AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆತ ಬಿಟ್ರೂ ಆಕೆ ಬಿಡ್ಲಿಲ್ಲ: ವ್ಯಕ್ತಿಯನ್ನು ಬಲಿ ಪಡೆಯಿತಾ ಮಹಿಳೆಯ ಅಕ್ರಮ ಸಂಬಂಧ?

ಆತನಿಗೆ ಮದುವೆಯಾಗಿ ಪತ್ನಿ ಮಕ್ಕಳಿದ್ದರು. ಕಾರುಗಳನ್ನು ಇಟ್ಟುಕೊಂಡು ಬಾಡಿಗೆಗೆ ಓಡಿಸುವ ಕಾಯಕ ಮಾಡಿಕೊಂಡಿದ್ದ. ತಾನು ಆಯ್ತು ತನ್ನ ಸಂಸಾರ ಆಯ್ತು ಅಂದುಕೊಂಡಿದ್ರೆ ಚನ್ನಾಗಿರುತ್ತಿತ್ತು. ಆದ್ರೆ ಇನ್ನೊಬ್ಬಳ ಸಹವಾಸ ಮಾಡಿ ಇದೀಗ ತನ್ನ ಪ್ರಾಣವನ್ನೇ ಕಳೆದುಕೊಂಡಿದ್ದು, ವಿವಾಹಿತ ವ್ಯಕ್ತಿಯ ದುಡುಕಿನ ನಿರ್ಧಾರದ ಹಿಂದೆ ಮಹಿಳೆ ಪಾತ್ರದ ಬಗ್ಗೆ ಅನುಮಾನಗಳು ವ್ಯಕ್ತವಾಗಿವೆ. ಏನಿದು ಪ್ರಕರಣ? ವಿವಾಹಿತ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ಯಾಕೆ ಎನ್ನುವ ವಿವರ ಇಲ್ಲಿದೆ.

ಆತ ಬಿಟ್ರೂ ಆಕೆ ಬಿಡ್ಲಿಲ್ಲ: ವ್ಯಕ್ತಿಯನ್ನು ಬಲಿ ಪಡೆಯಿತಾ ಮಹಿಳೆಯ ಅಕ್ರಮ ಸಂಬಂಧ?
ಪ್ರೇಯಸಿ, ಬಾಲಾಜಿ ಸಿಂಗ್
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Dec 27, 2025 | 6:45 PM

Share

ಚಿಕ್ಕಬಳ್ಳಾಪುರ, (ಡಿಸೆಂಬರ್ 27): ಮನೆಯಲ್ಲಿ ಯಾರೂ ಇಲ್ಲದ ವೇಳೆ ವಿವಾಹಿತ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ  (Suicide) ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆ ಗುಡಿಬಂಡೆ ಪಟ್ಟಣದ ಬಾಪೂಜಿ ನಗರದಲ್ಲಿ ನಡೆದಿದೆ. ಬಾಲಾಜಿ ಸಿಂಗ್ (30) ಮೃತ ದುರ್ದೈವಿ. ಬಾಲಾಜಿ ಸಿಂಗ್ ಗೆ ಮದುವೆಯಾಗಿ 8 ವರ್ಷ ಆಗಿದ್ದು, ಆರು ವರ್ಷದ ಮಗಳು ಇದ್ದಾಳೆ. ಆರ್ಥಿಕವಾಗಿ ಚನ್ನಾಗಿದ್ದ ಬಾಲಾಜಿ ಸಿಂಗ್, ತನ್ನದೆ ಕಾರುಗಳನ್ನು ಬಾಡಿಗೆಗೆ ಬಿಟ್ಟು ಅದರಿಂದ ಬರುವ ಹಣದಲ್ಲಿ ಪತ್ನಿ ಮಕ್ಕಳ ಜೊತೆ ಚನ್ನಾಗಿದ್ದ, ಆದ್ರೆ ಓರ್ವ ಮಹಿಳೆಯ ಸಹವಾಸ ಮಾಡಿ ಇದೀಗ ತನ್ನ ಪ್ರಾಣವನ್ನೇ ಕಳೆದುಕೊಂಡಿದ್ದಾನೆ.

ಅನೈತಿಕ ಸಂಬಂಧವೇ ಪ್ರಾಣ ಬಲಿ ಪಡೆಯಿತಾ?

ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ಬಾಪೂಜಿ ನಗರದಲ್ಲಿ ಇಂದು (ಡಿಸೆಂಬರ್ 27) ಬೆಳ್ಳಂಬೆಳಗ್ಗೆ ಬಾಲಾಜಿ ಸಿಂಗ್ ಎನ್ನುವ ವ್ಯಕ್ತಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತ ಬಾಲಾಜಿಗೆ ಈಗಾಗಲೇ ಮದುವೆಯಾಗಿ, ಮಗು ಸಹ ಇದೆ. ಹೀಗಿದ್ದೂ ಶಿಡ್ಲಘಟ್ಟ ಮೂಲದ ಮಹಿಳೆ ಜೊತೆ ಅಕ್ರಮ ಸಂಬಂಧ ಇತ್ತು. ಈ ವಿಷಯ ಬಾಲಾಜಿ ಸಿಂಗ್ ಪತ್ನಿಗೆ ಗೊತ್ತಾಗಿ ಗಲಾಟೆಗಳು ಆಗಿವೆ.  ಇದರಿಂದ ಬಾಲಾಜಿ ಮಹಿಳೆಯಿಂದ ದೂರವಾಗಿ ಪತ್ನಿ ಮಕ್ಕಳ ಜತೆ ಅರಾಮ್ ಇರಲು ಮುಂದಾಗಿದ್ದ. ಆದ್ರೆ, ಅನೈತಿಕ ಸಂಬಂಧ ಹೊಂದಿದ್ದ ಮಹಿಳೆ ಮಾತ್ರ ಬಾಲಾಜಿಯನ್ನು ಬಿಡಲು ತಯಾರಿಲ್ಲ.ಬಾಲಾಜಿ ಸಿಂಗ್​ಗನ ಹನಿಟ್ರಾಪ್ ಮಾಡಿ ಬ್ಲಾಕ್ ಮೇಲ್ ಮಾಡ್ತಿದ್ದಳು ಎನ್ನಲಾಗಿದೆ. ಇದೇ ವಿಚಾರಕ್ಕೆ ಬಾಲಾಕಿ ಮನೆಯಲ್ಲಿ ಸಾವಿಗೆ ಶರಣಾಗಿದ್ದಾನೆ ಎನ್ನಲಾಗಿದೆ.

ಇದನ್ನೂ ಓದಿ: 40 ವರ್ಷದ ಅಂಕಲ್, 19ರ ಯುವತಿಯ ಪ್ರೀತಿ ಪ್ರೇಮ: ಪ್ರೇಮಲೋಕದಲ್ಲಿ ತೇಲಾಡುವಾಗಲೇ ನಡೆಯಿತು ಘನಘೋರ!

ಬಾಲಾಜಿ ಸಾವಿನ ಸುತ್ತ ಅನುಮಾನದ ಹುತ್ತ

ಬಾಲಾಜಿ ಸಿಂಗ್ ಜೊತೆ ಕೆಲವು ವರ್ಷಗಳಿಂದ ಆಕೆ ಪ್ರೀತಿ ಪ್ರೇಮ ಅಂತ ಇಬ್ಬರು ಅನೈತಿಕ ಸಂಬಂಧ ಇಟ್ಟುಕೊಂಡಿದ್ದು, ಈ ವಿಷಯ ಬಾಲಜಿ ಸಿಂಗ್ ಪತ್ನಿ, ತಾಯಿಗೆ ಗೊತ್ತಾಗಿದೆ. ಬಳಿಕ ಬಾಲಾಜಿ ಸಿಂಗ್​​ಗೆ ಬೈದು ಬುದ್ಧಿವಾದ ಹೇಳಿದ್ದಾರೆ. ಪತ್ನಿ ಮಕ್ಕಳು ಬೇಕಾ? ಇಲ್ಲಾ ಇಟ್ಟುಕೊಂಡವಳು ಬೇಕಾ? ಎಂದು ಪತ್ನಿ ಗಲಾಟೆ ಮಾಡಿದ್ದಳು. ಇದರಿಂದ ಬಾಲಾಜಿ ಸಿಂಗ್ ಪತ್ನಿ ಮಕ್ಕಳ ಜೊತೆ ಇರುತ್ತೇನೆಂದು ಹೇಳಿದ್ದ. ಆದ್ರೆ, ಕಡೆ ಪ್ರಿಯತಮೆ ಮಾತ್ರ ಬಾಲಾಜಿಯನ್ನು ಬಿಡಲು ಸಿದ್ಧಳಿಲ್ಲ. ಪದೇ ಪದೇ ಫೋನ್ ಮಾಡಿ ಕಿರುಕುಳ, ಬ್ಲ್ಯಾಕ್​ ಮೇಲ್ ಮಾಡುವುದನ್ನು ಶುರುಮಾಡಿದ್ದಳು. ಇದರಿಂದ ಬೇಸತ್ತು ಬಾಲಾಜಿ ಸಿಂಗ್ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪತ್ನಿ ಆರೋಪಿಸಿದ್ದಾಳೆ. ಆದ್ರೆ, ಸ್ವಲ್ಪ ಹೊತ್ತಿನ ಬಳಿಕ ಬಾಲಾಜಿ ಸಿಂಗ್ ಆತ್ಮಹತ್ಯೆಗೆ ಕಾರಣ ಗೊತ್ತಿಲ್ಲ ಎಂದು ಉಲ್ಟಾ ಹೇಳಿಕೆ ನೀಡಿದ್ದಾರೆ. ಇದರಿಂದ ಬಾಲಾಜಿ ಸಾವಿನ ಸುತ್ತ ಹಲವು ಅನುಮಾನಗಳು ವ್ಯಕ್ತವಾಗಿದ್ದು, ಈ ಸಂಬಂಧ ಪೊಲೀಸರು ಅನುಮಾನಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ಮೂರು ಹಸುಗಳ ಕಳ್ಳತನ, ಸಿಸಿಟಿವಿ ವಿಡಿಯೋ ವೈರಲ್
ಮೂರು ಹಸುಗಳ ಕಳ್ಳತನ, ಸಿಸಿಟಿವಿ ವಿಡಿಯೋ ವೈರಲ್
ದೇವೇಗೌಡರ ಈ ನಿರ್ಧಾರದ ಹಿಂದಿರುವ ರಾಜಕೀಯ ಲೆಕ್ಕಾಚಾರವೇನು ಗೊತ್ತಾ?
ದೇವೇಗೌಡರ ಈ ನಿರ್ಧಾರದ ಹಿಂದಿರುವ ರಾಜಕೀಯ ಲೆಕ್ಕಾಚಾರವೇನು ಗೊತ್ತಾ?
ರಾಯರ ಮಠಕ್ಕೂ ತಟ್ಟಿದ ಭಾಷಾ ವಿವಾದ: ತೆಲುಗು ಭಾಷಿಕರ ವಿರೋಧ
ರಾಯರ ಮಠಕ್ಕೂ ತಟ್ಟಿದ ಭಾಷಾ ವಿವಾದ: ತೆಲುಗು ಭಾಷಿಕರ ವಿರೋಧ
ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್
ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?