AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಜೆ ಹಳ್ಳಿ ಇನ್ಸ್​ಪೆಕ್ಟರ್ ವಿರುದ್ಧ ಅತ್ಯಾಚಾರ ಆರೋಪ: ಚಿನ್ನು, ಮುದ್ದು ಚಾಟಿಂಗ್ ವೈರಲ್

ಮದುವೆಯಾಗುವುದಾಗಿ ನಂಬಿಸಿ ಮಹಿಳೆ ಮೇಲೆ ಅತ್ಯಾಚಾರ ಎಸಗಿರುವ ಗಂಭೀರ ಆರೋಪ ಡಿಜೆ ಹಳ್ಳಿ ಇನ್ಸ್​ಪೆಕ್ಟರ್ ವಿರುದ್ಧ ಕೇಳಿಬಂದಿದೆ. 1 ವರ್ಷದಲ್ಲಿ 3 ಬಾರಿ ಲೈಂಗಿಕವಾಗಿ ಬಳಸಿಕೊಂಡಿದ್ದಾರೆಂದು ಸಂತ್ರಸ್ತೆ ಮಹಿಳೆ ಆರೋಪಿಸಿದ್ದು, ಈ ಸಂಬಂಧ ಇದೀಗ ಮಹಿಳೆ ಪೊಲೀಸ್ ಮಹಾನಿರ್ದೇಶಕರ ಮೊರೆ ಹೋಗಿದ್ದಾರೆ. ಹಾಗಾದ್ರೆ, ಸಂತ್ರಸ್ತೆ ಮಾಡಿರುವ ಆರೋಪದಲ್ಲೇನಿದೆ?

ಡಿಜೆ ಹಳ್ಳಿ  ಇನ್ಸ್​ಪೆಕ್ಟರ್ ವಿರುದ್ಧ  ಅತ್ಯಾಚಾರ ಆರೋಪ: ಚಿನ್ನು, ಮುದ್ದು ಚಾಟಿಂಗ್ ವೈರಲ್
Dj Halli Inspector Sunil
ಶಿವಪ್ರಸಾದ್​ ಬಿ.
| Edited By: |

Updated on:Oct 22, 2025 | 12:11 PM

Share

ಬೆಗಳೂರು, (ಅಕ್ಟೋಬರ್ 22): ಡಿ.ಜೆ.ಹಳ್ಳಿ ಪೊಲೀಸ್ ಠಾಣೆ (DJ halli Police Inspector) ಇನ್ಸ್​ಪೆಕ್ಟರ್​ ಸುನೀಲ್​ ವಿರುದ್ಧ ಅಲ್ಪಸಂಖ್ಯಾತ ಸಮುದಾಯದ ಮಹಿಳೆ ಅತ್ಯಾಚಾರ ಆರೋಪ ಮಾಡಿದ್ದಾರೆ.  ಬೆಂಗಳೂರಿನ ಡಿಜೆ ಹಳ್ಳಿ ಠಾಣೆಯ ಇನ್ಸ್​ಪೆಕ್ಟರ್ ರಿಜಿಸ್ಟರ್ ಸುನಿಲ್ ಅವರು ರಿಜಿಸ್ಟರ್ ಮದುವೆಯಾಗುವುದಾಗಿ ನಂಬಿಸಿದ್ದು, 1 ವರ್ಷದಲ್ಲಿ 3 ಬಾರಿ ಲೈಂಗಿಕವಾಗಿ ಬಳಸಿಕೊಂಡಿದ್ದಾರೆ.ಅಲ್ಲದೇ ಖಾಸಗಿ ಫೋಟೋ, ವಿಡಿಯೋ ಇಟ್ಟುಕೊಂಡು ನಮ್ಮ ವಿಚಾರ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಬೆದರಿಕೆ ಹಾಕಿದ್ದಾರೆ ಎಂದು ಮಹಿಳೆ ಆರೋಪಿಸಿದ್ದು, ನ್ಯಾಯಕ್ಕಾಗಿ ಪೊಲೀಸ್ ಮಹಾನಿರ್ದೇಶಕರ ಮೊರೆ ಹೋಗಿದ್ದಾರೆ.

ಡಿ.ಜೆ.ಹಳ್ಳಿ ಠಾಣೆ ಇನ್ಸ್​ಪೆಕ್ಟರ್​ ಸುನೀಲ್​ ಅವರು ಮದುವೆ ಆಗುವುದಾಗಿ ನಂಬಿಸಿ ಒಂದು ವರ್ಷದಲ್ಲಿ 3 ಬಾರಿ ಲೈಂಗಿಕವಾಗಿ ಬಳಸಿಕೊಂಡಿದ್ದಾರೆ. ಮನೆ‌ ಕೊಡುಸ್ತೀನಿ, ಬ್ಯೂಟಿ ಪಾರ್ಲರ್ ಕೊಡಿಸುವುದಾಗಿ ಹೇಳಿ ತಮ್ಮ ಮನೆ ಹಾಗೂ ಹೋಟೆಲ್​ ಗೆ‌ ಕರೆಸಿ ಅತ್ಯಾಚಾರವೆಸಗಿದ್ದಾರೆ. ಪ್ರತಿಬಾರಿ ವಿಡಿಯೋ ಕಾಲ್ ಮಾಡು ಎಂದು ಪೀಡಿಸುತ್ತಾರೆ. ಅಲ್ಲದೇ ಖಾಸಗಿ ಫೋಟೋ, ವಿಡಿಯೋ ಇಟ್ಟುಕೊಂಡಿದ್ದು, ನಮ್ಮ ವಿಚಾರ ಯಾರಿಗಾದರೂ ಹೇಳಿದ್ರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ನೋಡಿ: ಸಮಸ್ಯೆ ಹೇಳಿಕೊಂಡು ಬಂದ ಮಹಿಳೆಯನ್ನ ಬಲೆಗೆ ಬೀಳಿಸಿಕೊಂಡ ಇನ್ಸ್​​​ಪೆಕ್ಟರ್: ಪೊಲೀಸಪ್ಪನ ಕಾಮ ಪುರಾಣ ಬಟಾಬಯಲು

ಇನ್ನು ಇನ್ಸ್​ಪೆಕ್ಟರ್ ಸುನಿಲ್ ಹಾಗೂ ಸಂತ್ರಸ್ತೆಯ ನಡುವಿನ ವಾಟ್ಸಪ್ ಚಾಟಿಂಗ್ ಬಯಲಿಗೆ ಬಂದಿದ್ದು, ಇದರಲ್ಲಿ ಇಬ್ಬರು ಅನ್ಯೋನ್ಯವಾಗಿ ಚಿನ್ನು ಮುದ್ದು ಎಂದು ಮೆಸೇಜ್ ಮಾಡಿದ್ದಾರೆ. ಅಲ್ಲದೇ ವಿಡಿಯೋ ಹಾಗೂ ವಾಯ್ಸ್ ಕಾಲ್ ಮಾಡಿದ್ದಾರೆ.

ಸದ್ಯ ಸಂತ್ರಸ್ತೆ ಮಹಿಳೆ, ಡಿಜಿ ಹಳ್ಳಿ ಇನ್ಸ್​ಪೆಕ್ಟರ್ ಸುನಿಲ್ ವಿರುದ್ಧ ಪೊಲೀಸ್ ಮಹಾನಿರ್ದೇಶಕರ ಕಚೇರಿ ಮೆಟ್ಟಿಲೇರಿದ್ದು, ಮುಂದೆ ಈ ಪ್ರಕರಣ ಯಾವ ಹಂತಕ್ಕೆ ತಲುಪಲಿದೆ ಎನ್ನುವುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:47 am, Wed, 22 October 25

Follow Us
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ
ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ
ರಾಜೀನಾಮೆ ಬೆದರಿಕೆ ಹಾಕಿದವರ ಮಾಹಿತಿ ಕೋರಿದ ಕಾಂಗ್ರೆಸ್ ಹೈಕಮಾಂಡ್
ರಾಜೀನಾಮೆ ಬೆದರಿಕೆ ಹಾಕಿದವರ ಮಾಹಿತಿ ಕೋರಿದ ಕಾಂಗ್ರೆಸ್ ಹೈಕಮಾಂಡ್