿದ್ದರೆ ಮಹಿಳೆಯೊಬ್ಬರು ಮುಂದೆ ಬಂದು ಬೃಹತ್ ಗಾತ್ರದ ಹೆಬ್ಬಾವು ಹಿಡಿದಿದ್ದಾರೆ. ಹೆಬ್ಬಾವು ನೋಡಲು ಸಾಕಷ್ಟು ಜನರು ಸೇರಿದ್ದರು. ಆದ್ರೆ, ಹಿಡಿಯಲು ಯಾರೊಬ್ಬರು ಮುಂದೆ ಬರಲಿಲ್ಲ. ಕೊನೆಗೆ ಓರ್ವ ಮಹಿಳೆ ಹೆಬ್ಬಾವನ್ನು ಸುರಕ್ಷಿತವಾಗಿ ಹಿಡಿದು ಗೋಣಿ ಚೀಲಕ್ಕೆ ತುಂಬಿಸಿ ಕಾಡಿಗೆ ಬಿಟ್ಟಿದ್ದಾರೆ.

ಮಂಗಳೂರು, (ನವೆಂಬರ್ 06): ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು-ಸುಳ್ಯದ ಗಡಿಪ್ರದೇಶದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಇದನ್ನು ಕಂಡು ಗಂಡಸರು ಹೆದರಿಕೊಂಡಿದ್ದಾರೆ. ಆದ್ರೆ, ಓರ್ವ ಮಹಿಳೆ, ಬೃಹತ್ ಗಾತ್ರದ ಹೆಬ್ಬಾವು ಹಿಡಿದು ಗೋಣಿ ಚೀಲದಲ್ಲಿ ಹಾಕಿಕೊಂಡುಹೋಗಿ ಕಾಡಿಗೆ ಬಿಟ್ಟಿದ್ದಾಳೆ. ಈ ಹೆಬ್ಬಾವಿಗೆ `ಇಂಡಿಯನ್ ರಾಕ್ ಪೈತಾನ್’ ಎಂದು ಎಂದು ಕರೆಯಲಾಗುತ್ತೆ. ಇನ್ನು ಕರಾವಳಿ ಭಾಗದಲ್ಲಿ ಈ ಹೆಬ್ಬಾವಿಗೆ `ಕೋಳಿ ಮರ್ಲೆ’ ಎಂಬ ತುಳು ಪದವನ್ನ ಬಳಸಲಾಗುತ್ತೆ. ಶೋಭ ಅವರು ಹೆಬ್ಬಾವನ್ನ ಹಿಡಿಯುವ ಸಂದರ್ಭ ಯಾವುದೇ ಭಯವಿಲ್ಲದೆ ನಾಜೂಕಾಗಿ ಹಿಡಿದು ಗೋಣಿ ಚೀಲಕ್ಕೆ ತುಂಬಿಸುವ ವೀಡಿಯೋ ವೈರಲ್ ಆಗಿದೆ. ‘ಹೆಬ್ಬಾವು ಹಿಡಿದ ವೀರ ಶೋಭಕ್ಕ ಅಂತಾ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ.

Published on: Nov 06, 2024 05:31 PM
Follow Us
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More