AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯ ಹಣ ಕದ್ದ ಖದೀಮರು: ಮಕ್ಕಳೊಂದಿಗೆ ಬಸ್​ ನಿಲ್ದಾಣದಲ್ಲೇ ಅಳುತ್ತಾ ಕುಳಿತ ತಾಯಿ

ಊರಿಗೆ ತೆರಳಲು ಬಸ್ ಹತ್ತುವಾಗ ಬಡ ಮಹಿಳೆಯ ಪರ್ಸ್‌ನಲ್ಲಿಟ್ಟಿದ್ದ ಹದಿನೈದು ಸಾವಿರ ರೂ. ಹಣವನ್ನು ಕಳ್ಳರು ಎಗರಿಸಿದ್ದಾರೆ. ಹಾಸನದ ಕೆಎಸ್​ಆರ್​ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಇತ್ತ ಹಣ ಕಳೆದುಕೊಂಡ ಮಹಿಳೆ ಊರಿಗೆ ಹೋಗದೆ ಬಸ್ ನಿಲ್ದಾಣದಲ್ಲಿ ತನ್ನ ಇಬ್ಬರು ಮಕ್ಕಳೊಂದಿಗೆ ಕಣ್ಣೀರು ಹಾಕಿದ್ದಾರೆ. ಬಳಿಕ ತಾಯಿ-ಮಕ್ಕಳ ಗೋಳಾಟ ಕಂಡು ಸ್ಥಳೀಯರು ನೆರವು ನೀಡಿದ್ದಾರೆ.

ಮಹಿಳೆಯ ಹಣ ಕದ್ದ ಖದೀಮರು: ಮಕ್ಕಳೊಂದಿಗೆ ಬಸ್​ ನಿಲ್ದಾಣದಲ್ಲೇ ಅಳುತ್ತಾ ಕುಳಿತ ತಾಯಿ
ಹಣ ಕಳೆದುಕೊಂಡ ಮಹಿಳೆ ಮತ್ತು ಮಕ್ಕಳು
ಮಂಜುನಾಥ ಕೆಬಿ
| Edited By: |

Updated on: Mar 28, 2024 | 9:58 PM

Share

ಹಾಸನ, ಮಾರ್ಚ್​ 28: ಸಾರ್ವಜನಿಕ ಸ್ಥಳಗಳಲ್ಲಿ ಮೈಯಲ್ಲಾ ಕಣ್ಣಾಗಿದ್ದರು ಸಾಕಾಗುವುದಿಲ್ಲ. ನಮ್ಮ ಹಣ (money) , ವಸ್ತುಗಳನ್ನು ಎಷ್ಟೇ ಎಚ್ಚರಿಕೆಯಿಂದ ಕಾಯಿದು ಕೊಂಡರು, ಮೈಮರೆತ ಯಾವುದೋ ಕ್ಷಣದಲ್ಲಿ ಕಳ್ಳತವಾಗಿ ಹೋಗಿರುತ್ತದೆ. ಸದ್ಯ ಇಂತಹದ್ದೇ ಒಂದು ಹಾಸನದ ಕೆಎಸ್​ಆರ್​ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಊರಿಗೆ ತೆರಳಲು ಬಸ್ ಹತ್ತುವಾಗ ಬಡ ಮಹಿಳೆಯ ಪರ್ಸ್‌ನಲ್ಲಿಟ್ಟಿದ್ದ ಹದಿನೈದು ಸಾವಿರ ರೂ. ಹಣವನ್ನು ಕಳ್ಳರು ಎಗರಿಸಿದ್ದಾರೆ. ಇತ್ತ ಹಣ ಕಳೆದುಕೊಂಡ ಮಹಿಳೆ ಊರಿಗೆ ಹೋಗದೆ ಬಸ್ ನಿಲ್ದಾಣದಲ್ಲಿ ತನ್ನ ಇಬ್ಬರು ಮಕ್ಕಳೊಂದಿಗೆ ಕಣ್ಣೀರು ಹಾಕಿದ್ದಾರೆ. ಬಳಿಕ ತಾಯಿ-ಮಕ್ಕಳ ಗೋಳಾಟ ಕಂಡು ಸ್ಥಳೀಯರು ನೆರವು ನೀಡಿದ್ದಾರೆ.

ಬಿಜಾಪುರ ಮೂಲದ ಭಾರತಿ ಹಣ ಕಳೆದುಕೊಂಡ ಮಹಿಳೆ. ಅರಕಲಗೂಡು ತಾಲ್ಲೂಕಿನ ರಾಮನಾಥಪುರದಲ್ಲಿ ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ. ಇಂದು ಬೆಳಿಗ್ಗೆ ಕುಂದಾಪುರದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ತನ್ನ ಇಬ್ಬರು ಮಕ್ಕಳನ್ನು ಕರೆದುಕೊಂಡು ಬರಲು ಹೋಗಿದ್ದರು.

ಇದನ್ನೂ ಓದಿ: ಪ್ರೀತಿಯ ನಾಯಿ ‘ಡಂಬೂ’ ನಾಪತ್ತೆ; ಊಟ-ನೀರು ಬಿಟ್ಟ ಕುಟುಂಬ!

ವಾಪಸ್ ಮಕ್ಕಳೊಂದಿಗೆ ರಾಮನಾಥಪುರಕ್ಕೆ ತೆರಳಲು ಬಸ್ ನಿಲ್ದಾಣಕ್ಕೆ ಬಂದು ಇಳಿದಿದ್ದ ಮಹಿಳೆ ರಾಮನಾಥಪುರಕ್ಕೆ ತೆರಳಲು KA-13, F-2091 ನಂಬರ್‌ನ ಬಸ್ ಹತ್ತುತ್ತಿದ್ದಾಗ ಹಣ ಕಳ್ಳತನವಾಗಿದೆ. ಕೂಲಿ ಮಾಡಿ ಸಂಗ್ರಹಿಸಿಟ್ಟಿದ್ದ ಹಣ ಕಳೆದುಕೊಂಡು ಮಹಿಳೆ ಕಂಗಾಲಾಗಿದ್ದು, ಬಸ್ ನಿಲ್ದಾಣದಲ್ಲೇ ತಾಯಿ ಮತ್ತು ಮಕ್ಕಳು ಅಳುತ್ತಾ ಕುಳಿತ್ತಿದ್ದರು. ನಂತರ ಸ್ಥಳೀಯರು ಸಹಾಯ ಮಾಡಿದ್ದಾರೆ.

ಗುಡಿಸಲಿನಲ್ಲಿ ಮಲಗಿದ್ದ 14 ತಿಂಗಳ ಮಗು ಕಳ್ಳತನ: ದೂರು ನೀಡಿದ ದಂಪತಿ

ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ, ಮಳಲಿ ಗ್ರಾಮದಲ್ಲಿ ಗುಡಿಸಲಿನಲ್ಲಿ ಮಲಗಿದ್ದ 14 ತಿಂಗಳ ಹೆಣ್ಣು ಮಗುವನ್ನು ದುಷ್ಟರು ಕದ್ದೊಯ್ದಿರುವಂತಹ ಘಟನೆ ನಡೆದಿದೆ. ಸಂಜು ಮತ್ತು ರೋಹಿತ್ ದಂಪತಿ ಪುತ್ರಿ ಹದಿನಾಲ್ಕು ತಿಂಗಳ ಹೆಣ್ಣು ಮಗು ಕೀರ್ತಿಯನ್ನ ಕಳ್ಳತನ ಮಾಡಲಾಗಿದೆ. ಮದ್ಯ ಪ್ರದೇಶ ಮೂಲದ ಸಂಜು ಮತ್ತು ರೋಹಿತ್ ದಂಪತಿ ಕೂಲಿ ಕೆಲಸಕ್ಕೆ ಬಂದಿದ್ದರು.

ಇದನ್ನೂ ಓದಿ: ಹಾಸನದಲ್ಲಿ ಮತ್ತೆ ಮುನ್ನಲೆಗೆ ಬಂದ ಹಿಜಾಬ್​​-ಕೇಸರಿ ಶಾಲು ಸಂಘರ್ಷ: ಕಾಲೇಜಿಗೆ ಹಿಜಾಬ್​ ಧರಿಸಿ ಬಂದ ವಿದ್ಯಾರ್ಥಿನಿಯರು

ಕಳೆದ ಮೂರು ತಿಂಗಳಿಂದ ಇಟ್ಟಿಗೆ ತಯಾರಿಕೆ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿ ಮನೆಯಲ್ಲಿ ಮಗು ಮಲಗಿಸಿ ನದಿಗೆ ಸ್ನಾನಕ್ಕೆ ನದಿಗೆ ತೆರಳಿದ್ದರು. ಈ ವೇಳೆ ಘಟನೆ ನಡೆದಿದೆ. ಮಗು ಕಳ್ಳತನದ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಸಕಲೇಶಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​