AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಜೆ ಹಳ್ಳಿ ಇನ್ಸ್​ಪೆಕ್ಟರ್ ವಿರುದ್ಧ ಅತ್ಯಾಚಾರ ಆರೋಪ: ಚಿನ್ನು, ಮುದ್ದು ಚಾಟಿಂಗ್ ವೈರಲ್

ಮದುವೆಯಾಗುವುದಾಗಿ ನಂಬಿಸಿ ಮಹಿಳೆ ಮೇಲೆ ಅತ್ಯಾಚಾರ ಎಸಗಿರುವ ಗಂಭೀರ ಆರೋಪ ಡಿಜೆ ಹಳ್ಳಿ ಇನ್ಸ್​ಪೆಕ್ಟರ್ ವಿರುದ್ಧ ಕೇಳಿಬಂದಿದೆ. 1 ವರ್ಷದಲ್ಲಿ 3 ಬಾರಿ ಲೈಂಗಿಕವಾಗಿ ಬಳಸಿಕೊಂಡಿದ್ದಾರೆಂದು ಸಂತ್ರಸ್ತೆ ಮಹಿಳೆ ಆರೋಪಿಸಿದ್ದು, ಈ ಸಂಬಂಧ ಇದೀಗ ಮಹಿಳೆ ಪೊಲೀಸ್ ಮಹಾನಿರ್ದೇಶಕರ ಮೊರೆ ಹೋಗಿದ್ದಾರೆ. ಹಾಗಾದ್ರೆ, ಸಂತ್ರಸ್ತೆ ಮಾಡಿರುವ ಆರೋಪದಲ್ಲೇನಿದೆ?

ಡಿಜೆ ಹಳ್ಳಿ  ಇನ್ಸ್​ಪೆಕ್ಟರ್ ವಿರುದ್ಧ  ಅತ್ಯಾಚಾರ ಆರೋಪ: ಚಿನ್ನು, ಮುದ್ದು ಚಾಟಿಂಗ್ ವೈರಲ್
Dj Halli Inspector Sunil
Shivaprasad B
| Edited By: |

Updated on:Oct 22, 2025 | 12:11 PM

Share

ಬೆಗಳೂರು, (ಅಕ್ಟೋಬರ್ 22): ಡಿ.ಜೆ.ಹಳ್ಳಿ ಪೊಲೀಸ್ ಠಾಣೆ (DJ halli Police Inspector) ಇನ್ಸ್​ಪೆಕ್ಟರ್​ ಸುನೀಲ್​ ವಿರುದ್ಧ ಅಲ್ಪಸಂಖ್ಯಾತ ಸಮುದಾಯದ ಮಹಿಳೆ ಅತ್ಯಾಚಾರ ಆರೋಪ ಮಾಡಿದ್ದಾರೆ.  ಬೆಂಗಳೂರಿನ ಡಿಜೆ ಹಳ್ಳಿ ಠಾಣೆಯ ಇನ್ಸ್​ಪೆಕ್ಟರ್ ರಿಜಿಸ್ಟರ್ ಸುನಿಲ್ ಅವರು ರಿಜಿಸ್ಟರ್ ಮದುವೆಯಾಗುವುದಾಗಿ ನಂಬಿಸಿದ್ದು, 1 ವರ್ಷದಲ್ಲಿ 3 ಬಾರಿ ಲೈಂಗಿಕವಾಗಿ ಬಳಸಿಕೊಂಡಿದ್ದಾರೆ.ಅಲ್ಲದೇ ಖಾಸಗಿ ಫೋಟೋ, ವಿಡಿಯೋ ಇಟ್ಟುಕೊಂಡು ನಮ್ಮ ವಿಚಾರ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಬೆದರಿಕೆ ಹಾಕಿದ್ದಾರೆ ಎಂದು ಮಹಿಳೆ ಆರೋಪಿಸಿದ್ದು, ನ್ಯಾಯಕ್ಕಾಗಿ ಪೊಲೀಸ್ ಮಹಾನಿರ್ದೇಶಕರ ಮೊರೆ ಹೋಗಿದ್ದಾರೆ.

ಡಿ.ಜೆ.ಹಳ್ಳಿ ಠಾಣೆ ಇನ್ಸ್​ಪೆಕ್ಟರ್​ ಸುನೀಲ್​ ಅವರು ಮದುವೆ ಆಗುವುದಾಗಿ ನಂಬಿಸಿ ಒಂದು ವರ್ಷದಲ್ಲಿ 3 ಬಾರಿ ಲೈಂಗಿಕವಾಗಿ ಬಳಸಿಕೊಂಡಿದ್ದಾರೆ. ಮನೆ‌ ಕೊಡುಸ್ತೀನಿ, ಬ್ಯೂಟಿ ಪಾರ್ಲರ್ ಕೊಡಿಸುವುದಾಗಿ ಹೇಳಿ ತಮ್ಮ ಮನೆ ಹಾಗೂ ಹೋಟೆಲ್​ ಗೆ‌ ಕರೆಸಿ ಅತ್ಯಾಚಾರವೆಸಗಿದ್ದಾರೆ. ಪ್ರತಿಬಾರಿ ವಿಡಿಯೋ ಕಾಲ್ ಮಾಡು ಎಂದು ಪೀಡಿಸುತ್ತಾರೆ. ಅಲ್ಲದೇ ಖಾಸಗಿ ಫೋಟೋ, ವಿಡಿಯೋ ಇಟ್ಟುಕೊಂಡಿದ್ದು, ನಮ್ಮ ವಿಚಾರ ಯಾರಿಗಾದರೂ ಹೇಳಿದ್ರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ನೋಡಿ: ಸಮಸ್ಯೆ ಹೇಳಿಕೊಂಡು ಬಂದ ಮಹಿಳೆಯನ್ನ ಬಲೆಗೆ ಬೀಳಿಸಿಕೊಂಡ ಇನ್ಸ್​​​ಪೆಕ್ಟರ್: ಪೊಲೀಸಪ್ಪನ ಕಾಮ ಪುರಾಣ ಬಟಾಬಯಲು

ಇನ್ನು ಇನ್ಸ್​ಪೆಕ್ಟರ್ ಸುನಿಲ್ ಹಾಗೂ ಸಂತ್ರಸ್ತೆಯ ನಡುವಿನ ವಾಟ್ಸಪ್ ಚಾಟಿಂಗ್ ಬಯಲಿಗೆ ಬಂದಿದ್ದು, ಇದರಲ್ಲಿ ಇಬ್ಬರು ಅನ್ಯೋನ್ಯವಾಗಿ ಚಿನ್ನು ಮುದ್ದು ಎಂದು ಮೆಸೇಜ್ ಮಾಡಿದ್ದಾರೆ. ಅಲ್ಲದೇ ವಿಡಿಯೋ ಹಾಗೂ ವಾಯ್ಸ್ ಕಾಲ್ ಮಾಡಿದ್ದಾರೆ.

ಸದ್ಯ ಸಂತ್ರಸ್ತೆ ಮಹಿಳೆ, ಡಿಜಿ ಹಳ್ಳಿ ಇನ್ಸ್​ಪೆಕ್ಟರ್ ಸುನಿಲ್ ವಿರುದ್ಧ ಪೊಲೀಸ್ ಮಹಾನಿರ್ದೇಶಕರ ಕಚೇರಿ ಮೆಟ್ಟಿಲೇರಿದ್ದು, ಮುಂದೆ ಈ ಪ್ರಕರಣ ಯಾವ ಹಂತಕ್ಕೆ ತಲುಪಲಿದೆ ಎನ್ನುವುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:47 am, Wed, 22 October 25

Follow Us
Shivaprasad B
Shivaprasad B
ಪ್ರತಿಷ್ಠಿತ ಅರ್ಥ್ ಪ್ರಶಸ್ತಿ ಗೆದ್ದ ಭಾರತೀಯ ವಿದ್ಯಾರ್ಥಿಗಳು
ಪ್ರತಿಷ್ಠಿತ ಅರ್ಥ್ ಪ್ರಶಸ್ತಿ ಗೆದ್ದ ಭಾರತೀಯ ವಿದ್ಯಾರ್ಥಿಗಳು
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬ
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬ
ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ
ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
‘ನಂಗೆ ನೀನು ಅಂದ್ರೆ ತುಂಬಾ ಇಷ್ಟ’; ಮನದಾಳದ ಮಾತು ಹೇಳಿದ ರಕ್ಷಿತಾ ಶೆಟ್ಟಿ
‘ನಂಗೆ ನೀನು ಅಂದ್ರೆ ತುಂಬಾ ಇಷ್ಟ’; ಮನದಾಳದ ಮಾತು ಹೇಳಿದ ರಕ್ಷಿತಾ ಶೆಟ್ಟಿ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!